Advertisement
MIRROR FOCUS

#BPLCard | ತಿದ್ದುಪಡಿಗೆ ಅರ್ಜಿಸಲ್ಲಿಸಿದ್ದ ಬಿಪಿಎಲ್ ಫಲಾನುಭವಿಗಳಿಗೆ ಸಿಹಿಸುದ್ದಿ| ಬಿಪಿಎಲ್ ಕಾರ್ಡ್​​ಗಳ ತಿದ್ದುಪಡಿಗೆ ಅನುಮತಿ – ಆಹಾರ ಇಲಾಖೆ

Share

ಕಳೆದ ಎರಡು ಮೂರು ತಿಂಗಳಿಂದ ಪಡಿತರ ಚೀಟಿ (Ration Card) ತಿದ್ದುಪಡಿ ಮಾಡುವುದರಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ. ಹೊಸದಾಗಿ ಸೇರ್ಪಡೆ ಆಗುವುದನ್ನು ತಡೆ ಹಿಡಿದಿದೆ. ಈ ಮಧ್ಯೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ರೇಷನ್‌ ಕಾರ್ಡ್‌ ದಾಖಲೆ ಕಡ್ಡಾಯಗೊಳಿಸಿದೆ. ಹಾಗಾಗಿ ಅನೇಕರು ಪರದಾಡುವಂತಾಗಿತ್ತು. ಇದೀಗ ಬಿಪಿಎಲ್ ಕಾರ್ಡ್​​ದಾರರಿಗೆ ಆಹಾರ ಇಲಾಖೆ ಶುಭ ಸುದ್ದಿ ನೀಡಿದೆ. ತಿದ್ದುಪಡಿಗೆ ಅರ್ಜಿಸಲ್ಲಿಸಿದ್ದ ಬಿಪಿಎಲ್ ಫಲಾನುಭವಿಗಳ ಕಾರ್ಡ್​​ಗಳಿಗೆ ಇಲಾಖೆಯು ಗ್ರೀನ್ ಸಿಗ್ನಲ್ ನೀಡಿದೆ.

ಈ ಹಿಂದೆ ಬಿಪಿಎಲ್ ಕಾರ್ಡ್​​ಗಳ ತಿದ್ದುಪಡಿಗೆಂದೇ ಒಟ್ಟು 3.18 ಲಕ್ಷ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಕಳೆದ ಒಂದು ತಿಂಗಳಿನಿಂದ ಹೊಸದಾಗಿ ತಿದ್ದಪಡಿಗೆ ಒಟ್ಟು 53219 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಒಟ್ಟು 3 ಲಕ್ಷ 70 ಸಾವಿರ ಅರ್ಜಿಗಳು ತಿದ್ದುಪಡಿಗೆಂದೇ ಸಲ್ಲಿಕೆಯಾಗಿದ್ದವು. ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಒಟ್ಟು 117646 ಬಿಪಿಎಲ್ ಕಾರ್ಡ್​​ಗಳ ತಿದ್ದುಪಡಿಗೆ ಅನುಮತಿ ನೀಡಲಾಗಿದೆ. ಇನ್ನು 3.70 ಲಕ್ಷ ಕಾರ್ಡ್​​ಗಳ ಪೈಕಿ 93362 ಬಿಪಿಎಲ್ ಕಾರ್ಡ್​​ಗಳ ಅರ್ಜಿ ತಿರಸ್ಕೃತಗೊಂಡಿವೆ. ಆಹಾರ ಇಲಾಖೆ ನಿಯಮವಳಿಗಳನ್ನು ಮೀರಿ ತಿದ್ದುಪಡಿಗೆ ಅರ್ಜಿಸಲ್ಲಿಸದವರಿಗೆ ಶಾಕ್ ನೀಡಲಾಗಿದೆ.

ತಿದ್ದಪಡಿಯಲ್ಲಿ ಹೆಸರು ಬದಲಾವಣೆ ಹಾಗೂ ಹೊಸ ಫಲಾನುಭವಿಗಳ ಹೆಸರು ಸೇರಿಸಲು ಮಾತ್ರ ಅವಕಾಶ ನೀಡಲಾಗಿತ್ತು. ಇದೀಗ ಆಹಾರ ಇಲಾಖೆಯ ಅಧಿಕಾರಿಗಳು ತಿದ್ದುಪಡಿಗೆ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿ ಒಟ್ಟು 117646 ಅರ್ಜಿಗಳ ತಿದ್ದುಪಡಿಗೆ ಅನುಮತಿ ನೀಡಿದ್ದಾರೆ. ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್​ಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡುವ ಸಾಧ್ಯತೆ ಇದೆ ಎಂದು ಮೂಲಗಳು ಇತ್ತೀಚೆಗೆ ತಿಳಿಸಿದ್ದವು. ಇದರ ಬೆನ್ನಲ್ಲೇ ತಿದ್ದುಪಡಿ ಅರ್ಜಿಗಳಿಗೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಯಿಂದ ಅನೇಕ ಮಹಿಳೆಯರು ವಂಚಿತರಾಗುತ್ತಿರುವುದನ್ನು ತಪ್ಪಿಸಲು ಬಿಪಿಎಲ್ ಕಾರ್ಡ್​​ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು. ಬಿಪಿಎಲ್​ ಕಾರ್ಡ್​ನಲ್ಲಿ ಪುರುಷರು ಮುಖ್ಯಸ್ಥರಾಗಿದ್ದರೆ ಗೃಹಲಕ್ಷ್ಮೀ ಯೋಜನೆಯಿಂದ ಆ ಕುಟುಂಬದ ಮಹಿಳೆಯರು ವಂಚಿತರಾಗಬೇಕಾಗುತ್ತದೆ. ಈ ಕಾರಣಕ್ಕೆ ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಸೆಪ್ಟೆಂಬರ್ 1ರಿಂದ ಸರ್ಕಾರ ಅನುಮತಿ ನೀಡಿತ್ತು. ನಿಯಮದ ಪ್ರಕಾರ ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಮುಖ್ಯಸ್ಥರಿರಬೇಕು. ಮಹಿಳಾ ಮುಖ್ಯಸ್ಥರಿದ್ದರೆ ಮಾತ್ರ ಬಿಪಿಎಲ್ ಸೌಲಭ್ಯ ದೊರೆಯಲಿದೆ. ಇಲಾಖೆಯ ಪ್ರಕಾರ 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್​​​ದಾರರ ಪೈಕಿ ಪುರುಷ ಮುಖ್ಯಸ್ಥರು ಇದ್ದಾರೆ. ಹೀಗಾಗಿ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು.

Source : Digital Media

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

23 minutes ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

5 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

11 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

11 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago