Advertisement
MIRROR FOCUS

ದೇಶದಾದ್ಯಂತ ಕಾಳುಮೆಣಸಿಗೆ ಬಂಗಾರದ ಬೆಲೆ |

Share

ವರ್ಷವಿಡೀ ತಾವು ಬೆಳೆದ ಬೆಲೆ(Rate) ಕೈಗೆ ಬರಲು ರೈತರು(Farmer) ಇನ್ನಿಲ್ಲದ ಕಷ್ಟ ಪಡುತ್ತಾರೆ. ಅದೃಷ್ಟ ಚೆನ್ನಾಗಿದ್ದರೆ ಮಾತ್ರ ಫಸಲು(Crop) ಕೈಗೆ ಬಂದಾಗ ಅದಕ್ಕೆ ತಕ್ಕ ರೇಟು ಸಿಗುತ್ತದೆ. ಈ ಬಾರಿ ಮೆಣಸಿನ ಕಾಳು ಬೆಳೆಗಾರರಿಗೆ ಅದೃಷ್ಟ ಖುಲಾಯಿಸಿದೆ. ದಿನದಿಂದ ದಿನಕ್ಕೆ ದೇಶಿಯ ಮಾರುಕಟ್ಟೆಯಲ್ಲಿ(Market) ಕರಿ ಮೆಣಸಿನ (Black Pepper) ಬೆಲೆ(Price) ಗಗನಕ್ಕೇರುತ್ತಿದೆ. ಭಾರತದೆಲ್ಲೆಡೆ ಕಾಳುಮೆಣಸಿನ ದರ ಗಗನಕ್ಕೆ ಜಿಗಿದಿದೆ. ಚಿಕ್ಕಮಗಳೂರು(Chikkamagaluru) ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಂತೂ ಧಾರಣೆಯು ಕ್ವಿಂಟಾಲ್‌ಗೆ 88,000 ರೂಪಾಯಿ ಆಗಿದ್ದು ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಮಲೆನಾಡ ಚಿಕ್ಕಮಗಳೂರು ಭಾಗಕ್ಕೆ ಶಿರಸಿ ಹಾಗೂ ಸುತ್ತಮುತ್ತಲಿಂದ ಆಮದು ಮಾಡಿಕೊಳ್ಳಲಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ವಿಘ್ನೇಶ್ ಭಟ್ ಹೊಸ್ತೋಟ ಅವರು ತಮ್ಮ ಅಡಿಕೆ ತೋಟದಲ್ಲಿ ಕಳೆದ 15 ವರ್ಷದಿಂದ ಕಾಳುಮೆಣಸಿನ ಕೃಷಿ ಮಾಡುತ್ತಿದ್ದಾರೆ. ಖ್ಯಾತ ಕೃಷಿ ತಜ್ಞ ವಿಎಂ ಹೆಗಡೆಯವರ ಸಲಹೆಯೊಂದಿಗೆ ಕೃಷಿ ಮಾಡುತ್ತಿರುವ ಇವರು ಬಾರೆಯ ಹೊಸ್ತೋಟದಲ್ಲಿ ತಮ್ಮ‌ ಮನೆ ಬಳಿ ಉಪಬೆಳೆಯಾಗಿ ಕಾಳುಮೆಣಸನ್ನು ಬೆಳೆದಿದ್ದಾರೆ.

ವಿವಿಧ ತಳಿಯ ಕಾಳುಮೆಣಸು
8-10 ವಿಧದ ಕಾಳುಮೆಣಸು ಇವರಲ್ಲಿ ಇವೆ ಅದರಲ್ಲಿ ಪಣಿಯೂರು-1, ಪಣಿಯೂರು-2, ನೀಲಮುಂಡಿ, ಶ್ರೀಕರ, ಶುಭಕರ ಸೇರಿದಂತೆ ಹಲವು ವಿಧದ ಕಾಳುಮೆಣಸು ಇವರಲ್ಲಿವೆ, ಕೇವಲ 1000 ಬಳ್ಳಿಗಳನ್ನು ಹೊಂದಿರುವ ಇವರು ಪ್ರತೀ ವರ್ಷ ಬರೊಬ್ಬರಿ 2.5 ಟನ್ ನಷ್ಟು ಇಳುವರಿಯನ್ನು ಪಡೆಯುತ್ತಿದ್ದಾರೆ. ಜೂನ್ ತಿಂಗಳಲ್ಲಿ ಟ್ರೆಂಚಿಂಗ್ ಮಾಡಿ ಲೈಟೆಕ್ಸ್ ಹಾಕಿ ನಂತರ ಪ್ಲ್ಯಾಸ್ಟಿಕ್ ಹೊದಿಕೆ ಹಾಕಿಡುವ ಕಾರಣ ಭಾರೀ ಮಳೆಯಲ್ಲೂ ಭರ್ಜರಿ ಫಸಲು ದೊರಕುತ್ತಿದೆ. 6 ಲಕ್ಷ ಖರ್ಚಿಗೆ ಸದ್ಯದ ಮಟ್ಟಿಗೆ 15 ರಿಂದ 20 ಲಕ್ಷ ವಹಿವಾಟು ನಡೆಸುವ ನಿರೀಕ್ಷೆಯಲ್ಲಿದ್ದಾರೆ. ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ದೇಶದಲ್ಲಿ ಕಾಳುಮೆಣಸಿನ ಬಳಕೆ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಹೊಸ ಪೀಳಿಗೆಯ ಆಹಾರ ಖಾದ್ಯಗಳಲ್ಲಿ ಕಾಳುಮೆಣಸು ಪ್ರಮುಖ ಪಾತ್ರ ವಹಿಸಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

6 hours ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

13 hours ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

14 hours ago

ಶ್ರೀಲಂಕಾದ ರಫ್ತು ಮಾರುಕಟ್ಟೆಯಲ್ಲಿ ಭಾರತದ ಬಲಿಷ್ಠ ಏರಿಕೆ..! – ತೆಂಗು ಆಧಾರಿತ ಉತ್ಪನ್ನಗಳ ರಫ್ತು 23.49 ಶೇಕಡಾ ಏರಿಕೆ

2026 ರ ಜನವರಿ–ಏಪ್ರಿಲ್ ಅವಧಿಯಲ್ಲಿ ಭಾರತವು ಶ್ರೀಲಂಕಾದ ಎರಡನೇ ಅತಿದೊಡ್ಡ ರಫ್ತು ಗಮ್ಯಸ್ಥಾನವಾಗಿ…

14 hours ago

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಗೆ ಋತುಮಾನ ಬೇಡಿಕೆ | ಯಾವ ತಿಂಗಳಲ್ಲಿ ಹೆಚ್ಚು ಲಾಭ? ಯಾವಾಗ ಮಾರುಕಟ್ಟೆ ಮಂದಗತಿ?

ಉತ್ತರ ಭಾರತದಲ್ಲಿ ಮಂಗಳೂರು ಚಾಲಿ ಅಡಿಕೆಯ ಬೇಡಿಕೆ ಯಾವ ತಿಂಗಳಲ್ಲಿ ಹೆಚ್ಚು ಗೊತ್ತಾ?…

21 hours ago

ವಿದೇಶಿ ಅಡಿಕೆ ಶಂಕೆ – ತೆರಿಗೆ ವಂಚನೆ ವಿವಾದ | ವಶಪಡಿಸಿಕೊಂಡ 380 ಚೀಲ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಣೆ

ಕಸ್ಟಮ್ಸ್‌ ವಶಪಡಿಸಿಕೊಂಡಿದ್ದ 380 ಚೀಲ ಅಡಿಕೆ ಬಿಡುಗಡೆಗೆ ಕೇರಳ ಹೈಕೋರ್ಟ್ ನಿರಾಕರಿಸಿದೆ. ಅಡಿಕೆ…

21 hours ago