MIRROR FOCUS

#Arecanut | ಅಡಿಕೆ ಬೆಳೆ ವಿಸ್ತರಣೆಯ ಚರ್ಚೆಯ ನಡುವೆ ಸಿಹಿ ಸುದ್ದಿ | ಪಾನ್ ಮಸಾಲಾ ಮಾರುಕಟ್ಟೆಯಲ್ಲಿ ಪ್ರಗತಿ | ಶೇ.5 ರಷ್ಟು ಏರಿಕೆ ನಿರೀಕ್ಷೆಯಲ್ಲಿ ಪಾನ್‌ ಮಾರುಕಟ್ಟೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ಅಡಿಕೆ ಬೆಳೆ ವಿಸ್ತರಣೆಯ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿದೆ. ಕೇವಲ ತಿಂದು ಉಗುಳಲು ಬಳಕೆಯಾಗುವ ಅಡಿಕೆಯ ಪರ್ಯಾಯ ಬಳಕೆ ತೀರಾ ಕಡಿಮೆಯಾಗಿದೆ. ಅಡಿಕೆ ತಿನ್ನಲು ಗುಣಮಟ್ಟದ ಅಡಿಕೆಯನ್ನು ಹೆಚ್ಚಾಗಿ ಅಪೇಕ್ಷೆ ಪಡುತ್ತಾರೆ. ಆದರೆ ಇದೀಗ ಸರ್ವೆ ಪ್ರಕಾರ ಶೇ.5 ರಷ್ಟು ಬೇಡಿಕೆ ಹೆಚ್ಚಲಿದೆ. ಅದರಲ್ಲೂ ಪಾನ್‌ಮಸಾಲಾ ಮಾರುಕಟ್ಟೆಯು ಮುಂದಿನ 10 ವರ್ಷಗಳಲ್ಲಿ ಶೇ.5 ರಷ್ಟು ಏರಿಕೆ ಕಾಣಲಿದೆ.

Advertisement
Advertisement

ಗ್ಲೋಬಲ್ ಇಂಡಿಯಾ ಪಾನ್ ಮಸಾಲಾ ಮಾರುಕಟ್ಟೆಯನ್ನು 2022 ರಲ್ಲಿ USD 412,143 ಕೋಟಿ  ಎಂದು ಅಂದಾಜಿಸಲಾಗಿದೆ. ಈಗ ಅದು ಮತ್ತಷ್ಟು ಬೆಳೆಯುತ್ತಿದೆ. ಮುಂದಿನ 10 ವರ್ಷಗಳಲ್ಲಿ ಮತ್ತಷ್ಟು ಏರಿಕೆಯ ನಿರೀಕ್ಷೆಯಿದೆ. 2023 ಮತ್ತು 2032 ರ ನಡುವೆ ಸರಿಸುಮಾರು 5% ನಷ್ಟು ಬೇಡಿಕೆ ಹೆಚ್ಚಲಿದೆ.

ಪಾನ್ ಮಸಾಲವನ್ನು ಸಾಮಾನ್ಯವಾಗಿ ಊಟದ ನಂತರದ ಜೀರ್ಣಕಾರಿ ಕ್ರಿಯೆ ಹೆಚ್ಚಿಸಲು ಬಳಕೆ ಮಾಡುತ್ತಾರೆ. ಬಾಯಿಯ ಸುಗಂಧಕ್ಕಾಗಿ ಅಥವಾ  ರೀಫ್ರೆಶ್‌ ಗಾಗಿ ಬಳಕೆ ಮಾಡುತ್ತಾರೆ. ಇದರಲ್ಲಿ ಇತರ ವಸ್ತುಗಳು ಇದ್ದರೂ ಅಡಿಕೆ ಹುಡಿಯೇ ಪ್ರಧಾನ ವಸ್ತು.ಪಾನ್ ಮಸಾಲಾದಲ್ಲಿ ಸಾಮಾನ್ಯವಾಗಿ ಅಡಿಕೆ, ಏಲಕ್ಕಿ, ಸುಣ್ಣ,  ವಿವಿಧ ಸುವಾಸನೆಯ ಹುಡಿಗಳು ಒಳಗೊಂಡಿರುತ್ತವೆ.  ಕಂಡುಬರುತ್ತವೆ.

ತಂಬಾಕು ಬಳಕೆ ಮಾಡುವವರು ಈಚೆಗೆ ಹೆಚ್ಚಾಗಿ ತಂಬಾಕಿನ ಬದಲಾಗಿ ಹಾನಿಕಾರಕವಲ್ಲದ ಅಡಿಕೆಯನ್ನು ಹೆಚ್ಚಾಗಿ ಬಳಕೆ ಮಾಡುತ್ತಿದ್ದಾರೆ. ಅದಕ್ಕಾಗಿ ಅನೇಕರು ಪಾನ್‌ ಮಸಾಲಾ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತದಲ್ಲಿನ ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಹೆಚ್ಚಾಗಿ ಪಾನ್‌ ಮಸಾಲಾ ಬಳಕೆ ಮಾಡುತ್ತಾರೆ.

ಮಾರುಕಟ್ಟೆ ಸರ್ವೆ ಪ್ರಕಾರ, ಪಾನ್ ಮಸಾಲಾ ಮಾರುಕಟ್ಟೆಯು ಮುಂದಿನ 10 ವರ್ಷಗಳಲ್ಲಿ ಸುಮಾರು 5% ರಷ್ಟು ಹೆಚ್ಚು ವಿಸ್ತರಣೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಪಾನ್ ಮಸಾಲಾ ಮಾರುಕಟ್ಟೆಯ ಗಾತ್ರವು 2023 ರಲ್ಲಿ USD 4‌,12,143  ಕೋಟಿಗಳಷ್ಟು ಮೌಲ್ಯದ್ದಾಗಿದ್ದರೆ ಮತ್ತು 2032 ರ ವೇಳೆಗೆ USD 6,12,801 ಕೋಟಿಗೆ ತಲುಪುವ ನಿರೀಕ್ಷೆಯಿದೆ.

Advertisement

ಪಾನ್‌ಮಸಾಲಾ ಹೆಚ್ಚಾಗಿ  ಉತ್ತರ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ದೆಹಲಿಯಂತಹ ರಾಜ್ಯಗಳು ಸೇರಿದಂತೆ ಭಾರತದ ಉತ್ತರ ಪ್ರದೇಶವು ಪಾನ್ ಮಸಾಲಾ ಮಾರುಕಟ್ಟೆಯಲ್ಲಿ ಹೆಚ್ಚಿನ  ಪಾಲನ್ನು ಹೊಂದಿದೆ.  ಮಹಾರಾಷ್ಟ್ರ, ಗುಜರಾತ್ ಮತ್ತು ರಾಜಸ್ಥಾನದಂತಹ ರಾಜ್ಯಗಳು  ಪಾನ್ ಮಸಾಲಾ ಮಾರುಕಟ್ಟೆಗೆ ಕೊಡುಗೆ ನೀಡುತ್ತವೆ.  ತಮಿಳುನಾಡು, ಕರ್ನಾಟಕ ಮತ್ತು ಆಂಧ್ರಪ್ರದೇಶದಂತಹ  ರಾಜ್ಯಗಳು  ಕಡಿಮೆ ಪಾನ್ ಮಸಾಲಾ ಬಳಕೆಯನ್ನು ಹೊಂದಿವೆ. ಇಲ್ಲಿ ಹಸಿ ಅಡಿಕೆ ಅಥವಾ ಒಣ ಅಡಿಕೆ ಬಳಕೆ ಹೆಚ್ಚಿದೆ. ಪಶ್ಚಿಮ ಬಂಗಾಳ, ಬಿಹಾರ ಮತ್ತು ಒಡಿಶಾದಂತಹ ಪೂರ್ವ ರಾಜ್ಯಗಳು ಪಾನ್ ಮಸಾಲಾವನ್ನು ಮಧ್ಯಮ ಪ್ರಮಾಣದಲ್ಲಿ ಸೇವಿಸುತ್ತವೆ.ಅಸ್ಸಾಂ, ಮಣಿಪುರ ಮತ್ತು ಮೇಘಾಲಯದಂತಹ ರಾಜ್ಯಗಳನ್ನು ಒಳಗೊಂಡಿರುವ ಈಶಾನ್ಯ ಭಾರತದಲ್ಲಿ ಪಾನ್ ಮಸಾಲಾ ಮಾರುಕಟ್ಟೆ ಬೆಳೆದಿಲ್ಲ.ಹೆಚ್ಚಾಗಿ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಅಡಿಕೆಯನ್ನು ಪಾನ್‌ ಜೊತೆ ಸೇರಿಸಿ ಸವಿಯುತ್ತಾರೆ.

ಹೀಗಾಗಿ ಮುಂದಿನ 10 ವರ್ಷಗಳಲ್ಲಿ ಅಡಿಕೆ ಮಾರುಕಟ್ಟೆಯಲ್ಲಿ ಪಾನ್‌ ಮಸಾಲಾ ಉದ್ಯಮವು ಶೇ.5 ರಷ್ಟು ಮಾತ್ರವೇ ವಿಸ್ತರಣೆಯಾಗುತ್ತದೆ. ಆದರೆ, ಈ ನಡುವೆ ಅಡಿಕೆ ಬೆಳೆ ವಿಸ್ತರಣೆಯಾದದ್ದು ಹಾಗೂ ಅದರ ಇಳುವರಿ ಆರಂಭವಾಗುವ ವೇಳೆ ಈಗಿನ ಮಾರುಕಟ್ಟೆಗಿಂತ ಶೇ.25 ರಷ್ಟು ಹೆಚ್ಚುವರಿಯಾಗಿ ಮಾರುಕಟ್ಟೆಯಲ್ಲಿ ಕಾಣಿಸಬಹುದು. ಸದ್ಯ ಅಡಿಕೆಗೆ ಬೇಡಿಕೆ ಇದೆ. ಮುಂದಿನ 10 ವರ್ಷಗಳಲ್ಲಿ ತಿಂದು ಉಗಿಯುವ ಅಡಿಕೆಯ ಮಾರುಕಟ್ಟೆ ಸ್ಥಿತಿಯ ಬಗ್ಗೆ ಇನ್ನಷ್ಟು ಅಧ್ಯಯನಗಳು ನಡೆಯುತ್ತಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

16 seconds ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

37 minutes ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

16 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

17 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

20 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

1 day ago