ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ ಪ್ರಮುಖ ಜಲಾಶಯವಾದ ಹಾರಂಗಿಗೆ ನೀರಿನ ಒಳಹರಿವಿನಲ್ಲಿ ಹೆಚ್ಚಳವಾಗಿದೆ. ಜಲಾಶಯಕ್ಕೆ 10 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ ನದಿಗೆ 14500 ಕ್ಯೂಸೆಕ್ ನೀರು ಹೊರಬಿಡಲಾಗಿದೆ. ದಾವಣಗೆರೆ ಜಿಲ್ಲೆಯ ಮೂಲಕ ಹಾದು ಹೋಗಿರುವ ತುಂಗಾಭದ್ರಾ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಹೊನ್ನಾಳಿಯಲ್ಲಿ ಕಾಳಜಿ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಜಿ.ಎಂ.ಗಂಗಾಧರ ಸ್ವಾಮಿ ಹೇಳಿದ್ದಾರೆ. ತುಂಗಾ ಜಲಾಶಯದಿಂದ 69 ಸಾವಿರ ಮತ್ತು ಭದ್ರಾ ಜಲಾಶಯದಿಂದ 37 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಇದರಿಂದ ಹೊನ್ನಾಳಿ ಪಟ್ಟಣದ ಬಾಲರಾಜ್ಘಾಟ್ ಪ್ರದೇಶದ ಸಂತ್ರಸ್ಥರಿಗಾಗಿ ಅಂಬೇಡ್ಕರ್ ಭವನದಲ್ಲಿ ಕಾಳಜಿ ಕೇಂದ್ರ ತೆರೆದು 8 ಕುಟುಂಬದ 33 ಜನರನ್ನು ಸ್ಥಳಾಂತರ ಮಾಡಿ ಮೂಲ ಸೌಕರ್ಯ ಹಾಗೂ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…