ಮಹಿಳಾ ನೌಕರರು ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಏಪ್ರಿಲ್ 1 ರಿಂದಲೇ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದೆ. ಮಂಗಳವಾರ ವಿಧಾನಸೌಧ ಎದುರು ಕೆಎಸ್ಆರ್ಟಿಸಿ ಅಂಬಾರಿ ಉತ್ಸವ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿಗಳು, ದುಡಿಯುವ ಹೆಣ್ಣು ಮಕ್ಕಳಿಗೆ, ಶಾಲಾ ವಿದ್ಯಾರ್ಥಿನಿಯರಿಗೆ ಏಪ್ರಿಲ್ 1 ರಿಂದ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಉದ್ಯೋಗಸ್ಥ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು, ಗೌರವಯುತವಾಗಿ ಜೀವನ ಸಾಗಿಸಲು ಉಚಿತ ಬಸ್ಪಾಸ್ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶಾಲಾ ಅವಧಿಯಲ್ಲಿ ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ ಐದು ಬಸ್ಗಳನ್ನು ಓಡಿಸಲಾಗುವುದು.ಈ ಸಂಬಂಧ ಅಧಿಕಾರಿಗಳು ಅಗತ್ಯ ಕ್ರಮಗಳ ಕೈಗೊಳ್ಳಬೇಕು ಎಂದು ಸೂಚಿಸಿದರು.
ಪ್ರತಿಭಟನೆಗೆ ಸಜ್ಜಾಗಿರುವ ಕಾರ್ಮಿಕ ಸಂಘಟನೆಗಳ ಜತೆ ಮಾತನಾಡುತ್ತೇನೆ.. :
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ತೀವ್ರ ಪ್ರತಿಭಟನೆಗೆ ಸಜ್ಜಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಮಿಕ ಸಂಘಟನೆಗಳ ಜೊತೆಗೆ ಮಾತನಾಡುತ್ತೇನೆಂದು ಹೇಳಿದರು.
ಸಾರಿಗೆ ಸಂಸ್ಥೆಗಳ ಜತೆ ಮಾತುಕತೆ ನಡೆಸಿ ರಾಜ್ಯದ ಪ್ರಸ್ತುತ ಆರ್ಥಿಕ ಪರಿಸ್ಥಿತಿ ಆಧರಿಸಿ ವೇತನ ಹೆಚ್ಚಳ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ. ಸಾರಿಗೆ ನೌಕರರ ವೇತನ ಹೆಚ್ಚಳದ ಬೇಡಿಕೆಯನ್ನು ಶೀಘ್ರ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…