ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ ಕವಿಕಲ್ ಗಂಡಿ ಬಳಿ ರಸ್ತೆ ಮಣ್ಣು ಕಲ್ಲುಗಳು ರಸ್ತೆಗೆ ಕುಸಿದು ಬಿದ್ದಿವೆ. ಮಲೆನಾಡು ಭಾಗದಲ್ಲಿ ಗಾಳಿ ಸಹಿತ ಮಳೆಯಾಗುತ್ತಿದ್ದು ಪ್ರವಾಸಿಗರು ಸಾರ್ವಜನಿಕರು ಗುಡ್ಡಗಾಡು ಪ್ರದೇಶಕ್ಕೆ ತೆರಳುವುದು, ನೀರಿಗೆ ಇಳಿಯುವುದು ಮಾಡಬಾರದು. ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ರಾಜ್ಯದ ಉತ್ತರ ಒಳನಾಡಿನಲ್ಲಿ ನೈಋತ್ಯ ಮುಂಗಾರು ತೀವ್ರವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿತ್ತು. ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಅನೇಕ ಸ್ಥಳಗಳಲ್ಲಿ ಮಳೆಯಾಗಿದೆ. ಮುಂದಿನ ಎರಡು ದಿನಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡುಗು, ಮೈಸೂರು, ಹಾಸನ, ಚಾಮರಾಜನಗರ, ಮಂಡ್ಯ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಿಜಯನಗರ, ಬಳ್ಳಾರಿ, ಬೆಂಗಳೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರ ಮಳೆಯಾಗುವ ನಿರೀಕ್ಷಿಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎರಡು ಮೂರು ದಿನದಿಂದ ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದೆ. ಅಣ್ಣಿಗೇರಿ, ನವಲಗುಂದ ಹಾಗೂ ಕುಂದಗೋಳ ತಾಲೂಕಿನ 130 ಮನೆಗಳಿಗೆ ಭಾಗಶಃ ಹಾನಿಯಾಗಿದೆ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…