MIRROR FOCUS

#BPLCard | ತಿದ್ದುಪಡಿಗೆ ಅರ್ಜಿಸಲ್ಲಿಸಿದ್ದ ಬಿಪಿಎಲ್ ಫಲಾನುಭವಿಗಳಿಗೆ ಸಿಹಿಸುದ್ದಿ| ಬಿಪಿಎಲ್ ಕಾರ್ಡ್​​ಗಳ ತಿದ್ದುಪಡಿಗೆ ಅನುಮತಿ – ಆಹಾರ ಇಲಾಖೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಎರಡು ಮೂರು ತಿಂಗಳಿಂದ ಪಡಿತರ ಚೀಟಿ (Ration Card) ತಿದ್ದುಪಡಿ ಮಾಡುವುದರಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ. ಹೊಸದಾಗಿ ಸೇರ್ಪಡೆ ಆಗುವುದನ್ನು ತಡೆ ಹಿಡಿದಿದೆ. ಈ ಮಧ್ಯೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ರೇಷನ್‌ ಕಾರ್ಡ್‌ ದಾಖಲೆ ಕಡ್ಡಾಯಗೊಳಿಸಿದೆ. ಹಾಗಾಗಿ ಅನೇಕರು ಪರದಾಡುವಂತಾಗಿತ್ತು. ಇದೀಗ ಬಿಪಿಎಲ್ ಕಾರ್ಡ್​​ದಾರರಿಗೆ ಆಹಾರ ಇಲಾಖೆ ಶುಭ ಸುದ್ದಿ ನೀಡಿದೆ. ತಿದ್ದುಪಡಿಗೆ ಅರ್ಜಿಸಲ್ಲಿಸಿದ್ದ ಬಿಪಿಎಲ್ ಫಲಾನುಭವಿಗಳ ಕಾರ್ಡ್​​ಗಳಿಗೆ ಇಲಾಖೆಯು ಗ್ರೀನ್ ಸಿಗ್ನಲ್ ನೀಡಿದೆ.

Advertisement

ಈ ಹಿಂದೆ ಬಿಪಿಎಲ್ ಕಾರ್ಡ್​​ಗಳ ತಿದ್ದುಪಡಿಗೆಂದೇ ಒಟ್ಟು 3.18 ಲಕ್ಷ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಕಳೆದ ಒಂದು ತಿಂಗಳಿನಿಂದ ಹೊಸದಾಗಿ ತಿದ್ದಪಡಿಗೆ ಒಟ್ಟು 53219 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಒಟ್ಟು 3 ಲಕ್ಷ 70 ಸಾವಿರ ಅರ್ಜಿಗಳು ತಿದ್ದುಪಡಿಗೆಂದೇ ಸಲ್ಲಿಕೆಯಾಗಿದ್ದವು. ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಒಟ್ಟು 117646 ಬಿಪಿಎಲ್ ಕಾರ್ಡ್​​ಗಳ ತಿದ್ದುಪಡಿಗೆ ಅನುಮತಿ ನೀಡಲಾಗಿದೆ. ಇನ್ನು 3.70 ಲಕ್ಷ ಕಾರ್ಡ್​​ಗಳ ಪೈಕಿ 93362 ಬಿಪಿಎಲ್ ಕಾರ್ಡ್​​ಗಳ ಅರ್ಜಿ ತಿರಸ್ಕೃತಗೊಂಡಿವೆ. ಆಹಾರ ಇಲಾಖೆ ನಿಯಮವಳಿಗಳನ್ನು ಮೀರಿ ತಿದ್ದುಪಡಿಗೆ ಅರ್ಜಿಸಲ್ಲಿಸದವರಿಗೆ ಶಾಕ್ ನೀಡಲಾಗಿದೆ.

ತಿದ್ದಪಡಿಯಲ್ಲಿ ಹೆಸರು ಬದಲಾವಣೆ ಹಾಗೂ ಹೊಸ ಫಲಾನುಭವಿಗಳ ಹೆಸರು ಸೇರಿಸಲು ಮಾತ್ರ ಅವಕಾಶ ನೀಡಲಾಗಿತ್ತು. ಇದೀಗ ಆಹಾರ ಇಲಾಖೆಯ ಅಧಿಕಾರಿಗಳು ತಿದ್ದುಪಡಿಗೆ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿ ಒಟ್ಟು 117646 ಅರ್ಜಿಗಳ ತಿದ್ದುಪಡಿಗೆ ಅನುಮತಿ ನೀಡಿದ್ದಾರೆ. ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್​ಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡುವ ಸಾಧ್ಯತೆ ಇದೆ ಎಂದು ಮೂಲಗಳು ಇತ್ತೀಚೆಗೆ ತಿಳಿಸಿದ್ದವು. ಇದರ ಬೆನ್ನಲ್ಲೇ ತಿದ್ದುಪಡಿ ಅರ್ಜಿಗಳಿಗೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಯಿಂದ ಅನೇಕ ಮಹಿಳೆಯರು ವಂಚಿತರಾಗುತ್ತಿರುವುದನ್ನು ತಪ್ಪಿಸಲು ಬಿಪಿಎಲ್ ಕಾರ್ಡ್​​ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು. ಬಿಪಿಎಲ್​ ಕಾರ್ಡ್​ನಲ್ಲಿ ಪುರುಷರು ಮುಖ್ಯಸ್ಥರಾಗಿದ್ದರೆ ಗೃಹಲಕ್ಷ್ಮೀ ಯೋಜನೆಯಿಂದ ಆ ಕುಟುಂಬದ ಮಹಿಳೆಯರು ವಂಚಿತರಾಗಬೇಕಾಗುತ್ತದೆ. ಈ ಕಾರಣಕ್ಕೆ ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಸೆಪ್ಟೆಂಬರ್ 1ರಿಂದ ಸರ್ಕಾರ ಅನುಮತಿ ನೀಡಿತ್ತು. ನಿಯಮದ ಪ್ರಕಾರ ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಮುಖ್ಯಸ್ಥರಿರಬೇಕು. ಮಹಿಳಾ ಮುಖ್ಯಸ್ಥರಿದ್ದರೆ ಮಾತ್ರ ಬಿಪಿಎಲ್ ಸೌಲಭ್ಯ ದೊರೆಯಲಿದೆ. ಇಲಾಖೆಯ ಪ್ರಕಾರ 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್​​​ದಾರರ ಪೈಕಿ ಪುರುಷ ಮುಖ್ಯಸ್ಥರು ಇದ್ದಾರೆ. ಹೀಗಾಗಿ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು.

Source : Digital Media

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

5 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

11 hours ago

ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ

ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…

11 hours ago

ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…

11 hours ago

ಶುಕ್ರ ಮತ್ತು ರಾಹು ಮೀನ ರಾಶಿಯಲ್ಲಿ ಸಂಯೋಗ | 5 ರಾಶಿಚಕ್ರಗಳಲ್ಲಿ ವಿಶೇಷ ಪ್ರಭಾವ |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ…

21 hours ago