#NandiniMilk | ನಂದಿನಿ ಹಾಲಿನ ದರ 3 ರೂ. ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ | ಈ ಬಾರಿ ಹೈನುಗಾರರಿಗೂ ಗೌರವ…. |

July 21, 2023
10:41 PM
ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡುವ ಕೆಎಂಎಫ್‌ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಆಗಸ್ಟ್ 1 ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಬೆಲೆ ಏರಿಕೆಯಲ್ಲಿ ಈ ಬಾರಿ ಹೈನುಗಾರರಿಗೂ ಸ್ವಲ್ಪ ಪಾಲು ಸಿಗಲಿದೆ.

ಹಲವು ದಿನಗಳ ನಂತರ ಹೈನುಗಾರಿಕೆ ಮಾಡುತ್ತಿರುವ ರೈತರಿಗೆ ಸಿಹಿಸುದ್ದಿ ಸಿಕ್ಕಿದೆ. ಹೈನುಗಾರಿಕೆ ಸುಲಭದ ಕೆಲಸ ಅಲ್ಲ. ಆದರೂ ರೈತರು ಇದಕ್ಕೆಲ್ಲ ಜಗ್ಗದೇ ದನ ಸಾಕಿ ತಮ್ಮ ಜೀವನ ನಡೆಸುತ್ತಿದ್ದಾರೆ.ಸಮಾಜಕ್ಕೂ ತಮ್ಮ ಬೆವರ ಶ್ರಮವನ್ನು ಉಣಿಸುತ್ತಿದ್ದಾರೆ. ಆ ಬೆವರಿಗೆ ತಕ್ಕ ಪ್ರತಿಫಲ ದೊರೆತರೆ ಅವರಿಗೂ ಖುಷಿ. ಈ ಬಾರಿ ರಾಜ್ಯ ಸರ್ಕಾರ ರೈತರ ಹೈನುಗಾರರ ಪಾಲಿಗೂ ಕೊಂಚ ದಯೆ ತೋರಿದೆ.

ನಂದಿನಿ ಹಾಲಿನ #NandiniMilk ದರವನ್ನು ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡುವ ಕೆಎಂಎಫ್‌ #KMF ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಶುಕ್ರವಾರ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ #Siddaramaiah ನೇತೃತ್ವದಲ್ಲಿ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಲಾಯಿತು. ಈ ವೇಳೆ ಹಾಲಿನ ದರ ಹೆಚ್ಚಳಕ್ಕೆ ಸರ್ಕಾರ ಒಪ್ಪಿಕೊಂಡಿದೆ. ಆಗಸ್ಟ್ 1 ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.

KMF ಪ್ರತಿ ಲೀಟರ್‌ ಹಾಲಿನ ದರದಲ್ಲಿ 5 ರೂ. ಹೆಚ್ಚಳ ಮಾಡುವಂತೆ ಪ್ರಸ್ತಾವ ಸಲ್ಲಿಸಿತ್ತು. ಕೊನೆಗೆ ಸರ್ಕಾರ 3 ರೂ. ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಹೆಚ್‌.ಡಿ.ರೇವಣ್ಣ, 5 ರೂ. ದರ ಏರಿಕೆಗೆ ಪ್ರಸ್ತಾಪವಿತ್ತು. 3 ರೂ. ದರ ಹೆಚ್ಚಳಕ್ಕೆ ಸಿಎಂ ಒಪ್ಪಿಗೆ ನೀಡಿದ್ದಾರೆ. ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್‌ಗೆ 3 ರೂ. ದರ ಹೆಚ್ಚಳವಾದಂತಾಗಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror