MIRROR FOCUS

ದೇಶದಾದ್ಯಂತ ಕಾಳುಮೆಣಸಿಗೆ ಬಂಗಾರದ ಬೆಲೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವರ್ಷವಿಡೀ ತಾವು ಬೆಳೆದ ಬೆಲೆ(Rate) ಕೈಗೆ ಬರಲು ರೈತರು(Farmer) ಇನ್ನಿಲ್ಲದ ಕಷ್ಟ ಪಡುತ್ತಾರೆ. ಅದೃಷ್ಟ ಚೆನ್ನಾಗಿದ್ದರೆ ಮಾತ್ರ ಫಸಲು(Crop) ಕೈಗೆ ಬಂದಾಗ ಅದಕ್ಕೆ ತಕ್ಕ ರೇಟು ಸಿಗುತ್ತದೆ. ಈ ಬಾರಿ ಮೆಣಸಿನ ಕಾಳು ಬೆಳೆಗಾರರಿಗೆ ಅದೃಷ್ಟ ಖುಲಾಯಿಸಿದೆ. ದಿನದಿಂದ ದಿನಕ್ಕೆ ದೇಶಿಯ ಮಾರುಕಟ್ಟೆಯಲ್ಲಿ(Market) ಕರಿ ಮೆಣಸಿನ (Black Pepper) ಬೆಲೆ(Price) ಗಗನಕ್ಕೇರುತ್ತಿದೆ. ಭಾರತದೆಲ್ಲೆಡೆ ಕಾಳುಮೆಣಸಿನ ದರ ಗಗನಕ್ಕೆ ಜಿಗಿದಿದೆ. ಚಿಕ್ಕಮಗಳೂರು(Chikkamagaluru) ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಂತೂ ಧಾರಣೆಯು ಕ್ವಿಂಟಾಲ್‌ಗೆ 88,000 ರೂಪಾಯಿ ಆಗಿದ್ದು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಮಲೆನಾಡ ಚಿಕ್ಕಮಗಳೂರು ಭಾಗಕ್ಕೆ ಶಿರಸಿ ಹಾಗೂ ಸುತ್ತಮುತ್ತಲಿಂದ ಆಮದು ಮಾಡಿಕೊಳ್ಳಲಾಗುತ್ತಿದೆ.

Advertisement

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ವಿಘ್ನೇಶ್ ಭಟ್ ಹೊಸ್ತೋಟ ಅವರು ತಮ್ಮ ಅಡಿಕೆ ತೋಟದಲ್ಲಿ ಕಳೆದ 15 ವರ್ಷದಿಂದ ಕಾಳುಮೆಣಸಿನ ಕೃಷಿ ಮಾಡುತ್ತಿದ್ದಾರೆ. ಖ್ಯಾತ ಕೃಷಿ ತಜ್ಞ ವಿಎಂ ಹೆಗಡೆಯವರ ಸಲಹೆಯೊಂದಿಗೆ ಕೃಷಿ ಮಾಡುತ್ತಿರುವ ಇವರು ಬಾರೆಯ ಹೊಸ್ತೋಟದಲ್ಲಿ ತಮ್ಮ‌ ಮನೆ ಬಳಿ ಉಪಬೆಳೆಯಾಗಿ ಕಾಳುಮೆಣಸನ್ನು ಬೆಳೆದಿದ್ದಾರೆ.

ವಿವಿಧ ತಳಿಯ ಕಾಳುಮೆಣಸು
8-10 ವಿಧದ ಕಾಳುಮೆಣಸು ಇವರಲ್ಲಿ ಇವೆ ಅದರಲ್ಲಿ ಪಣಿಯೂರು-1, ಪಣಿಯೂರು-2, ನೀಲಮುಂಡಿ, ಶ್ರೀಕರ, ಶುಭಕರ ಸೇರಿದಂತೆ ಹಲವು ವಿಧದ ಕಾಳುಮೆಣಸು ಇವರಲ್ಲಿವೆ, ಕೇವಲ 1000 ಬಳ್ಳಿಗಳನ್ನು ಹೊಂದಿರುವ ಇವರು ಪ್ರತೀ ವರ್ಷ ಬರೊಬ್ಬರಿ 2.5 ಟನ್ ನಷ್ಟು ಇಳುವರಿಯನ್ನು ಪಡೆಯುತ್ತಿದ್ದಾರೆ. ಜೂನ್ ತಿಂಗಳಲ್ಲಿ ಟ್ರೆಂಚಿಂಗ್ ಮಾಡಿ ಲೈಟೆಕ್ಸ್ ಹಾಕಿ ನಂತರ ಪ್ಲ್ಯಾಸ್ಟಿಕ್ ಹೊದಿಕೆ ಹಾಕಿಡುವ ಕಾರಣ ಭಾರೀ ಮಳೆಯಲ್ಲೂ ಭರ್ಜರಿ ಫಸಲು ದೊರಕುತ್ತಿದೆ. 6 ಲಕ್ಷ ಖರ್ಚಿಗೆ ಸದ್ಯದ ಮಟ್ಟಿಗೆ 15 ರಿಂದ 20 ಲಕ್ಷ ವಹಿವಾಟು ನಡೆಸುವ ನಿರೀಕ್ಷೆಯಲ್ಲಿದ್ದಾರೆ. ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ದೇಶದಲ್ಲಿ ಕಾಳುಮೆಣಸಿನ ಬಳಕೆ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಹೊಸ ಪೀಳಿಗೆಯ ಆಹಾರ ಖಾದ್ಯಗಳಲ್ಲಿ ಕಾಳುಮೆಣಸು ಪ್ರಮುಖ ಪಾತ್ರ ವಹಿಸಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

4 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

5 hours ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

9 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago