Advertisement
ಸುದ್ದಿಗಳು

ಸಾವಯವ ಕೃಷಿ ಮಾಡುವ ರೈತರಿಗೆ ಸಿಹಿ ಸುದ್ದಿ | ಎಲ್ಲಾ ಗೊಬ್ಬರ, ಕೀಟನಾಶಕಗಳಿಗೆ ಸಬ್ಸಿಡಿ

Share

ರೈತರಿಗೆ ಸಿಹಿ ಸುದ್ದಿ:ಎಲ್ಲಾ ಗೊಬ್ಬರ, ಕೀಟನಾಶಕಗಳಿಗೆ ಸಬ್ಸಿಡಿ :  ಆರಂಭವಾಗಿದೆ ರೈತರಿಗಾಗಿ ಹೊಸ ಯೋಜನೆ

ಸರ್ಕಾರ ರೈತರಿಗಾಗಿ ಹೊಸ ಹೊಸ ಯೋಜನೆಯನ್ನು ಜಾರಿಗೆ ತರುತ್ತಲೇ ಇರುತ್ತದೆ. ರೈತರಿಗೆ ಉತ್ತೇಜನ ನೀಡುವ ಸಲುವಾಗಿ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅಂತಹ ಯೋಜನೆಗಳಲ್ಲಿ ಪರಂಪರಾಗತ್‌ ಯೋಜನೆ ಕೂಡ ಒಂದು. ಕೇಂದ್ರ ಸರ್ಕಾರವು ದೇಶದ ಕೃಷಿ ಕ್ಷೇತ್ರ ಮತ್ತು ಎಲ್ಲಾ ರೈತರ ಸುಧಾರಣೆಗಾಗಿ ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಸಾವಯವ ಕೃಷಿ ಮಾಡವ ರೈತರಿಗೆ ಸರ್ಕಾರ ಉತ್ತೇಜನ ನೀಡಲಿದೆ. ಕೇಂದ್ರ ಸರ್ಕಾರ ಪರಂಪರಾಗತ್ ಕೃಷಿ ವಿಕಾಸ್ ಯೋಜನೆ 2023ರ ಯೋಜನೆ ಅಡಿಯಲ್ಲಿ ಈ ಸೌಲಭ್ಯವನ್ನು ಎಲ್ಲಾ ರೈತ ಫಲಾನುಭವಿಗಳಿಗೆ ನೀಡಲಿದೆ. ಈ ಯೋಜನೆಯ ಮೂಲಕ ಎಲ್ಲಾ ರೈತರನ್ನು ಸಾವಯವ ಕೃಷಿ ಮಾಡಲು ಪ್ರೋತ್ಸಾಹಿಸಲಾಗುವುದು.

ಯೋಜನೆಯ ಪ್ರಯೋಜನಗಳನ್ನು ನೋಡೋದಾದ್ರೆ

  • PKVY ಮೂಲಕ ಮಣ್ಣಿನ ಗುಣಮಟ್ಟ ಉತ್ತಮವಾಗಿರುತ್ತದೆ ಮತ್ತು ಫಲವತ್ತತೆ ಹೆಚ್ಚಾಗುತ್ತದೆ.
  • ಕೃಷಿ ಕ್ಷೇತ್ರದಲ್ಲಿ ಈ ಯೋಜನೆಯಿಂದ ರೈತರ ಆದಾಯವೂ ಸುಧಾರಿಸುತ್ತದೆ.
  • ಈ ಯೋಜನೆಯಡಿ ಪಡೆದ ಪ್ರೋತ್ಸಾಹಧನವು ಡಿಬಿಟಿ ಮೂಲಕ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹೋಗುತ್ತದೆ.
  • ದೇಶದ ರೈತರಿಗೆ ಪ್ರತಿ ಹೆಕ್ಟೇರ್‌ಗೆ 50,000ಪ್ರಕಾರ 3 ವರ್ಷಗಳ ಅವಧಿಗೆ ಈ ಯೋಜನೆಯಡಿ ಸಹಾಯವನ್ನು ನೀಡಲಾಗುತ್ತದೆ.
  • ರೈತರಿಗೆ ಸಾವಯವ ಗೊಬ್ಬರ, ಬೀಜ ಮತ್ತು ಕೀಟನಾಶಕಗಳಿಗೆ 31 ಸಾವಿರ ರೂ.
  • ಮೌಲ್ಯವರ್ಧನೆ ಮತ್ತು ವಿತರಣೆಗೆ ರೂ.8800 ನೀಡಲಾಗುವುದು.

 PKVY ಅರ್ಹತೆಗಳು:

  • ಯೋಜನೆಯಡಿ ಅರ್ಜಿದಾರರು ರೈತ ವರ್ಗದಿಂದ ಮಾತ್ರ ಇರಬೇಕು.
  • ಅರ್ಜಿದಾರರು ಭಾರತೀಯ ಪ್ರಜೆಯಾಗಿರಬೇಕು.
  • ಈ ಯೋಜನೆಯಲ್ಲಿ ಅರ್ಜಿದಾರರ ವಯಸ್ಸು 18 ವರ್ಷಕ್ಕಿಂತ ಹೆಚ್ಚಿರಬೇಕು.

ಈ ಯೋಜನೆ ಪಡೆದುಕೊಳ್ಳಲು ನೀವು ಸಲ್ಲಿಸಬೇಕಾದ ದಾಖಲೆಗಳು :

  • ಮೂಲ ವಿಳಾಸ ಪುರಾವೆ
  • ಆಧಾರ್ ಕಾರ್ಡ್
  • ಪಡಿತರ ಚೀಟಿ
  • ಜನನ ಪ್ರಮಾಣಪತ್ರ
  • ಮೊಬೈಲ್ ನಂಬರ
  • ವಯಸ್ಸಿನ ಪ್ರಮಾಣಪತ್ರ / ಜನನ ಪ್ರಮಾಣಪತ್ರ
  • ಪಾಸ್ಪೋರ್ಟ್ ಗಾತ್ರದ ಫೋಟೋ
  • ಬ್ಯಾಂಕ್ ಖಾತೆ ಹೇಳಿಕೆ

ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು. ಹಾಗೆಯೆ ಅಧಿಕೃತ ವೆಬ್ಸೈಟ್‌ https://pgsindia-ncof.gov.in/PKVY/Index.aspx# ನಲ್ಲೂ ನೀವು ಮಾಹಿತಿ ಹಾಗೂ ಅರ್ಜಿ ಸಲ್ಲಿಸುವ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 days ago