ಹವಾಮಾನ ಮಾಹಿತಿ | ಈಗ ಎಲ್ಲೆಲ್ಲಾ ಭರ್ಜರಿ ಮಳೆ..? ಎಲ್ಲಿ ಕುಸಿತ..?

June 20, 2025
10:11 PM

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ ನೀಡಿದೆ. ಈಗ ಮಹಾರಾಷ್ಟ್ರ, ಹಿಮಾಚಲ ಪ್ರದೇಶ ಸೇರಿದಂತೆ ದೆಹಲಿಗೂ ಮುಂಗಾರು ಮಳೆ ವಿಸ್ತರಣೆಯಾಗುತ್ತಿದೆ.

Advertisement

ಹಿಮಾಚಲ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು ಪ್ರವಾಹವನ್ನು ಎದುರಿಸುತ್ತಿದೆ, ಮಳೆಯಿಂದಾಗಿ ಹಲವಾರು ಪ್ರದೇಶಗಳಲ್ಲಿ ಭೂಕುಸಿತಗಳು ಸಂಭವಿಸಿವೆ. ಜೂನ್ 22, 23, 25 ಮತ್ತು 26 ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಈಗಾಗಲೇ ಕೆಲವು ಕಡೆ ರಸ್ತೆಗಳು ಕುಸಿದು ಸಂಚಾರ ದುಸ್ತರವಾಗಿದೆ. ಬೆಟ್ಟಗಳಲ್ಲಿ ಭಾರೀ ಮಳೆಯಿಂದಾಗಿ  ಭೂಕುಸಿತ ಮತ್ತು ಮಣ್ಣು ಕುಸಿತ ಸಂಭವಿಸಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.  ಮುಂದಿನ ಎರಡು ಮೂರು ದಿನಗಳಲ್ಲಿ ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಪ್ರಬಲವಾಗಲಿದೆ.

ಇದೇ ವೇಳೆ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಮುಂಬೈ, ಥಾಣೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.  ಮುಂಬೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ 142.6 ಮಿ.ಮೀ ಮಳೆಯಾಗಿದ್ದು, ಭಾರೀ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ 142.6 ಮಿ.ಮೀ ಮಳೆಯಾಗಿದ್ದು, ರಾಯಗಢ ಜಿಲ್ಲೆ (134.1 ಮಿ.ಮೀ), ಪಾಲ್ಘರ್ (120.9 ಮಿ.ಮೀ), ಥಾಣೆ (90.3 ಮಿ.ಮೀ) ಮತ್ತು ಮುಂಬೈ ಉಪನಗರ ಪ್ರದೇಶಗಳಲ್ಲಿ (60.5 ಮಿ.ಮೀ) ಮಳೆಯಾಗಿದೆ. ಜೂನ್ 21 ಮತ್ತು ಜೂನ್ 22 ರಂದು ಭಾರೀ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಂದಿನ ಐದು ದಿನಗಳಲ್ಲಿ ಮಳೆ, ಗುಡುಗು ಸಹಿತ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ. ಐಎಂಡಿ ಪ್ರಕಾರ, ಶುಕ್ರವಾರ ದೆಹಲಿಯ ಗರಿಷ್ಠ ತಾಪಮಾನವು 36 ಡಿಗ್ರಿಗಿಂತ ಕಡಿಮೆ ಇತ್ತು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 09-07-2025 | ಇಂದು ಸಾಮಾನ್ಯ ಮಳೆ | ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳಬಹುದಾ ? |
July 9, 2025
1:47 PM
by: ಸಾಯಿಶೇಖರ್ ಕರಿಕಳ
ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |
July 9, 2025
10:57 AM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.
July 9, 2025
7:44 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್
July 9, 2025
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror