Advertisement
ವೆದರ್ ಮಿರರ್

ಹವಾಮಾನ ವರದಿ | 10-06-2025 | ಜೂ.11 ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ಮುನ್ಸೂಚನೆ

Share

11.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕರಾವಳಿ ತೀರ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 11ರಂದು ಸಹ ಕರಾವಳಿ ತೀರ ಭಾಗಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಸೂಚನೆಗಳಿವೆ. ಜೂನ್ 11ರಿಂದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಲ್ಲೂ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೂ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆಗಳಿವೆ. ಈಗಿನಂತೆ ನಾಳೆಯೂ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜೂನ್ 12 ರಿಂದ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚೆನೆ ಇದೆ.

ಒಳನಾಡು : ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಹಾಗೂ ತುಂತುರು ಮಳೆಯ ಮುನ್ಸೂಚನೆ ಇದೆ.ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ) ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಜೂನ್ 11ರಿಂದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಹೆಚ್ಚಾಗುವ ಲಕ್ಷಣಗಳಿವೆ.

ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಬಂಗಾಳಕೂಲ್ಲಿಯ ಮೇಲ್ಮೈ ಸುಳಿಗಾಳಿಯು ಜೂನ್ 11ರ ರಾತ್ರಿ ಅಥವಾ 12ರಂದು ಆಂದ್ರಾ ಕರಾವಳಿಗೆ ಪ್ರವೇಶಿಸುವ ಸಾಧ್ಯತೆಗಳಿವೆ. ಇದರ ಪರಿಣಾಮದಿಂದ ಮುಂಗಾರು ಚುರುಕಾಗಿದ್ದು, ರಾಜ್ಯದಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

12 minutes ago

ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ

ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…

5 hours ago

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

7 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

8 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

8 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

12 hours ago