Advertisement
ಸುದ್ದಿಗಳು

ಚಿನ್ನಕ್ಕಿಂತಲೂ ಅಮೂಲ್ಯವಾದ ಲೋಹದ ಬಗ್ಗೆ ನಿಮಗೆ ತಿಳಿದಿದೆಯಾ

Share

ಬಹುತೇಕ ಮಂದಿಗೆ ಚಿನ್ನವೇ ದುಬಾರಿ ವಸ್ತು ಅಂತ ತಿಳಿದಿದೆ. ಆದರೆ  ವಿಶ್ವದ ಅತ್ಯಂತ ದುಬಾರಿ ಚಿನ್ನ ಅಲ್ಲ, ಕ್ಯಾಲಿಫೋರ್ನಿಯಮ್ ಅನ್ನುವ ಲೋಹ.

Advertisement

ಕ್ಯಾಲಿಫೋರ್ನಿಯಮ್ ಅಂದರೆ ಕೃತಕ ವಿಕಿರಣಶೀಲ ರಾಸಾಯನಿಕ ಅಂಶವಾಗಿದೆ. ಈ ಲೋಹವು ಸಂಪೂರ್ಣವಾಗಿ ಮಾನವರಿಂದ ಸೃಷ್ಟಿಸಲ್ಪಟ್ಟ ಲೋಹವಾಗಿದ್ದು, 1950 ರಲ್ಲಿ ಬಕ್ರ್ಲಿಯ ಕ್ಯಾಲಿಪೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕರು ಕಂಡುಹಿಡಿದರು. ಆದ್ದರಿಂದ ಈ ಸಂಶೋಧನೆ ನಡೆದ ವಿಶ್ವವಿದ್ಯಾಲಯದ ಹೆಸರನ್ನು ಕ್ಯಾಲಿಪೋರ್ನಿಯಮ್ ಎಂದು ಹೆಸರಿಸಲಾಗಿದೆ.

ಇದು ಭೂಮಿಯ ಮೇಲೆ ನೈಸರ್ಗಿಕವಾಗಿ ಸಿಗುವಂತಹದಲ್ಲ ಬದಲಾಗಿ ಸಂಪೂರ್ಣವಾಗಿ ಸಂಶ್ಲೇಷಿತ ಅಂಶವಾಗಿದೆ. ಆದರೆ ಇದರ ಉತ್ಪಾದನಾ ಪ್ರಕ್ರಿಯೆಯು ತುಂಬಾ ಸಂಕೀರ್ಣವಾಗಿದೆ. ಪ್ರಪಂಚದಾದ್ಯಂತ ಇದರ ಪೂರೈಕೆಯು ತುಂಬ ಕಡಿಮೆ ಆಗಿರುವುದರಿಂದ ಇದರ ಬೆಲೆ ತುಂಬಾ ದುಬಾರಿಯಾಗಿದೆ. ಒಂದು ಗ್ರಾಂ ಕ್ಯಾಲಿಫೋರ್ನಿಯಂ ಲೋಹದ ಬೆಲೆ 27 ಮಿಲಿಯನ್ ಡಾಲರ್ ಅಂದರೆ ಸುಮಾರು 239 ಕೋಟಿ ರೂಪಾಯಿಗಳು. ಅಂದರೆ ಒಂದು ಗ್ರಾಂ ಕ್ಯಾಲಿಫೋರ್ನಿಯವನ್ನು ಖರೀದಿಸುವ ಬೆಲೆಯಲ್ಲಿ 200 ಕಿಲೋಗ್ರಾಂಗಳಷ್ಟು ಚಿನ್ನವನ್ನು ಖರೀದಿಸಬಹುದು.

ಈ ಕ್ಯಾಲಿಫೋರ್ನಿಯಾವನ್ನು ಎಲ್ಲೆಲ್ಲಿ ಬಳಸಲಾಗುತ್ತದೆ ಎಂದು ನೋಡಿದರೆ ಪ್ರಮುಖವಾಗಿ ಪರಮಾಣು ರಿಯಾಕ್ಟರ್ ಗಳಲ್ಲಿ ಬಳಸಲಾಗುತ್ತದೆ. ಆದ್ದರಿಂದ ಈ ಲೋಹವು ಪರಮಾಣು ಉದ್ಯಮಕ್ಕೆ ಒಂದು ಪ್ರಮುಖ ಅಂಶವಾಗಿದೆ. ಇದನ್ನು ಸಣ್ಣ ಮಾಡ್ಯುಲರ್ ರಿಯಾಕ್ಟರ್ ಗಳು, ವೈದ್ಯಕೀಯ ಚಿಕಿತ್ಸೆಗಳು, ಬಾಹ್ಯಾಕಾಶ ಪರಿಶೋಧನೆ ಮತ್ತು ತಾಯ್ನಾಡಿನ ಭದ್ರತೆಯಲ್ಲಿಯೂ ಬಳಸಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

6 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

7 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

7 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

7 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

7 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

7 hours ago