Advertisement
MIRROR FOCUS

#BPLCard | ತಿದ್ದುಪಡಿಗೆ ಅರ್ಜಿಸಲ್ಲಿಸಿದ್ದ ಬಿಪಿಎಲ್ ಫಲಾನುಭವಿಗಳಿಗೆ ಸಿಹಿಸುದ್ದಿ| ಬಿಪಿಎಲ್ ಕಾರ್ಡ್​​ಗಳ ತಿದ್ದುಪಡಿಗೆ ಅನುಮತಿ – ಆಹಾರ ಇಲಾಖೆ

Share

ಕಳೆದ ಎರಡು ಮೂರು ತಿಂಗಳಿಂದ ಪಡಿತರ ಚೀಟಿ (Ration Card) ತಿದ್ದುಪಡಿ ಮಾಡುವುದರಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ. ಹೊಸದಾಗಿ ಸೇರ್ಪಡೆ ಆಗುವುದನ್ನು ತಡೆ ಹಿಡಿದಿದೆ. ಈ ಮಧ್ಯೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ರೇಷನ್‌ ಕಾರ್ಡ್‌ ದಾಖಲೆ ಕಡ್ಡಾಯಗೊಳಿಸಿದೆ. ಹಾಗಾಗಿ ಅನೇಕರು ಪರದಾಡುವಂತಾಗಿತ್ತು. ಇದೀಗ ಬಿಪಿಎಲ್ ಕಾರ್ಡ್​​ದಾರರಿಗೆ ಆಹಾರ ಇಲಾಖೆ ಶುಭ ಸುದ್ದಿ ನೀಡಿದೆ. ತಿದ್ದುಪಡಿಗೆ ಅರ್ಜಿಸಲ್ಲಿಸಿದ್ದ ಬಿಪಿಎಲ್ ಫಲಾನುಭವಿಗಳ ಕಾರ್ಡ್​​ಗಳಿಗೆ ಇಲಾಖೆಯು ಗ್ರೀನ್ ಸಿಗ್ನಲ್ ನೀಡಿದೆ.

ಈ ಹಿಂದೆ ಬಿಪಿಎಲ್ ಕಾರ್ಡ್​​ಗಳ ತಿದ್ದುಪಡಿಗೆಂದೇ ಒಟ್ಟು 3.18 ಲಕ್ಷ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಕಳೆದ ಒಂದು ತಿಂಗಳಿನಿಂದ ಹೊಸದಾಗಿ ತಿದ್ದಪಡಿಗೆ ಒಟ್ಟು 53219 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಒಟ್ಟು 3 ಲಕ್ಷ 70 ಸಾವಿರ ಅರ್ಜಿಗಳು ತಿದ್ದುಪಡಿಗೆಂದೇ ಸಲ್ಲಿಕೆಯಾಗಿದ್ದವು. ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಒಟ್ಟು 117646 ಬಿಪಿಎಲ್ ಕಾರ್ಡ್​​ಗಳ ತಿದ್ದುಪಡಿಗೆ ಅನುಮತಿ ನೀಡಲಾಗಿದೆ. ಇನ್ನು 3.70 ಲಕ್ಷ ಕಾರ್ಡ್​​ಗಳ ಪೈಕಿ 93362 ಬಿಪಿಎಲ್ ಕಾರ್ಡ್​​ಗಳ ಅರ್ಜಿ ತಿರಸ್ಕೃತಗೊಂಡಿವೆ. ಆಹಾರ ಇಲಾಖೆ ನಿಯಮವಳಿಗಳನ್ನು ಮೀರಿ ತಿದ್ದುಪಡಿಗೆ ಅರ್ಜಿಸಲ್ಲಿಸದವರಿಗೆ ಶಾಕ್ ನೀಡಲಾಗಿದೆ.

ತಿದ್ದಪಡಿಯಲ್ಲಿ ಹೆಸರು ಬದಲಾವಣೆ ಹಾಗೂ ಹೊಸ ಫಲಾನುಭವಿಗಳ ಹೆಸರು ಸೇರಿಸಲು ಮಾತ್ರ ಅವಕಾಶ ನೀಡಲಾಗಿತ್ತು. ಇದೀಗ ಆಹಾರ ಇಲಾಖೆಯ ಅಧಿಕಾರಿಗಳು ತಿದ್ದುಪಡಿಗೆ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿ ಒಟ್ಟು 117646 ಅರ್ಜಿಗಳ ತಿದ್ದುಪಡಿಗೆ ಅನುಮತಿ ನೀಡಿದ್ದಾರೆ. ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್​ಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡುವ ಸಾಧ್ಯತೆ ಇದೆ ಎಂದು ಮೂಲಗಳು ಇತ್ತೀಚೆಗೆ ತಿಳಿಸಿದ್ದವು. ಇದರ ಬೆನ್ನಲ್ಲೇ ತಿದ್ದುಪಡಿ ಅರ್ಜಿಗಳಿಗೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಯಿಂದ ಅನೇಕ ಮಹಿಳೆಯರು ವಂಚಿತರಾಗುತ್ತಿರುವುದನ್ನು ತಪ್ಪಿಸಲು ಬಿಪಿಎಲ್ ಕಾರ್ಡ್​​ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು. ಬಿಪಿಎಲ್​ ಕಾರ್ಡ್​ನಲ್ಲಿ ಪುರುಷರು ಮುಖ್ಯಸ್ಥರಾಗಿದ್ದರೆ ಗೃಹಲಕ್ಷ್ಮೀ ಯೋಜನೆಯಿಂದ ಆ ಕುಟುಂಬದ ಮಹಿಳೆಯರು ವಂಚಿತರಾಗಬೇಕಾಗುತ್ತದೆ. ಈ ಕಾರಣಕ್ಕೆ ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಸೆಪ್ಟೆಂಬರ್ 1ರಿಂದ ಸರ್ಕಾರ ಅನುಮತಿ ನೀಡಿತ್ತು. ನಿಯಮದ ಪ್ರಕಾರ ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಮುಖ್ಯಸ್ಥರಿರಬೇಕು. ಮಹಿಳಾ ಮುಖ್ಯಸ್ಥರಿದ್ದರೆ ಮಾತ್ರ ಬಿಪಿಎಲ್ ಸೌಲಭ್ಯ ದೊರೆಯಲಿದೆ. ಇಲಾಖೆಯ ಪ್ರಕಾರ 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್​​​ದಾರರ ಪೈಕಿ ಪುರುಷ ಮುಖ್ಯಸ್ಥರು ಇದ್ದಾರೆ. ಹೀಗಾಗಿ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು.

Source : Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

12 minutes ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

9 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

9 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago