ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಹುತೇಕ ಕಡೆಗಳಲ್ಲಿ ಹಾಗೂ ಕಡಬ ತಾಲೂಕು, ಪುತ್ತೂರು ತಾಲೂಕಿನ ವಿವಿದೆಡೆ ಮಂಗಳವಾರ ಸಂಜೆ ಉತ್ತಮ ಮಳೆಯಾಗಿದೆ. ಸಂಜೆ ವೇಳೆಗೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಸುಳ್ಯದ ಮಡಪ್ಪಾಡಿ ಸಹಿತ ಆಸುಪಾಸಿನ ಕಡೆಗಳಲ್ಲಿ ಭಾರೀ ಗುಡುಗು ಸಹಿತ ಮಳೆಯಾದೆ, ಸುಳ್ಯದಲ್ಲಿ ಭಾರೀ ಮಳೆಯಾಯಿತು. ಮರ್ಕಂಜದಲ್ಲೂ ಗುಡುಗು ಸಹಿತ ಮಳೆಯಾಗಿದೆ, ಸಿಡಿಲಿನಿಂದ ಮನೆಯೊಂದಕ್ಕೆ ಹಾನಿಯಾಗಿದೆ. ಉಳಿದಂತೆ ಸುಬ್ರಹ್ಮಣ್ಯ, ಕಡಬ ಕಡೆಗಳಲ್ಲೂ ಮಳೆಯಾಗಿದೆ.
ಪುತ್ತೂರು ತಾಲೂಕಿನ ಹಲವು ಕಡೆ ಮಳೆಯಾಗಿದೆ. ಪುತ್ತೂರು ನಗರದಲ್ಲಿ ಕೂಡಾ ಸಿಡಿಲಿನ ಅಬ್ಬರದಿಂದ ವಾಣಿಜ್ಯ ಮಳಿಗೆಯೊಂದಕ್ಕೆ ಹಾನಿಯಾಗಿದೆ. ಪುತ್ತೂರಿನಲ್ಲಿ ಫೋಟೊ ಸ್ಟುಡಿಯೋ ಆಡ್ ಲ್ಯಾಬ್ ಕೂಡಾ ಸಿಡಿಲಿಗೆ ಹಾನಿಯಾಗಿದೆ.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…