Advertisement
MIRROR FOCUS

ದೇಶದಾದ್ಯಂತ ಕಾಳುಮೆಣಸಿಗೆ ಬಂಗಾರದ ಬೆಲೆ |

Share

ವರ್ಷವಿಡೀ ತಾವು ಬೆಳೆದ ಬೆಲೆ(Rate) ಕೈಗೆ ಬರಲು ರೈತರು(Farmer) ಇನ್ನಿಲ್ಲದ ಕಷ್ಟ ಪಡುತ್ತಾರೆ. ಅದೃಷ್ಟ ಚೆನ್ನಾಗಿದ್ದರೆ ಮಾತ್ರ ಫಸಲು(Crop) ಕೈಗೆ ಬಂದಾಗ ಅದಕ್ಕೆ ತಕ್ಕ ರೇಟು ಸಿಗುತ್ತದೆ. ಈ ಬಾರಿ ಮೆಣಸಿನ ಕಾಳು ಬೆಳೆಗಾರರಿಗೆ ಅದೃಷ್ಟ ಖುಲಾಯಿಸಿದೆ. ದಿನದಿಂದ ದಿನಕ್ಕೆ ದೇಶಿಯ ಮಾರುಕಟ್ಟೆಯಲ್ಲಿ(Market) ಕರಿ ಮೆಣಸಿನ (Black Pepper) ಬೆಲೆ(Price) ಗಗನಕ್ಕೇರುತ್ತಿದೆ. ಭಾರತದೆಲ್ಲೆಡೆ ಕಾಳುಮೆಣಸಿನ ದರ ಗಗನಕ್ಕೆ ಜಿಗಿದಿದೆ. ಚಿಕ್ಕಮಗಳೂರು(Chikkamagaluru) ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಂತೂ ಧಾರಣೆಯು ಕ್ವಿಂಟಾಲ್‌ಗೆ 88,000 ರೂಪಾಯಿ ಆಗಿದ್ದು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಮಲೆನಾಡ ಚಿಕ್ಕಮಗಳೂರು ಭಾಗಕ್ಕೆ ಶಿರಸಿ ಹಾಗೂ ಸುತ್ತಮುತ್ತಲಿಂದ ಆಮದು ಮಾಡಿಕೊಳ್ಳಲಾಗುತ್ತಿದೆ.

Advertisement
Advertisement

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ವಿಘ್ನೇಶ್ ಭಟ್ ಹೊಸ್ತೋಟ ಅವರು ತಮ್ಮ ಅಡಿಕೆ ತೋಟದಲ್ಲಿ ಕಳೆದ 15 ವರ್ಷದಿಂದ ಕಾಳುಮೆಣಸಿನ ಕೃಷಿ ಮಾಡುತ್ತಿದ್ದಾರೆ. ಖ್ಯಾತ ಕೃಷಿ ತಜ್ಞ ವಿಎಂ ಹೆಗಡೆಯವರ ಸಲಹೆಯೊಂದಿಗೆ ಕೃಷಿ ಮಾಡುತ್ತಿರುವ ಇವರು ಬಾರೆಯ ಹೊಸ್ತೋಟದಲ್ಲಿ ತಮ್ಮ‌ ಮನೆ ಬಳಿ ಉಪಬೆಳೆಯಾಗಿ ಕಾಳುಮೆಣಸನ್ನು ಬೆಳೆದಿದ್ದಾರೆ.

ವಿವಿಧ ತಳಿಯ ಕಾಳುಮೆಣಸು
8-10 ವಿಧದ ಕಾಳುಮೆಣಸು ಇವರಲ್ಲಿ ಇವೆ ಅದರಲ್ಲಿ ಪಣಿಯೂರು-1, ಪಣಿಯೂರು-2, ನೀಲಮುಂಡಿ, ಶ್ರೀಕರ, ಶುಭಕರ ಸೇರಿದಂತೆ ಹಲವು ವಿಧದ ಕಾಳುಮೆಣಸು ಇವರಲ್ಲಿವೆ, ಕೇವಲ 1000 ಬಳ್ಳಿಗಳನ್ನು ಹೊಂದಿರುವ ಇವರು ಪ್ರತೀ ವರ್ಷ ಬರೊಬ್ಬರಿ 2.5 ಟನ್ ನಷ್ಟು ಇಳುವರಿಯನ್ನು ಪಡೆಯುತ್ತಿದ್ದಾರೆ. ಜೂನ್ ತಿಂಗಳಲ್ಲಿ ಟ್ರೆಂಚಿಂಗ್ ಮಾಡಿ ಲೈಟೆಕ್ಸ್ ಹಾಕಿ ನಂತರ ಪ್ಲ್ಯಾಸ್ಟಿಕ್ ಹೊದಿಕೆ ಹಾಕಿಡುವ ಕಾರಣ ಭಾರೀ ಮಳೆಯಲ್ಲೂ ಭರ್ಜರಿ ಫಸಲು ದೊರಕುತ್ತಿದೆ. 6 ಲಕ್ಷ ಖರ್ಚಿಗೆ ಸದ್ಯದ ಮಟ್ಟಿಗೆ 15 ರಿಂದ 20 ಲಕ್ಷ ವಹಿವಾಟು ನಡೆಸುವ ನಿರೀಕ್ಷೆಯಲ್ಲಿದ್ದಾರೆ. ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ದೇಶದಲ್ಲಿ ಕಾಳುಮೆಣಸಿನ ಬಳಕೆ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಹೊಸ ಪೀಳಿಗೆಯ ಆಹಾರ ಖಾದ್ಯಗಳಲ್ಲಿ ಕಾಳುಮೆಣಸು ಪ್ರಮುಖ ಪಾತ್ರ ವಹಿಸಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

21 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

22 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

22 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

22 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

23 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

23 hours ago