Advertisement
ಸುದ್ದಿಗಳು

#Culture | ಎತ್ತ ಸಾಗುತ್ತಿದೆ ನಮ್ಮ ಸಂಸ್ಕೃತಿ | ಬಿಂದಿ ಧರಿಸಿ ಶಾಲೆಗೆ ಹೋಗಿದ್ದೇ ತಪ್ಪಾಯ್ತು…! | ಮನನೊಂದು ಪ್ರಾಣನೇ ಕಳಕೊಂಡ್ಳು ವಿದ್ಯಾರ್ಥಿನಿ..! |

Share
ಭಾರತ ಸಂಸ್ಕೃತಿಯ ಸಂಪತ್ಭರಿತ ದೇಶ. ನಮ್ಮ ದೇಶದಲ್ಲಿ ಹಿಂದೂ ಹೆಣ್ಣು ಮಕ್ಕಳು ಹಣೆಗೆ ಕುಂಕುಮ, ಮುಡಿಗೆ ಹೂ, ಕೈಗೆ ಬಳೆ ಧರಿಸಿ ಓಡಾಡುತ್ತಿದ್ರೆ ಅದೇ ಭೂಷಣ. ದಿನಕಳೆದಂತೆ ಇದು ಪೆಟ್ಟಿಗೆ ಸೇರಿದವು. ಪಾಶ್ಚಿಮಾತ್ಯ ಸಂಸ್ಕೃತಿ ಭೂತ ಹೊಕ್ಕಿತು. ಈಗ ನಮ್ಮ ದೇಶದ ಕೆಲ ಸಂಸ್ಥೆಗಳು, ಶಾಲಾ, ಕಾಲೇಜುಗಳೇ ಇದಕ್ಕೆ ಮುಳುವಾಗಿವೆ. ಸಮವಸ್ತ್ರ ಅನ್ನೋ ಹೆಸರಿನಲ್ಲಿ ನಮ್ಮ ಸಂಸ್ಕೃತಿಗೆ ಕುತ್ತು ತರುತ್ತಿದ್ದಾರೆ. ಸಮವಸ್ತ್ರ ಧರಿಸಿದ್ರೆ ವಿದ್ಯಾರ್ಥಿನಿಯರು ಬಳೆ, ಬಿಂದಿ, ಹೂವು ಇಡುವಂತಿಲ್ಲ. ಇದು ನಮ್ಮ ಈಗಿನ ಶಾಲೆಗಳು ನಮ್ಮ ಮಕ್ಕಳಿಗೆ ನೀಡುವ ಸಂಸ್ಕೃತಿಯ ಪಾಠ.
ಎಂಥ ವಿಪರ್ಯಾಸ ನೋಡಿ, ಇಲ್ಲೊಬ್ಬ ಶಿಕ್ಷಕಿ ವಿದ್ಯಾರ್ಥಿನಿಯೊಬ್ಬಳು ಹಣೆಗೆ ಬಿಂದಿಧರಿಸಿ ಶಾಲೆಗೆ ಹೋಗಿದ್ದಕ್ಕೆ ವಿದ್ಯಾರ್ಥಿನಿಯನ್ನು ಥಳಿಸಿದ್ದ ಘಟನೆ ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ ನಡೆದಿದೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆಯ ಕುರಿತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ  ಅಧ್ಯಕ್ಷ ಪ್ರಿಯಾಂಕ್ ಕಾನೂಂಗೊ, ವಿದ್ಯಾರ್ಥಿನಿಯೊಬ್ಬಳು ಹಣೆಗೆ ಬಿಂದಿ ಧರಿಸಿ ಶಾಲೆಗೆ ಹೋಗಿದ್ದಕ್ಕೆ ಆಕೆಯನ್ನು ಥಳಿಸಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. ಅಲ್ಲದೇ ಘಟನೆಯ ಕುರಿತು ತನಿಖೆ ನಡೆಸಲು ಎನ್‌ಸಿಪಿಸಿಆರ್ ತಂಡವು ಧನ್‌ಬಾದ್‌ಗೆ ತೆರಳಲಿದೆ ಎಂದು ಮಾಹಿತಿ ನೀಡಿದ್ದಾರೆ.

Advertisement
Advertisement

ಧನ್‌ಬಾದ್‌ನ ಟೆತುಲ್ಮರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೃತ ವಿದ್ಯಾರ್ಥಿನಿಯ ಪೋಷಕರು ಹಾಗೂ ಸ್ಥಳೀಯರು ಶಾಲಾ ಆಡಳಿತ ಮಂಡಳಿಯ ವಿರುದ್ಧ ಪ್ರತಿಭಟನೆ ನಡೆಸಿ, ಪೊಲೀಸರು ತನಿಖೆ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಘಟನೆ ಬೆಳಕಿಗೆ ಬಂದ ಬಳಿಕ ಆರೋಪಿ ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಜಾರ್ಖಂಡ್‌ನ ಧನ್‌ಬಾದ್ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಉತ್ತಮ್ ಮುಖರ್ಜಿ ತಿಳಿಸಿದ್ದಾರೆ.

Advertisement

ಈ ಕುರಿತು ಮುಖರ್ಜಿ ಟ್ವೀಟ್ ಮಾಡಿದ್ದು, ಇದು ಗಂಭೀರ ವಿಷಯವಾಗಿದ್ದು, ಶಾಲೆಯು ಸಿಬಿಎಸ್‌ಇ ಮಂಡಳಿಗೆ ಸಂಯೋಜಿತವಾಗಿಲ್ಲ. ನಾನು ಜಿಲ್ಲಾ ಶಿಕ್ಷಣ ಅಧಿಕಾರಿಗೆ ಈ ಬಗ್ಗೆ ತಿಳಿಸಿದ್ದು, ಮೃತ ವಿದ್ಯಾರ್ಥಿನಿಯ ಕುಟುಂಬವನ್ನು ಭೇಟಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |

ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.

5 hours ago

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

2 days ago

ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ | ಗೋಕೃಪಾಮೃತ ಇರುವಾಗ ಕ್ರಿಮಿನಾಶಕಗಳ ಹಂಗೇಕೆ?

ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..

2 days ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

2 days ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

2 days ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

2 days ago