ವೆದರ್ ಮಿರರ್

ಬಿಸಿಲಿತ ತಾಪಕ್ಕೆ ನಲುಗುತ್ತಿರುವ ಕರಾವಳಿಗರಿಗೆ ಗುಡ್ ನ್ಯೂಸ್ | ಹವಾಮಾನ ಇಲಾಖೆಯಿಂದ ಮಹತ್ವದ ಘೋಷಣೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಿಸಿಲಿನ ಬೇಗೆಗೆ ಕರಾವಳಿ ಜನತೆ ಹೈರಾಣಾಗಿ ಹೋಗಿದ್ದಾರೆ. ಈಗ ಮಾರ್ಚ್ ತಿಂಗಳು…. ಹಾಗಾದ್ರೆ ಎಪ್ರಿಲ್, ಮೇ ಯ ಪರಿಸ್ಥಿತಿ ಹೇಗಿರಬಹುದು ಎಂದು ಊಹಿಸಿದ್ರೆನೇ ಉರಿ ಕಿತ್ತುಕೊಂಡು ಬರುತ್ತದೆ. ಇದೀಗ  ಈ ಬಗ್ಗೆ ಹವಾಮಾನ ಇಲಾಖೆಯಿಂದ ಮಹತ್ವದ ಘೋಷಣೆಯೊಂದು ಹೊರಬಿದ್ದಿದೆ. ದಿನೇ ದಿನೇ ಹೆಚ್ಚುತ್ತಿರುವ ಬಿಸಿಲಿನ ಝಳದಿಂದ ಬೆಂಡಾಗುತ್ತಿದ್ದೀರಾ? ನಿಮಗೊಂದು ಒಳ್ಳೆಯ ಸುದ್ದಿ ಇಲ್ಲಿದೆ.

Advertisement
Advertisement

ಬೆಳಗ್ಗೆ ಚಳಿ, ಮಧ್ಯಾಹ್ನವಾಗುತ್ತಿದ್ದಂತೆ ಕಣ್ಣು ಬಿಡಲಾರದಷ್ಟು ಬಿಸಿಲು…! ಇದು ಸದ್ಯ ರಾಜ್ಯದ ನಾಗರಿಕರಲ್ಲಿ ಅನಾರೋಗ್ಯಕ್ಕೆ ಕಾರಣವಾಗಿರೋ ಹವಾಮಾನ. ಅದರಲ್ಲೂ ಕರ್ನಾಟಕದ ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಬಿಸಿಲಿನಿಂದ ಹೀಟ್ ವೇವ್ ಉಂಟಾಗಲಿದೆಯೇ ಎಂಬ ಆತಂಕ ಮನೆ ಮಾಡಿತ್ತು. ಆದರೆ ಇದು ತಾಪಮಾನದಲ್ಲಿ ಏಕಾಏಕಿ ಉಂಟಾದ ಏರಿಕೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು.

ಶನಿವಾರ ಹಾಗೂ ಭಾನುವಾರ ಕರಾವಳಿ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಹೀಟ್‌ ವೇವ್‌ ಕಂಡುಬರುವ  ಸಾಧ್ಯತೆಯಿದೆ ಇದೆ ಎಂದು ಎಚ್ಚರಿಕೆ ನೀಡಿತ್ತು. ಅದಾದ ಬಳಿಕ ವಾತಾವರಣದಲ್ಲಿ ಸ್ವಲ್ಪ ಬದಲಾವಣೆ ಕಂಡುಬರುತ್ತಿದೆ.

ಇದೀಗ ಹೆಚ್ಚುತ್ತಿರುವ ಬಿಸಿಲಿನ ಕುರಿತು ಹವಾಮಾನ ಇಲಾಖೆ ಇನ್ನೊಂದು ಮಹತ್ವದ ಮಾಹಿತಿ ನೀಡಿದೆ. ಕರಾವಳಿ ಭಾಗದಲ್ಲಿ ಉಷ್ಣಾಂಶ ಇಳಿಕೆಯಾಗಲಿದೆ ಎಂದು ಸಮಾಧಾನಕರ ಸುದ್ದಿಯನ್ನು ಇಲಾಖೆ ಪ್ರಕಟಿಸಿದೆ. ಅಲ್ಲದೇ, ಕರಾವಳಿ ಭಾಗದಲ್ಲಿ ಹೀಟ್ ವೇವ್ ಉಂಟಾಗುವ ಎಚ್ಚರಿಕೆಯನ್ನು ಸಹ ಹವಾಮಾನ ಇಲಾಖೆ ಹಿಂಪಡೆದಿದೆ.

ಬೆಳಗ್ಗೆ ಚಳಿ, ಮಧ್ಯಾಹ್ನವಾಗುತ್ತಿದ್ದಂತೆ ಕಣ್ಣು ಬಿಡಲಾರದಷ್ಟು ಬಿಸಿಲು. ಇದು ಸದ್ಯ ರಾಜ್ಯದ ನಾಗರಿಕರಲ್ಲಿ ಅನಾರೋಗ್ಯಕ್ಕೆ ಕಾರಣವಾಗಿರೋ ಹವಾಮಾನ. ಬೆಂಗಳೂರು ಸೇರಿದಂತೆ ಹಲವೆಡೆ ನಿರಂತರ ಕೆಮ್ಮು, ಉಸಿರಾಟದ ತೊಂದರೆ ಮತ್ತು ಜ್ವರದಿಂದ ಬಳಲುತ್ತಿರುವ ರೋಗಿಗಳು ಆಸ್ಪತ್ರೆಗೆ ದಾಖಲಾಗುವ ಸಂಖ್ಯೆ ಹೆಚ್ಚುತ್ತಿದೆ.

Advertisement

ಫೆಬ್ರವರಿ ಮತ್ತು ಮಾರ್ಚ್ ತಿಂಗಳುಗಳಲ್ಲಿ ಉತ್ತರ ಭಾರತದಲ್ಲಿ ಫ್ಲೂ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿತ್ತು. ಆದರೆ ಕಳೆದ ಕೆಲವು ದಿನಗಳ ವಾತಾವರಣ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಊರುಗಳ ನಾಗರಿಕರನ್ನೂ ಅನಾರೋಗ್ಯಕ್ಕೀಡುಮಾಡಿದೆ.

ಒಟ್ಟಾರೆ ಕರಾವಳಿ ಸೇರಿದಂತೆ, ಕರ್ನಾಟಕದಲ್ಲಿ ಹೆಚ್ಚುತ್ತಿದ್ದ ಬಿಸಿಲಿನ ಝಳದಿಂದ ಬಸವಳಿದಿದ್ದ  ಸಾರ್ವಜನಿಕರಿಗೆ ಈ ಸುದ್ದಿಯಿಂದ ಕೊಂಚ ಸಮಾಧಾನ ಸಿಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

7 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

13 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

1 day ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

1 day ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

1 day ago