MIRROR FOCUS

ಹವಾಮಾನ ಮಾಹಿತಿ | ಈಗ ಎಲ್ಲೆಲ್ಲಾ ಭರ್ಜರಿ ಮಳೆ..? ಎಲ್ಲಿ ಕುಸಿತ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಭರ್ಜರಿಯಾಗಿ ಸುರಿದ ಮಳೆ ಈಗ ಸ್ವಲ್ಪ ವಿರಾಮ ನೀಡಿದೆ. ಈಗ ಮಹಾರಾಷ್ಟ್ರ, ಹಿಮಾಚಲ ಪ್ರದೇಶ ಸೇರಿದಂತೆ ದೆಹಲಿಗೂ ಮುಂಗಾರು ಮಳೆ ವಿಸ್ತರಣೆಯಾಗುತ್ತಿದೆ.

Advertisement

ಹಿಮಾಚಲ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು ಪ್ರವಾಹವನ್ನು ಎದುರಿಸುತ್ತಿದೆ, ಮಳೆಯಿಂದಾಗಿ ಹಲವಾರು ಪ್ರದೇಶಗಳಲ್ಲಿ ಭೂಕುಸಿತಗಳು ಸಂಭವಿಸಿವೆ. ಜೂನ್ 22, 23, 25 ಮತ್ತು 26 ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಈಗಾಗಲೇ ಕೆಲವು ಕಡೆ ರಸ್ತೆಗಳು ಕುಸಿದು ಸಂಚಾರ ದುಸ್ತರವಾಗಿದೆ. ಬೆಟ್ಟಗಳಲ್ಲಿ ಭಾರೀ ಮಳೆಯಿಂದಾಗಿ  ಭೂಕುಸಿತ ಮತ್ತು ಮಣ್ಣು ಕುಸಿತ ಸಂಭವಿಸಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.  ಮುಂದಿನ ಎರಡು ಮೂರು ದಿನಗಳಲ್ಲಿ ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಪ್ರಬಲವಾಗಲಿದೆ.

ಇದೇ ವೇಳೆ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಮುಂಬೈ, ಥಾಣೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.  ಮುಂಬೈನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ 142.6 ಮಿ.ಮೀ ಮಳೆಯಾಗಿದ್ದು, ಭಾರೀ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ 142.6 ಮಿ.ಮೀ ಮಳೆಯಾಗಿದ್ದು, ರಾಯಗಢ ಜಿಲ್ಲೆ (134.1 ಮಿ.ಮೀ), ಪಾಲ್ಘರ್ (120.9 ಮಿ.ಮೀ), ಥಾಣೆ (90.3 ಮಿ.ಮೀ) ಮತ್ತು ಮುಂಬೈ ಉಪನಗರ ಪ್ರದೇಶಗಳಲ್ಲಿ (60.5 ಮಿ.ಮೀ) ಮಳೆಯಾಗಿದೆ. ಜೂನ್ 21 ಮತ್ತು ಜೂನ್ 22 ರಂದು ಭಾರೀ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಂದಿನ ಐದು ದಿನಗಳಲ್ಲಿ ಮಳೆ, ಗುಡುಗು ಸಹಿತ ಮಳೆ ಮತ್ತು ಬಿರುಗಾಳಿಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ. ಐಎಂಡಿ ಪ್ರಕಾರ, ಶುಕ್ರವಾರ ದೆಹಲಿಯ ಗರಿಷ್ಠ ತಾಪಮಾನವು 36 ಡಿಗ್ರಿಗಿಂತ ಕಡಿಮೆ ಇತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ ಏನಾಗುತ್ತಿದೆ…? | 500 ರೂಪಾಯಿ ಯಾವಾಗ ಆಗುತ್ತೆ…?

ಕಳೆದ ಕೆಲವು ದಿನಗಳಿಂದ ಅಡಿಕೆ ಬೆಳೆಗಾರರಿಗೆ ನಿರೀಕ್ಷೆಯ ಮೇಲೆ ನಿರೀಕ್ಷೆ.ಚಾಲಿ ಅಡಿಕೆ ಧಾರಣೆ…

6 hours ago

ಕುಂಡಲಿಯ ರಹಸ್ಯ | ಈ ರಾಶಿಯವರಿಗೆ 12ನೇ ಮನೆಯಿಂದ ಗುಪ್ತ ಶತ್ರುಗಳ ಎಚ್ಚರಿಕೆ

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್…

6 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು

ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…

13 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ

ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ  |…

13 hours ago

ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ

ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…

14 hours ago

ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ

ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…

14 hours ago