Advertisement
MIRROR FOCUS

#BPLCard | ತಿದ್ದುಪಡಿಗೆ ಅರ್ಜಿಸಲ್ಲಿಸಿದ್ದ ಬಿಪಿಎಲ್ ಫಲಾನುಭವಿಗಳಿಗೆ ಸಿಹಿಸುದ್ದಿ| ಬಿಪಿಎಲ್ ಕಾರ್ಡ್​​ಗಳ ತಿದ್ದುಪಡಿಗೆ ಅನುಮತಿ – ಆಹಾರ ಇಲಾಖೆ

Share

ಕಳೆದ ಎರಡು ಮೂರು ತಿಂಗಳಿಂದ ಪಡಿತರ ಚೀಟಿ (Ration Card) ತಿದ್ದುಪಡಿ ಮಾಡುವುದರಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ. ಹೊಸದಾಗಿ ಸೇರ್ಪಡೆ ಆಗುವುದನ್ನು ತಡೆ ಹಿಡಿದಿದೆ. ಈ ಮಧ್ಯೆ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ರೇಷನ್‌ ಕಾರ್ಡ್‌ ದಾಖಲೆ ಕಡ್ಡಾಯಗೊಳಿಸಿದೆ. ಹಾಗಾಗಿ ಅನೇಕರು ಪರದಾಡುವಂತಾಗಿತ್ತು. ಇದೀಗ ಬಿಪಿಎಲ್ ಕಾರ್ಡ್​​ದಾರರಿಗೆ ಆಹಾರ ಇಲಾಖೆ ಶುಭ ಸುದ್ದಿ ನೀಡಿದೆ. ತಿದ್ದುಪಡಿಗೆ ಅರ್ಜಿಸಲ್ಲಿಸಿದ್ದ ಬಿಪಿಎಲ್ ಫಲಾನುಭವಿಗಳ ಕಾರ್ಡ್​​ಗಳಿಗೆ ಇಲಾಖೆಯು ಗ್ರೀನ್ ಸಿಗ್ನಲ್ ನೀಡಿದೆ.

ಈ ಹಿಂದೆ ಬಿಪಿಎಲ್ ಕಾರ್ಡ್​​ಗಳ ತಿದ್ದುಪಡಿಗೆಂದೇ ಒಟ್ಟು 3.18 ಲಕ್ಷ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಕಳೆದ ಒಂದು ತಿಂಗಳಿನಿಂದ ಹೊಸದಾಗಿ ತಿದ್ದಪಡಿಗೆ ಒಟ್ಟು 53219 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಒಟ್ಟು 3 ಲಕ್ಷ 70 ಸಾವಿರ ಅರ್ಜಿಗಳು ತಿದ್ದುಪಡಿಗೆಂದೇ ಸಲ್ಲಿಕೆಯಾಗಿದ್ದವು. ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಒಟ್ಟು 117646 ಬಿಪಿಎಲ್ ಕಾರ್ಡ್​​ಗಳ ತಿದ್ದುಪಡಿಗೆ ಅನುಮತಿ ನೀಡಲಾಗಿದೆ. ಇನ್ನು 3.70 ಲಕ್ಷ ಕಾರ್ಡ್​​ಗಳ ಪೈಕಿ 93362 ಬಿಪಿಎಲ್ ಕಾರ್ಡ್​​ಗಳ ಅರ್ಜಿ ತಿರಸ್ಕೃತಗೊಂಡಿವೆ. ಆಹಾರ ಇಲಾಖೆ ನಿಯಮವಳಿಗಳನ್ನು ಮೀರಿ ತಿದ್ದುಪಡಿಗೆ ಅರ್ಜಿಸಲ್ಲಿಸದವರಿಗೆ ಶಾಕ್ ನೀಡಲಾಗಿದೆ.

ತಿದ್ದಪಡಿಯಲ್ಲಿ ಹೆಸರು ಬದಲಾವಣೆ ಹಾಗೂ ಹೊಸ ಫಲಾನುಭವಿಗಳ ಹೆಸರು ಸೇರಿಸಲು ಮಾತ್ರ ಅವಕಾಶ ನೀಡಲಾಗಿತ್ತು. ಇದೀಗ ಆಹಾರ ಇಲಾಖೆಯ ಅಧಿಕಾರಿಗಳು ತಿದ್ದುಪಡಿಗೆ ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿ ಒಟ್ಟು 117646 ಅರ್ಜಿಗಳ ತಿದ್ದುಪಡಿಗೆ ಅನುಮತಿ ನೀಡಿದ್ದಾರೆ. ಶೀಘ್ರದಲ್ಲೇ ಹೊಸ ಬಿಪಿಎಲ್ ಕಾರ್ಡ್​ಗೆ ಅರ್ಜಿ ಸಲ್ಲಿಸಲು ಅವಕಾಶ ಕೊಡುವ ಸಾಧ್ಯತೆ ಇದೆ ಎಂದು ಮೂಲಗಳು ಇತ್ತೀಚೆಗೆ ತಿಳಿಸಿದ್ದವು. ಇದರ ಬೆನ್ನಲ್ಲೇ ತಿದ್ದುಪಡಿ ಅರ್ಜಿಗಳಿಗೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಯಿಂದ ಅನೇಕ ಮಹಿಳೆಯರು ವಂಚಿತರಾಗುತ್ತಿರುವುದನ್ನು ತಪ್ಪಿಸಲು ಬಿಪಿಎಲ್ ಕಾರ್ಡ್​​ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು. ಬಿಪಿಎಲ್​ ಕಾರ್ಡ್​ನಲ್ಲಿ ಪುರುಷರು ಮುಖ್ಯಸ್ಥರಾಗಿದ್ದರೆ ಗೃಹಲಕ್ಷ್ಮೀ ಯೋಜನೆಯಿಂದ ಆ ಕುಟುಂಬದ ಮಹಿಳೆಯರು ವಂಚಿತರಾಗಬೇಕಾಗುತ್ತದೆ. ಈ ಕಾರಣಕ್ಕೆ ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಸೆಪ್ಟೆಂಬರ್ 1ರಿಂದ ಸರ್ಕಾರ ಅನುಮತಿ ನೀಡಿತ್ತು. ನಿಯಮದ ಪ್ರಕಾರ ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಮುಖ್ಯಸ್ಥರಿರಬೇಕು. ಮಹಿಳಾ ಮುಖ್ಯಸ್ಥರಿದ್ದರೆ ಮಾತ್ರ ಬಿಪಿಎಲ್ ಸೌಲಭ್ಯ ದೊರೆಯಲಿದೆ. ಇಲಾಖೆಯ ಪ್ರಕಾರ 6 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್​​​ದಾರರ ಪೈಕಿ ಪುರುಷ ಮುಖ್ಯಸ್ಥರು ಇದ್ದಾರೆ. ಹೀಗಾಗಿ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು.

Source : Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

6 minutes ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

10 hours ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

11 hours ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

11 hours ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

17 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

19 hours ago