ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ ಪ್ರಮುಖ ಜಲಾಶಯವಾದ ಹಾರಂಗಿಗೆ ನೀರಿನ ಒಳಹರಿವಿನಲ್ಲಿ ಹೆಚ್ಚಳವಾಗಿದೆ. ಜಲಾಶಯಕ್ಕೆ 10 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ನದಿಗೆ 14500 ಕ್ಯೂಸೆಕ್ ನೀರು ಹೊರಬಿಡಲಾಗಿದೆ. ದಾವಣಗೆರೆ ಜಿಲ್ಲೆಯ ಮೂಲಕ ಹಾದು ಹೋಗಿರುವ ತುಂಗಾಭದ್ರಾ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಹೊನ್ನಾಳಿಯಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಜಿ.ಎಂ.ಗಂಗಾಧರ ಸ್ವಾಮಿ ಹೇಳಿದ್ದಾರೆ. ತುಂಗಾ ಜಲಾಶಯದಿಂದ 69 ಸಾವಿರ ಮತ್ತು ಭದ್ರಾ ಜಲಾಶಯದಿಂದ 37 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಇದರಿಂದ ಹೊನ್ನಾಳಿ ಪಟ್ಟಣದ ಬಾಲರಾಜ್ಘಾಟ್ ಪ್ರದೇಶದ ಸಂತ್ರಸ್ಥರಿಗಾಗಿ ಅಂಬೇಡ್ಕರ್ ಭವನದಲ್ಲಿ ಕಾಳಜಿ ಕೇಂದ್ರ ತೆರೆದು 8 ಕುಟುಂಬದ 33 ಜನರನ್ನು ಸ್ಥಳಾಂತರ ಮಾಡಿ ಮೂಲ ಸೌಕರ್ಯ ಹಾಗೂ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…