ಸುದ್ದಿಗಳು

ಸ್ತೀ ಶಕ್ತಿ ಸಂಘಗಳಿಗೆ ಒಟ್ಟು 5 ಲಕ್ಷ ರೂ. ಆರ್ಥಿಕ ನೆರವು | 2000 ಶಾಲಾ ಬಸ್ ಸೇವೆ : ಹಾಸ್ಟೆಲ್ ಗಳ ಸಾಮರ್ಥ್ಯ ಹೆಚ್ಚಳ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸ್ತ್ರೀ ಸಾಮರ್ಥ್ಯ ಯೋಜನೆಯಡಿ 10 ಸಾವಿರ ಮಹಿಳಾ ಸಂಘಗಳಿಗೆ ತಲಾ  1 ಲಕ್ಷದಂತೆ ಡಿಬಿಟಿ ಮಾಡಲಾಗಿದ್ದು, ಗ್ರಾಮದ ತಲಾ ಎರಡು ಸ್ತೀಶಕ್ತಿ ಸಂಘಗಳಿಗೆ ಒಟ್ಟು 5 ಲಕ್ಷ ರೂ. ಆರ್ಥಿಕ ನೆರವನ್ನು  ನೀಡಲಾಗುತ್ತದೆ.

Advertisement

ಸ್ತ್ರೀ ಸಾಮರ್ಥ್ಯ ಯೋಜನೆಯಡಿ 10 ಸಾವಿರ ಮಹಿಳಾ ಸಂಘಗಳಿಗೆ ತಲಾ  1 ಲಕ್ಷದಂತೆ ಡಿಬಿಟಿ ಮಾಡಲಾಗಿದ್ದು, ಗ್ರಾಮದ ತಲಾ ಎರಡು ಸ್ತೀಶಕ್ತಿ ಸಂಘಗಳಿಗೆ ಒಟ್ಟು 5 ಲಕ್ಷ ರೂ. ಆರ್ಥಿಕ ನೆರವನ್ನು  ನೀಡಲಾಗುತ್ತದೆ.

ಎರಡನೇ ಹಂತದ ಯೋಜನೆಯನ್ನು ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು.  ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನೂ ಸರ್ಕಾರ ಜಾರಿಗೊಳಿಸಿದೆ. ಮಹಿಳೆಯರು  ಹಾಗೂ ಯುವಕರ ಸ್ವಾವಲಂಬನೆ ಹಾಗೂ ಸ್ವಾಭಿಮಾನದ ಬದುಕನ್ನು ಬದುಕಬೇಕೆನ್ನುವುದು ಸರ್ಕಾರದ ಆಶಯ. ಕೃಷಿ ಕಾರ್ಮಿಕ ಮಹಿಳೆಯರಿಗೆ 1000 ರೂ. ಆರ್ಥಿಕ ಸಹಾಯ ನೀಡುವ ಯೋಜನೆ ರೂಪಿಸಲಾಗಿದೆ ಎಂದರು.

2000 ಶಾಲಾ ಬಸ್ ಸೇವೆ :ಜನರ ಸಮಸ್ಯೆಗಳನ್ನು ನಿವಾರಿಸುವ ಸ್ಪಂದನಾಶೀಲ ಸರ್ಕಾರ ನಮ್ಮದಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಡಯಾಲಿಸಿಸ್ ಸೈಕಲ್ ಹೆಚ್ಚಳ, ಕಿಮೋಥೆರಪಿ ಕೇಂದ್ರ ಹೆಚ್ಚಿಸಲಾಗಿದೆ. ಕಿವುಡರಿಗೆ ಶ್ರವಣ ಸಾಧನಕ್ಕೆ ಸಹಾಯಕ್ಕೆ 500 ಕೋಟಿ ರೂ. ನಿಗದಿಪಡಿಸಿದೆ. ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಶಾಲೆಗೆ ತೆರಳಲು 2000 ಶಾಲಾ ಬಸ್ ಸೇವೆಯನ್ನು ಪ್ರಾರಂಭಿಸಲಾಗುವುದು.

ಹೆಣ್ಣುಮಕ್ಕಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಮಾಡಲಾಗುವುದು. ಐಟಿಐಯಲ್ಲಿ ಪಿಯುಸಿಯ ಅನುತೀರ್ಣರಾದ ಯುವಕರಿಗೆ ತರಬೇತಿ ಹಾಗೂ 6 ತಿಂಗಳವರೆಗೆ 1500 ರೂ. ಭತ್ಯೆ ನೀಡಿ ಉದ್ಯೋಗವನ್ನು ಒದಗಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.  ದುಡಿಯುವ ವರ್ಗಕ್ಕೆ ಬೆಂಬಲ ನೀಡುವುದು ಸರ್ಕಾರದ ಆದ್ಯತೆಯಾಗಿದೆ. ನಾಡನ್ನು ಕಟ್ಟುವುದು ದುಡಿಯುವ ವರ್ಗ ಎಂದರು.

ಹಾಸ್ಟೆಲ್ ಗಳ ಸಾಮರ್ಥ್ಯ ಹೆಚ್ಚಳ :250 ಕೋಟಿ ರೂ. ವೆಚ್ಚದಲ್ಲಿ ಹಿಂದುಳಿದ ವರ್ಗದ ಹಾಸ್ಟೆಲ್ ಗಳ ಸಾಮರ್ಥ್ಯವನ್ನು ಹೆಚ್ಚಿಸಿ, 30 ಸಾವಿರ ಓಬಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ  1 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ. ನೇಕಾರರಿಗೆ ವಿದ್ಯುತ್ ಸಬ್ಸಿಡಿ,  2 ಲಕ್ಷದವರೆಗೆ ಸಾಲಸೌಲಭ್ಯ, ಸಹಾಯಧನ, 350 ಕೋಟಿ ರೂ. ವೆಚ್ಚದಲ್ಲಿ ಕುರಿಗಾಹಿಗಳ ಸಂಘಕ್ಕೆ 20 ಕುರಿ 1 ಮೇಕೆ ನೀಡಲಾಗುತ್ತಿದೆ.

ಎಸ್ ಸಿ ಎಸ್ ಟಿ ಮೀಸಲಾತಿಯನ್ನು ಹೆಚ್ಚಿಸಲಾಗಿದೆ.  ಸಂವಿಧಾನದ 9 ನೇ ಶೆಡ್ಯೂಲ್ ಗೆ ಈ ಹೆಚ್ಚಳವನ್ನು ಸೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸರ್ಕಾರದ ಸೌಲಭ್ಯಗಳ ಬಗ್ಗೆ ಬೆಳಕು ಚೆಲ್ಲಿ , ಇನ್ನಷ್ಟು ಜನರು ಸರ್ಕಾರದ ಯೋಜನೆಗಳ ಲಾಭ ಪಡೆಯಬೇಕೆನ್ನುವ ಉದ್ದೇಶದಿಂದ ಫಲಾನುಭವಿಗಳ ಸಮ್ಮೇಳನವನ್ನು ಏರ್ಪಡಿಸಲಾಗುತ್ತಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…

1 hour ago

ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…

1 hour ago

ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…

12 hours ago

ರಾಜ್ಯದ 6 ಜಿಲ್ಲೆಗಳಲ್ಲಿ ಶೀಥಲೀಕರಣ ಘಟಕ ನಿರ್ಮಾಣ

ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…

12 hours ago

ಕೇಂದ್ರದ ಬೆಂಬಲಕ್ಕಾಗಿ  ವಿಶೇಷ ಜಾಥಾ | ಪಕ್ಷಾತೀತವಾಗಿ  ಬೆಂಬಲ

ದೇಶದ  ಸೈನಿಕರಿಗೆ ಗೌರವ ಸಲ್ಲಿಸಿ  ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ  ನಾಳೆ…

13 hours ago