Advertisement
ಸುದ್ದಿಗಳು

ರೈತರ ಮಕ್ಕಳಿಗೆ ಗುಡ್ ನ್ಯೂಸ್ : ರಾಷ್ಟ್ರೀಯ ಕೃಷಿ ಮಾರುಕಟ್ಟೆ ಸಂಸ್ಥೆಯಲ್ಲಿ ಬರೋಬ್ಬರಿ 60 ಸೀಟು ಹೆಚ್ಚಳ

Share

ಭಾರತ ಕೃಷಿ ಪ್ರಧಾನ ದೇಶ. ಆದರೆ ಇತ್ತೀಚಿನ ದಿನಗಳಲ್ಲಿ ನವ ಯುವಕರು ಕೃಷಿ ಮರೆತು ಪಟ್ಟಣಗಳತ್ತ ಮುಖ ಮಾಡುತ್ತಿದ್ದಾರೆ ಎಂಬ ಅಪವಾದವಿದೆ. ಹಾಗೆ ಎಲ್ಲೋ ಒಂದು ಕಡೆ ಪಟ್ಟಣದಲ್ಲಿ ಕೆಲಸ ಮಾಡುತ್ತಿದ್ದ ಯುವಕರು ಮತ್ತೆ ಕೃಷಿಯತ್ತ ಹೊಸ ಹೊಸ ಯೋಜನೆಗಳೊಂದಿಗೆ ಮರಳುತ್ತಿರುವುದು ಸಂತೋಷಕರ ಸಂಗತಿ ಕೂಡ ಹೌದು. ಅದಕ್ಕೆ ಪೂರಕ ಎಂಬಂತೆ ಸರ್ಕಾರಗಳು ಅವರಿಗೆ ಬೇಕಾದ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ.

ಯುವಕರು ಕೃಷಿಯಲ್ಲಿ ತೊಡಗಿಸಿಕೊಂಡು ಹಳ್ಳಿಗಳನ್ನು ಸಮೃದ್ಧಗೊಳಿಸಬೇಕು ಎಂಬುದು ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಮಾತು.  ವಿದ್ಯಾರ್ಥಿಗಳು ಮತ್ತು ಯುವಕರು ಕೃಷಿಯನ್ನು ಹೆಚ್ಚು ಲಾಭದಾಯಕ ವಾಗಿಸಲು ಮತ್ತು ಹಳ್ಳಿಗಳನ್ನು ಸಮೃದ್ಧಗೊಳಿಸಲು ಕೊಡುಗೆ ನೀಡಬೇಕು  ಎಂದರು.  

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ಭಾನುವಾರ ಚೌಧರಿ ಚರಣ್ ಸಿಂಗ್ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರಲ್ ಮಾರ್ಕೆಟಿಂಗ್, ಸೆಂಟರ್ ಫಾರ್ ಇನ್ನೋವೇಶನ್ ಇನ್ ಅಗ್ರಿಕಲ್ಚರ್ ಅಂಡ್ ಆಪರೇಷನ್ಸ್ ಜೈಪುರದಲ್ಲಿ ಕೃಷಿ ವ್ಯವಹಾರ ನಿರ್ವಹಣೆಯ ನಾಲ್ಕನೇ ಘಟಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿಶೇಷ ಅತಿಥಿಗಳಾಗಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಕೈಲಾಶ್ ಚೌಧರಿ ಉಪಸ್ಥಿತರಿದ್ದರು.

ಸಂದರ್ಭದಲ್ಲಿ ತೋಮರ್ ಅವರು ಮಾತನಾಡಿ, ಪ್ರಧಾನಮಂತ್ರಿ  ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಹಲವಾರು ಯೋಜನೆಗಳ ಮೂಲಕ ನಿರಂತರವಾಗಿ ಶ್ರಮಿಸುತ್ತಿದೆ. ದೇಶದಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಲಾಭ ತಂದು ಗ್ರಾಮಗಳು ಹೆಚ್ಚು ಅಭಿವೃದ್ಧಿ ಹೊಂದಲು ಕೃಷಿ ಸಂಬಂಧಿತ ವಿದ್ಯಾರ್ಥಿಗಳು ಯುವಕರು ಸಹ ಕೊಡುಗೆ ನೀಡಬೇಕು ಎಂದರು.  

ರಾಷ್ಟ್ರೀಯ ಕೃಷಿ ಮಾರುಕಟ್ಟೆ ಸಂಸ್ಥೆಯಲ್ಲಿ ಇನ್ನೂ 60 ಸೀಟುಗಳನ್ನು ಸೇರಿಸುವುದಾಗಿ ಮತ್ತು ಕಡ್ಡಾಯ ಹಾಸ್ಟೆಲ್ ವಾಸ್ತವ್ಯದ ನಿಯಮವನ್ನು ರದ್ದುಗೊಳಿಸುವುದಾಗಿ ಅವರು ಘೋಷಿಸಿದರು.ಕೃಷಿ ಮುಖ್ಯವಾಗಿದ್ದು, ಎಲ್ಲರೂ ಇದರಲ್ಲಿ ಆಸಕ್ತಿ ಹೆಚ್ಚಿಸಿಕೊಳ್ಳಬೇಕು. ಯುವಜನತೆಯೂ ಇದರತ್ತ ಆಕರ್ಷಿತರಾಗಬೇಕು. ಇದು ನಮ್ಮೆಲ್ಲರ ಜವಾಬ್ದಾರಿ ಎಂದು ಕೇಂದ್ರ ಸಚಿವ ತೋಮರ್ ಹೇಳಿದರು. ಕೃಷಿ ವಲಯದಲ್ಲಿ ಜೀವನೋಪಾಯವಿದೆ. ರೈತರ ದೇಶಭಕ್ತಿಯೂ ಇದೆ. ಏಕೆಂದರೆ ಕೃಷಿ ಉತ್ಪಾದನೆ ಇಲ್ಲದಿದ್ದರೆ ಎಲ್ಲವೂ ನಿಲ್ಲುತ್ತದೆ.

ಕೃಷಿ ಕ್ಷೇತ್ರದಲ್ಲಿ ಹಲವು ಸವಾಲುಗಳಿವೆ. ಕೇಂದ್ರ ಸರ್ಕಾರ ರಾಜ್ಯಗಳ ಸಹಯೋಗದಲ್ಲಿ ತಂತ್ರಜ್ಞಾನ ಬಳಸಿಕೊಂಡು ಯಶಸ್ವಿ ಪ್ರಗತಿ ಸಾಧಿಸುತ್ತಿದೆ. ಲಾಭದಾಯಕ ಬೆಳೆಗಳತ್ತ ಸಾಗುವುದು, ಬೆಳೆಗಳನ್ನು ವೈವಿಧ್ಯಗೊಳಿಸುವುದು, ಉತ್ಪನ್ನಗಳ ಮಾರಾಟದಲ್ಲಿ ಮಧ್ಯವರ್ತಿಗಳನ್ನು ತೊಡೆದುಹಾಕುವುದು ಮುಂತಾದ ಅನೇಕ ಸವಾಲುಗಳನ್ನು ವ್ಯವಸ್ಥಿತ ರೀತಿಯಲ್ಲಿ ನಿಭಾಯಿಸಲಾಗುತ್ತಿದೆ ಎಂದು ವಿವರಿಸಿದರು.  

ಕೃಷಿ ಕ್ಷೇತ್ರದಲ್ಲಿ ವಿಜ್ಞಾನಿಗಳು ಸಾಕಷ್ಟು ಕೆಲಸ ಮಾಡಿದ್ದು, ರೈತರ ಅವಿರತ ಶ್ರಮ ಹಾಗೂ ಕೇಂದ್ರ ಸರ್ಕಾರದ ಸೂಕ್ತ ರೈತಸ್ನೇಹಿ ನೀತಿಗಳ ಜತೆಗೆ ಕೃಷಿಯಲ್ಲಿ ಅಭೂತಪೂರ್ವ ಪ್ರಗತಿಯಾಗಿದೆ ಎಂದು ತೋಮರ್ ಹೇಳಿದರು. ಹೆಚ್ಚಿನ ಕೃಷಿ ಉತ್ಪನ್ನಗಳ ವಿಷಯದಲ್ಲಿ ಭಾರತ ಇಂದು ವಿಶ್ವದಲ್ಲಿ ಮೊದಲ ಅಥವಾ ಎರಡನೇ ಸ್ಥಾನದಲ್ಲಿದೆ.

ನಾವೆಲ್ಲರೂ ಒಗ್ಗೂಡಿ ಇದನ್ನು ಮುನ್ನೆಲೆಗೆ ತರಬೇಕಿದೆ. ಭಾರತದಿಂದ ಆಹಾರ ಧಾನ್ಯಗಳ ಬಗ್ಗೆ ಜಗತ್ತು ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದೆ. ನಾವು ಅದನ್ನು ಮಾಡುತ್ತಿದ್ದೇವೆ. ಮುಂದೆಯೂ ಹಾಗೆಯೇ ಮಾಡುತ್ತೇವೆ. ರೈತರ ಪರಿಶ್ರಮ ಹಾಗೂ ಕೇಂದ್ರ ಸರ್ಕಾರದ ಸತತ ಪ್ರಯತ್ನದಿಂದ ಕೃಷಿ ಸಂಶೋಧನೆಗಳು ಸಮರ್ಥವಾಗಿ ನಡೆಯುತ್ತಿವೆ. ಜೀವನೋಪಾಯಕ್ಕೆ ಉದ್ಯೋಗಗಳು ಅತ್ಯಗತ್ಯ. ಆದರೆ ಅದೇ ಸಮಯದಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿಯೂ ಅಗತ್ಯ. ಏಕೆಂದರೆ ದೇಶದ ಶೇ.56ರಷ್ಟು ಜನರು ಇದನ್ನು ಅವಲಂಬಿಸಿದ್ದಾರೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

3 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

3 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

12 hours ago

ಮಲೆನಾಡು ಅಡಿಕೆ ತೋಟಗಳಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ

ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…

12 hours ago