Advertisement
Categories: Uncategorized

ಮಹಿಳಾ ನೌಕರರು, ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ | ಉಚಿತ ಬಸ್ ಪಾಸ್ ವಿತರಿಸಲು ಸರ್ಕಾರ ನಿರ್ಧಾರ | ಸಾರಿಗೆ ನೌಕರರ ವೇತನ ಹೆಚ್ಚಳದ ಭರವಸೆ |

Share

ಮಹಿಳಾ ನೌಕರರು ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಏಪ್ರಿಲ್ 1 ರಿಂದಲೇ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದೆ. ಮಂಗಳವಾರ ವಿಧಾನಸೌಧ ಎದುರು ಕೆಎಸ್ಆರ್ಟಿಸಿ  ಅಂಬಾರಿ ಉತ್ಸವ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿಗಳು, ದುಡಿಯುವ ಹೆಣ್ಣು ಮಕ್ಕಳಿಗೆ, ಶಾಲಾ ವಿದ್ಯಾರ್ಥಿನಿಯರಿಗೆ ಏಪ್ರಿಲ್ 1 ರಿಂದ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ಉದ್ಯೋಗಸ್ಥ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು, ಗೌರವಯುತವಾಗಿ ಜೀವನ ಸಾಗಿಸಲು ಉಚಿತ ಬಸ್‌ಪಾಸ್‌ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶಾಲಾ ಅವಧಿಯಲ್ಲಿ ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ ಐದು ಬಸ್‌ಗಳನ್ನು ಓಡಿಸಲಾಗುವುದು.ಈ ಸಂಬಂಧ ಅಧಿಕಾರಿಗಳು ಅಗತ್ಯ ಕ್ರಮಗಳ ಕೈಗೊಳ್ಳಬೇಕು ಎಂದು ಸೂಚಿಸಿದರು.

ಪ್ರತಿಭಟನೆಗೆ ಸಜ್ಜಾಗಿರುವ ಕಾರ್ಮಿಕ ಸಂಘಟನೆಗಳ ಜತೆ ಮಾತನಾಡುತ್ತೇನೆ.. : 
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ತೀವ್ರ ಪ್ರತಿಭಟನೆಗೆ ಸಜ್ಜಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಮಿಕ ಸಂಘಟನೆಗಳ ಜೊತೆಗೆ ಮಾತನಾಡುತ್ತೇನೆಂದು ಹೇಳಿದರು.

ಸಾರಿಗೆ ಸಂಸ್ಥೆಗಳ ಜತೆ ಮಾತುಕತೆ ನಡೆಸಿ ರಾಜ್ಯದ ಪ್ರಸ್ತುತ ಆರ್ಥಿಕ ಪರಿಸ್ಥಿತಿ ಆಧರಿಸಿ ವೇತನ ಹೆಚ್ಚಳ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ. ಸಾರಿಗೆ ನೌಕರರ ವೇತನ ಹೆಚ್ಚಳದ ಬೇಡಿಕೆಯನ್ನು ಶೀಘ್ರ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

24 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

24 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago