Advertisement
ವೆದರ್ ಮಿರರ್

ಹವಾಮಾನ ವರದಿ | 23-07-2025 | ನಿರಂತರ ಹನಿ ಮಳೆಗೆ ಕಾರಣವೇನು..? | ವಾಯುಭಾರ ಕುಸಿತದ ಪರಿಣಾಮವೂ…ಮಳೆಯ ಆತಂಕವೂ…!

Share

24.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ವಾಯುಭಾರ ಕುಸಿತದ ಪರಿಣಾಮದಿಂದ ಜುಲೈ 29 ರ ತನಕ ಮಳೆ ಮುಂದುವರಿಯುವ ಲಕ್ಷಣಗಳಿವೆ. ಬಿಡುವಿನ ಅವಧಿ ಕಡಿಮೆ ಇದ್ದು, ನಿರಂತರ ಹನಿ ಮಳೆಯ ಸಾಧ್ಯತೆ ಇದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ದೀರ್ಘ ಅವಧಿಯ ಹನಿ ಮಳೆ ಜುಲೈ 28 ರ ತನಕ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ರಾಯಚೂರು, ಕಲಬುರ್ಗಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಮಹಾರಾಷ್ಟ್ರ ಗಡಿ ಭಾಗಗಳ ತಾಲೂಕುಗಳಲ್ಲಿ ಮೋಡ ಮಾತ್ರ ಇರಬಹುದು.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ ಜಿಲ್ಲೆಯಲ್ಲಿ ಮೋಡದ ವಾತಾವರಣ ಇರಬಹುದು.  ಈಗಿನಂತೆ ಜುಲೈ 28ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಜೋರು ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಬಾಂಗ್ಲಾದೇಶದ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ದೀರ್ಘ ಅವಧಿಯ ಸಾಮಾನ್ಯ ಮಳೆಯಾಗುತ್ತಿದೆ. ವಾಯುಭಾರ ಕುಸಿತವು ಪ್ರಭಲಗೊಂಡಲ್ಲಿ ಮಳೆಯ ಪ್ರಮಾಣವೂ ಹೆಚ್ಚಾಗುವ ಆತಂಕವಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

2 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

12 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

18 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago