ಹಲವು ದಿನಗಳ ನಂತರ ಹೈನುಗಾರಿಕೆ ಮಾಡುತ್ತಿರುವ ರೈತರಿಗೆ ಸಿಹಿಸುದ್ದಿ ಸಿಕ್ಕಿದೆ. ಹೈನುಗಾರಿಕೆ ಸುಲಭದ ಕೆಲಸ ಅಲ್ಲ. ಆದರೂ ರೈತರು ಇದಕ್ಕೆಲ್ಲ ಜಗ್ಗದೇ ದನ ಸಾಕಿ ತಮ್ಮ ಜೀವನ ನಡೆಸುತ್ತಿದ್ದಾರೆ.ಸಮಾಜಕ್ಕೂ ತಮ್ಮ ಬೆವರ ಶ್ರಮವನ್ನು ಉಣಿಸುತ್ತಿದ್ದಾರೆ. ಆ ಬೆವರಿಗೆ ತಕ್ಕ ಪ್ರತಿಫಲ ದೊರೆತರೆ ಅವರಿಗೂ ಖುಷಿ. ಈ ಬಾರಿ ರಾಜ್ಯ ಸರ್ಕಾರ ರೈತರ ಹೈನುಗಾರರ ಪಾಲಿಗೂ ಕೊಂಚ ದಯೆ ತೋರಿದೆ.
ನಂದಿನಿ ಹಾಲಿನ #NandiniMilk ದರವನ್ನು ಪ್ರತಿ ಲೀಟರ್ಗೆ 3 ರೂ. ಹೆಚ್ಚಳ ಮಾಡುವ ಕೆಎಂಎಫ್ #KMF ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಶುಕ್ರವಾರ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ #Siddaramaiah ನೇತೃತ್ವದಲ್ಲಿ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಸಭೆ ನಡೆಸಲಾಯಿತು. ಈ ವೇಳೆ ಹಾಲಿನ ದರ ಹೆಚ್ಚಳಕ್ಕೆ ಸರ್ಕಾರ ಒಪ್ಪಿಕೊಂಡಿದೆ. ಆಗಸ್ಟ್ 1 ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.
KMF ಪ್ರತಿ ಲೀಟರ್ ಹಾಲಿನ ದರದಲ್ಲಿ 5 ರೂ. ಹೆಚ್ಚಳ ಮಾಡುವಂತೆ ಪ್ರಸ್ತಾವ ಸಲ್ಲಿಸಿತ್ತು. ಕೊನೆಗೆ ಸರ್ಕಾರ 3 ರೂ. ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಹೆಚ್.ಡಿ.ರೇವಣ್ಣ, 5 ರೂ. ದರ ಏರಿಕೆಗೆ ಪ್ರಸ್ತಾಪವಿತ್ತು. 3 ರೂ. ದರ ಹೆಚ್ಚಳಕ್ಕೆ ಸಿಎಂ ಒಪ್ಪಿಗೆ ನೀಡಿದ್ದಾರೆ. ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್ಗೆ 3 ರೂ. ದರ ಹೆಚ್ಚಳವಾದಂತಾಗಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…