ಸುದ್ದಿಗಳು

#NandiniMilk | ನಂದಿನಿ ಹಾಲಿನ ದರ 3 ರೂ. ಹೆಚ್ಚಳಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ | ಈ ಬಾರಿ ಹೈನುಗಾರರಿಗೂ ಗೌರವ…. |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಲವು ದಿನಗಳ ನಂತರ ಹೈನುಗಾರಿಕೆ ಮಾಡುತ್ತಿರುವ ರೈತರಿಗೆ ಸಿಹಿಸುದ್ದಿ ಸಿಕ್ಕಿದೆ. ಹೈನುಗಾರಿಕೆ ಸುಲಭದ ಕೆಲಸ ಅಲ್ಲ. ಆದರೂ ರೈತರು ಇದಕ್ಕೆಲ್ಲ ಜಗ್ಗದೇ ದನ ಸಾಕಿ ತಮ್ಮ ಜೀವನ ನಡೆಸುತ್ತಿದ್ದಾರೆ.ಸಮಾಜಕ್ಕೂ ತಮ್ಮ ಬೆವರ ಶ್ರಮವನ್ನು ಉಣಿಸುತ್ತಿದ್ದಾರೆ. ಆ ಬೆವರಿಗೆ ತಕ್ಕ ಪ್ರತಿಫಲ ದೊರೆತರೆ ಅವರಿಗೂ ಖುಷಿ. ಈ ಬಾರಿ ರಾಜ್ಯ ಸರ್ಕಾರ ರೈತರ ಹೈನುಗಾರರ ಪಾಲಿಗೂ ಕೊಂಚ ದಯೆ ತೋರಿದೆ.

Advertisement
Advertisement

ನಂದಿನಿ ಹಾಲಿನ #NandiniMilk ದರವನ್ನು ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡುವ ಕೆಎಂಎಫ್‌ #KMF ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಶುಕ್ರವಾರ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ #Siddaramaiah ನೇತೃತ್ವದಲ್ಲಿ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಲಾಯಿತು. ಈ ವೇಳೆ ಹಾಲಿನ ದರ ಹೆಚ್ಚಳಕ್ಕೆ ಸರ್ಕಾರ ಒಪ್ಪಿಕೊಂಡಿದೆ. ಆಗಸ್ಟ್ 1 ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.

KMF ಪ್ರತಿ ಲೀಟರ್‌ ಹಾಲಿನ ದರದಲ್ಲಿ 5 ರೂ. ಹೆಚ್ಚಳ ಮಾಡುವಂತೆ ಪ್ರಸ್ತಾವ ಸಲ್ಲಿಸಿತ್ತು. ಕೊನೆಗೆ ಸರ್ಕಾರ 3 ರೂ. ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಹೆಚ್‌.ಡಿ.ರೇವಣ್ಣ, 5 ರೂ. ದರ ಏರಿಕೆಗೆ ಪ್ರಸ್ತಾಪವಿತ್ತು. 3 ರೂ. ದರ ಹೆಚ್ಚಳಕ್ಕೆ ಸಿಎಂ ಒಪ್ಪಿಗೆ ನೀಡಿದ್ದಾರೆ. ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್‌ಗೆ 3 ರೂ. ದರ ಹೆಚ್ಚಳವಾದಂತಾಗಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್‌ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

10 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

13 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

22 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

1 day ago