ದೇಶದಾದ್ಯಂತ ಕಾಳುಮೆಣಸಿಗೆ ಬಂಗಾರದ ಬೆಲೆ |

July 1, 2024
10:45 AM

ವರ್ಷವಿಡೀ ತಾವು ಬೆಳೆದ ಬೆಲೆ(Rate) ಕೈಗೆ ಬರಲು ರೈತರು(Farmer) ಇನ್ನಿಲ್ಲದ ಕಷ್ಟ ಪಡುತ್ತಾರೆ. ಅದೃಷ್ಟ ಚೆನ್ನಾಗಿದ್ದರೆ ಮಾತ್ರ ಫಸಲು(Crop) ಕೈಗೆ ಬಂದಾಗ ಅದಕ್ಕೆ ತಕ್ಕ ರೇಟು ಸಿಗುತ್ತದೆ. ಈ ಬಾರಿ ಮೆಣಸಿನ ಕಾಳು ಬೆಳೆಗಾರರಿಗೆ ಅದೃಷ್ಟ ಖುಲಾಯಿಸಿದೆ. ದಿನದಿಂದ ದಿನಕ್ಕೆ ದೇಶಿಯ ಮಾರುಕಟ್ಟೆಯಲ್ಲಿ(Market) ಕರಿ ಮೆಣಸಿನ (Black Pepper) ಬೆಲೆ(Price) ಗಗನಕ್ಕೇರುತ್ತಿದೆ. ಭಾರತದೆಲ್ಲೆಡೆ ಕಾಳುಮೆಣಸಿನ ದರ ಗಗನಕ್ಕೆ ಜಿಗಿದಿದೆ. ಚಿಕ್ಕಮಗಳೂರು(Chikkamagaluru) ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಂತೂ ಧಾರಣೆಯು ಕ್ವಿಂಟಾಲ್‌ಗೆ 88,000 ರೂಪಾಯಿ ಆಗಿದ್ದು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಮಲೆನಾಡ ಚಿಕ್ಕಮಗಳೂರು ಭಾಗಕ್ಕೆ ಶಿರಸಿ ಹಾಗೂ ಸುತ್ತಮುತ್ತಲಿಂದ ಆಮದು ಮಾಡಿಕೊಳ್ಳಲಾಗುತ್ತಿದೆ.

Advertisement

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ವಿಘ್ನೇಶ್ ಭಟ್ ಹೊಸ್ತೋಟ ಅವರು ತಮ್ಮ ಅಡಿಕೆ ತೋಟದಲ್ಲಿ ಕಳೆದ 15 ವರ್ಷದಿಂದ ಕಾಳುಮೆಣಸಿನ ಕೃಷಿ ಮಾಡುತ್ತಿದ್ದಾರೆ. ಖ್ಯಾತ ಕೃಷಿ ತಜ್ಞ ವಿಎಂ ಹೆಗಡೆಯವರ ಸಲಹೆಯೊಂದಿಗೆ ಕೃಷಿ ಮಾಡುತ್ತಿರುವ ಇವರು ಬಾರೆಯ ಹೊಸ್ತೋಟದಲ್ಲಿ ತಮ್ಮ‌ ಮನೆ ಬಳಿ ಉಪಬೆಳೆಯಾಗಿ ಕಾಳುಮೆಣಸನ್ನು ಬೆಳೆದಿದ್ದಾರೆ.

ವಿವಿಧ ತಳಿಯ ಕಾಳುಮೆಣಸು
8-10 ವಿಧದ ಕಾಳುಮೆಣಸು ಇವರಲ್ಲಿ ಇವೆ ಅದರಲ್ಲಿ ಪಣಿಯೂರು-1, ಪಣಿಯೂರು-2, ನೀಲಮುಂಡಿ, ಶ್ರೀಕರ, ಶುಭಕರ ಸೇರಿದಂತೆ ಹಲವು ವಿಧದ ಕಾಳುಮೆಣಸು ಇವರಲ್ಲಿವೆ, ಕೇವಲ 1000 ಬಳ್ಳಿಗಳನ್ನು ಹೊಂದಿರುವ ಇವರು ಪ್ರತೀ ವರ್ಷ ಬರೊಬ್ಬರಿ 2.5 ಟನ್ ನಷ್ಟು ಇಳುವರಿಯನ್ನು ಪಡೆಯುತ್ತಿದ್ದಾರೆ. ಜೂನ್ ತಿಂಗಳಲ್ಲಿ ಟ್ರೆಂಚಿಂಗ್ ಮಾಡಿ ಲೈಟೆಕ್ಸ್ ಹಾಕಿ ನಂತರ ಪ್ಲ್ಯಾಸ್ಟಿಕ್ ಹೊದಿಕೆ ಹಾಕಿಡುವ ಕಾರಣ ಭಾರೀ ಮಳೆಯಲ್ಲೂ ಭರ್ಜರಿ ಫಸಲು ದೊರಕುತ್ತಿದೆ. 6 ಲಕ್ಷ ಖರ್ಚಿಗೆ ಸದ್ಯದ ಮಟ್ಟಿಗೆ 15 ರಿಂದ 20 ಲಕ್ಷ ವಹಿವಾಟು ನಡೆಸುವ ನಿರೀಕ್ಷೆಯಲ್ಲಿದ್ದಾರೆ. ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ದೇಶದಲ್ಲಿ ಕಾಳುಮೆಣಸಿನ ಬಳಕೆ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಹೊಸ ಪೀಳಿಗೆಯ ಆಹಾರ ಖಾದ್ಯಗಳಲ್ಲಿ ಕಾಳುಮೆಣಸು ಪ್ರಮುಖ ಪಾತ್ರ ವಹಿಸಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ
February 19, 2026
7:55 AM
by: ಮಿರರ್‌ ಡೆಸ್ಕ್
ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ
February 19, 2026
7:00 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ
February 19, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ
February 18, 2026
10:36 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror