Advertisement
MIRROR FOCUS

2024ರ ಬಜೆಟ್‌ನಲ್ಲಿ ಕೇಂದ್ರ ಸರ್ಕಾರದಿಂದ ಮಹಿಳೆಯರತ್ತಲೂ ಚಿತ್ತ | ಬಜೆಟ್‌ನಲ್ಲಿ ಮಹತ್ವದ ಘೋಷಣೆ |

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸತತ 7ನೇ ಬಾರಿಗೆ ಬಜೆಟ್(Union Budget) ಮಂಡಿಸಿದ್ದಾರೆ. ಬಜೆಟ್ ಮಂಡನೆ ವೇಳೆ ನರೇಂದ್ರ ಮೋದಿಯವರ(PM Narendra Modi) ನಾಯಕತ್ವದಲ್ಲಿ ಮೂರನೇ ಬಾರಿಗೆ ಸಂಪುಟಕ್ಕೆ ಸೇರ್ಪಡೆಯಾಗಿರುವುದು ನನಗೆ ಹೆಮ್ಮೆ ತಂದಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸ್ವತಃ ತಾವೇ ಮಹಿಳೆಯಾಗಿರುವ(Woman) ಹಿನ್ನೆಲೆ ಹಣಕಾಸು ಸಚಿವೆ ದೇಶದ ಮಹಿಳೆಯರಿಗೆ ವಿಶೇಷ ಕೊಡುಗೆಗಳನ್ನು ನೀಡುವ ಸಾಧ್ಯತೆ ಹೆಚ್ಚು ಎಂದು ಅನೇಕ ಮಹಿಳೆಯರು ನಿರೀಕ್ಷೆಯಿಂದ ಇದ್ದರು. ಮಹಿಳೆಯರ ಆಸೆಯಂತೆ ಇಂದು ದೇಶದ ನಾರಿಯರಿಗೆ ಸುಮಾರು ಗಿಫ್ಟ್‌ಗಳನ್ನು ನೀಡಿದ್ದಾರೆ.

ರೈತರು, ಮಹಿಳೆಯರು, ವಿದ್ಯಾರ್ಥಿಗಳು, ಬಡವರಿಗೆ ಹೆಚ್ಚಿನ ಆದ್ಯತೆ ನೀಡಿ ಈ ಬಜೆಟ್ ಮಂಡಿಸುತ್ತಿದ್ದೇವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ಅಲ್ಲದೇ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಮಹಿಳೆಯರಿಗೆ ದೊಡ್ಡ ಸ್ಥಾನ ನೀಡಿದೆ. ನಿರ್ಮಲಾ ಸೀತಾರಾಮನ್ ಅವರು ಗ್ರಾಮೀಣಾಭಿವೃದ್ಧಿಗೆ 2.66 ಲಕ್ಷ ಕೋಟಿ ರೂಪಾಯಿ ಉದ್ಯೋಗ, ಶಿಕ್ಷಣಕ್ಕೆ 1.48 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದೆ. ಮಹಿಳೆಯರ ಕೌಶಲ್ಯಾಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ವ್ಯವಸ್ಥೆ ಮಾಡಲಾಗುವುದು. ಮಹಿಳೆಯರಿಗೆ 3 ಲಕ್ಷ ಕೋಟಿ ರೂಪಾಯಿ, 20 ಲಕ್ಷ ಯುವಕ-ಯುವತಿಯರಿಗೆ ತರಬೇತಿ ನೀಡಲು ಉದ್ಯೋಗಿ ಮಹಿಳಾ ಹಾಸ್ಟೆಲ್‌ಗಳನ್ನು ಸ್ಥಾಪಿಸಿ ಹೊಸ ಕಾರ್ಯಕ್ರಮ ನೀಡಲಾಗುವುದು ಎಂದು ಭರವಸೆ ನೀಡಿದರು.

ಉಳಿದಂತೆ ಬಜೆಟ್-2024 ರಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ (MSME) ವಲಯವನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಮುದ್ರಾ ಯೋಜನೆಯಡಿ ಸಾಲದ ಮಿತಿಯನ್ನು ಹೆಚ್ಚಿಸಿದೆ. ಪ್ರಸ್ತುತ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ 10 ರೂಪಾಯಿ ಲಕ್ಷದವರೆಗೆ ಸಾಲ ನೀಡಲಾಗುತ್ತದೆ. ಆದರೆ ಈಗ ಈ ಸಾಲದ ಮಿತಿಯನ್ನು 20 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ. ಇದಂರಂತೆ ನೀವು 20 ಲಕ್ಷದವರೆಗೂ ಸಾಲ ಪಡೆಯಬಹುದು. ಯುವಕರನ್ನು ಉದ್ಯಮಿಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ 2015 ರಲ್ಲಿ ಈ ಯೋಜನೆಯನ್ನು ಪ್ರಾರಂಭಿಸಿತು. ಇದು ಅಗತ್ಯ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುತ್ತಿದೆ. ಇದು ನಿರುದ್ಯೋಗಿಗಳಿಗೆ ಮತ್ತು ಸ್ವಂತ ಉದ್ಯಮವನ್ನು ಪ್ರಾರಂಭಿಸಲು ಬಯಸುವ ಯುವಕರನ್ನು ಬೆಂಬಲಿಸುತ್ತದೆ. ಅವರಿಗೆ ಆರ್ಥಿಕ ಪ್ರೋತ್ಸಾಹವನ್ನು ಸಾಲದ ರೂಪದಲ್ಲಿ ನೀಡಲಾಗುತ್ತದೆ. ಸದ್ಯ ಈ ಮೂಲಕ ಯಾವುದೇ ಭದ್ರತೆ ಇಲ್ಲದೆ 10 ಲಕ್ಷ ರೂಪಾಯಿ ವರೆಗೂ ಸಾಲ ಲಭ್ಯವಿದೆ. ಈಗ ಆ ಮಿತಿ 20 ಲಕ್ಷ ರೂಪಾಯಿಗೆ ಏರಿಕೆಯಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!

ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…

3 hours ago

ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…

3 hours ago

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

12 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

12 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

12 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

13 hours ago