ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಹುತೇಕ ಕಡೆಗಳಲ್ಲಿ ಹಾಗೂ ಕಡಬ ತಾಲೂಕು, ಪುತ್ತೂರು ತಾಲೂಕಿನ ವಿವಿದೆಡೆ ಮಂಗಳವಾರ ಸಂಜೆ ಉತ್ತಮ ಮಳೆಯಾಗಿದೆ. ಸಂಜೆ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಸುಳ್ಯದ ಮಡಪ್ಪಾಡಿ ಸಹಿತ ಆಸುಪಾಸಿನ ಕಡೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾದೆ, ಸುಳ್ಯದಲ್ಲಿ ಭಾರೀ ಮಳೆಯಾಯಿತು. ಮರ್ಕಂಜದಲ್ಲೂ ಗುಡುಗು ಸಹಿತ ಮಳೆಯಾಗಿದೆ, ಸಿಡಿಲಿನಿಂದ ಮನೆಯೊಂದಕ್ಕೆ ಹಾನಿಯಾಗಿದೆ. ಉಳಿದಂತೆ ಸುಬ್ರಹ್ಮಣ್ಯ, ಕಡಬ ಕಡೆಗಳಲ್ಲೂ ಮಳೆಯಾಗಿದೆ.
ಪುತ್ತೂರು ತಾಲೂಕಿನ ಹಲವು ಕಡೆ ಮಳೆಯಾಗಿದೆ. ಪುತ್ತೂರು ನಗರದಲ್ಲಿ ಕೂಡಾ ಸಿಡಿಲಿನ ಅಬ್ಬರದಿಂದ ವಾಣಿಜ್ಯ ಮಳಿಗೆಯೊಂದಕ್ಕೆ ಹಾನಿಯಾಗಿದೆ. ಪುತ್ತೂರಿನಲ್ಲಿ ಫೋಟೊ ಸ್ಟುಡಿಯೋ ಆಡ್ ಲ್ಯಾಬ್ ಕೂಡಾ ಸಿಡಿಲಿಗೆ ಹಾನಿಯಾಗಿದೆ.
ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…
ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…
ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ ಮೂರು ದಿನಗಳ…
ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…
24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…