ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

June 14, 2025
9:57 PM

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ ಕವಿಕಲ್ ಗಂಡಿ ಬಳಿ ರಸ್ತೆ ಮಣ್ಣು ಕಲ್ಲುಗಳು ರಸ್ತೆಗೆ ಕುಸಿದು ಬಿದ್ದಿವೆ.  ಮಲೆನಾಡು ಭಾಗದಲ್ಲಿ ಗಾಳಿ ಸಹಿತ ಮಳೆಯಾಗುತ್ತಿದ್ದು  ಪ್ರವಾಸಿಗರು ಸಾರ್ವಜನಿಕರು ಗುಡ್ಡಗಾಡು ಪ್ರದೇಶಕ್ಕೆ ತೆರಳುವುದು, ನೀರಿಗೆ ಇಳಿಯುವುದು ಮಾಡಬಾರದು. ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ರಾಜ್ಯದ ಉತ್ತರ ಒಳನಾಡಿನಲ್ಲಿ  ನೈಋತ್ಯ ಮುಂಗಾರು ತೀವ್ರವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿತ್ತು. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಅನೇಕ ಸ್ಥಳಗಳಲ್ಲಿ ಮಳೆಯಾಗಿದೆ. ಮುಂದಿನ ಎರಡು ದಿನಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡುಗು, ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ  ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಿಜಯನಗರ, ಬಳ್ಳಾರಿ, ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರ ಮಳೆಯಾಗುವ ನಿರೀಕ್ಷಿಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡು ಮೂರು ದಿನದಿಂದ ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದೆ. ಅಣ್ಣಿಗೇರಿ, ನವಲಗುಂದ ಹಾಗೂ ಕುಂದಗೋಳ ತಾಲೂಕಿನ 130 ಮನೆಗಳಿಗೆ ಭಾಗಶಃ ಹಾನಿಯಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ
September 1, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror