ಹಲವು ದಿನಗಳ ನಂತರ ಹೈನುಗಾರಿಕೆ ಮಾಡುತ್ತಿರುವ ರೈತರಿಗೆ ಸಿಹಿಸುದ್ದಿ ಸಿಕ್ಕಿದೆ. ಹೈನುಗಾರಿಕೆ ಸುಲಭದ ಕೆಲಸ ಅಲ್ಲ. ಆದರೂ ರೈತರು ಇದಕ್ಕೆಲ್ಲ ಜಗ್ಗದೇ ದನ ಸಾಕಿ ತಮ್ಮ ಜೀವನ ನಡೆಸುತ್ತಿದ್ದಾರೆ.ಸಮಾಜಕ್ಕೂ ತಮ್ಮ ಬೆವರ ಶ್ರಮವನ್ನು ಉಣಿಸುತ್ತಿದ್ದಾರೆ. ಆ ಬೆವರಿಗೆ ತಕ್ಕ ಪ್ರತಿಫಲ ದೊರೆತರೆ ಅವರಿಗೂ ಖುಷಿ. ಈ ಬಾರಿ ರಾಜ್ಯ ಸರ್ಕಾರ ರೈತರ ಹೈನುಗಾರರ ಪಾಲಿಗೂ ಕೊಂಚ ದಯೆ ತೋರಿದೆ.
ನಂದಿನಿ ಹಾಲಿನ #NandiniMilk ದರವನ್ನು ಪ್ರತಿ ಲೀಟರ್ಗೆ 3 ರೂ. ಹೆಚ್ಚಳ ಮಾಡುವ ಕೆಎಂಎಫ್ #KMF ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಶುಕ್ರವಾರ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ #Siddaramaiah ನೇತೃತ್ವದಲ್ಲಿ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಸಭೆ ನಡೆಸಲಾಯಿತು. ಈ ವೇಳೆ ಹಾಲಿನ ದರ ಹೆಚ್ಚಳಕ್ಕೆ ಸರ್ಕಾರ ಒಪ್ಪಿಕೊಂಡಿದೆ. ಆಗಸ್ಟ್ 1 ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.
KMF ಪ್ರತಿ ಲೀಟರ್ ಹಾಲಿನ ದರದಲ್ಲಿ 5 ರೂ. ಹೆಚ್ಚಳ ಮಾಡುವಂತೆ ಪ್ರಸ್ತಾವ ಸಲ್ಲಿಸಿತ್ತು. ಕೊನೆಗೆ ಸರ್ಕಾರ 3 ರೂ. ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಹೆಚ್.ಡಿ.ರೇವಣ್ಣ, 5 ರೂ. ದರ ಏರಿಕೆಗೆ ಪ್ರಸ್ತಾಪವಿತ್ತು. 3 ರೂ. ದರ ಹೆಚ್ಚಳಕ್ಕೆ ಸಿಎಂ ಒಪ್ಪಿಗೆ ನೀಡಿದ್ದಾರೆ. ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್ಗೆ 3 ರೂ. ದರ ಹೆಚ್ಚಳವಾದಂತಾಗಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಸೇರಿದಂತೆ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…