Advertisement
ಸುದ್ದಿಗಳು

ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀ

Share

ಮಕ್ಕಳಿಗೆ ಎಳವೆಯಲ್ಲೇ ಸುಜ್ಞಾನ ನೀಡಿ. ತಂದೆ- ತಾಯಿಗಳನ್ನು ದೇವರಂತೆ ಭಕ್ತಿಯಿಂದ ಕಾಣುವ ಸಂಸ್ಕಾರವನ್ನು ನೀಡುವಂತಾಗಬೇಕು. ಆಗ ಮಾತ್ರ ಸಮಾಜಕ್ಕೆ ಭವಿಷ್ಯ  ಏಕೆಂದರೆ ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ ಎಂದು ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀ ಸ್ವಾಮೀಜಿ ಹೇಳಿದರು.

ಅವರು ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತದಲ್ಲಿರುವ ಪರಮಪೂಜ್ಯರ 50 ನೇ ವರ್ಧಂತ್ಯುತ್ಸವ ಅಂಗವಾಗಿ ನಡೆದ ಧಾರ್ಮಿಕ ಸಭೆಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾಜದ ಪ್ರತಿಯೊಬ್ಬರೂ ಗೋವು, ವಿದ್ಯೆ ಹಾಗೂ ಧರ್ಮರಕ್ಷಣೆಗೆ ಕಂಕಣಬದ್ಧರಾಗಬೇಕು, ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದೇ ನಿಜವಾದ ವರ್ಧಂತಿ ಎಂದು ನುಡಿದರು. ಗೋವಿನಲ್ಲಿ ಧರ್ಮ ಅಡಗಿದೆ. ಈಶ್ವರನ ವಾಹನವಾದ ನಂದಿ ಧರ್ಮದ ಪ್ರತೀಕ. ಧರ್ಮ ಸಂಸ್ಕೃತಿ, ಗೋವಿನ ರಕ್ಷಣೆಗೆ ಪಣ ತೊಡೋಣ. ಮುಂದಿನ ಪೀಳಿಗೆಗೆ ಜ್ಞಾನಪರಂಪರೆಯ ಉಡುಗೊರೆ ನೀಡೋಣ. ವರ್ಧಂತಿಯ ರೂಪದಲ್ಲಿ ಇಂಥ ಶಿಕ್ಷಣ ವ್ಯವಸ್ಥೆಯನ್ನು ಬೆಳೆಸುವ ಕಾರ್ಯ ಸದಾ ನಡೆಯಲಿ. ಗೋರಕ್ಷಣೆ, ವಿಶ್ವವಿದ್ಯಾಪೀಠದ ರಕ್ಷಣೆ, ಧರ್ಮದ ಆಚರಣೆಯ ಮೂಲಕ ಅರ್ಥಪೂರ್ಣವಾಗಿ ವರ್ಧಂತಿಯನ್ನು ಆಚರಿಸಿ ಎಂದು ಸಲಹೆ ಮಾಡಿದರು.

ಮುಂದಿನ ದಿನಗಳಲ್ಲಿ ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ಇಂಥ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ ಎಂದು ಸೂಚಿಸಿದರು. ನಿಮ್ಮ ಸಂತೋಷ ನಮ್ಮ ಸಂತೋಷ, ನಿಮ್ಮ ತೃಪ್ತಿ ನಮ್ಮ ತೃಪ್ತಿ, ನಿಮ್ಮ ದುಃಖ ನಮ್ಮ ದುಃಖವಾಗಬೇಕು. ಆಗ ಗುರುಶಿಷ್ಯರ ಸಂಬಂಧಕ್ಕೆ ಅರ್ಥ ಬರುತ್ತದೆ ಎಂದು ವಿಶ್ಲೇಷಿಸಿದರು. ಸಂಸಾರದಲ್ಲೂ ವರ್ಧಂತಿ ಬೆಳವಣಿಗೆಯ ಸಂಕೇತ. ಆದರೆ ಪೀಠಾಧಿಪತಿಗಳಾಗಿ ಸಂನ್ಯಾಸ ಸ್ವೀಕರಿಸಿದರೆ ಆಗುವ ಬೆಳವಣಿಗೆ ಅಸಾಧಾರಣ. ಲಕ್ಷ ಲಕ್ಷ ಜನರ ವಿಶ್ವಕುಟುಂಬ ಸನ್ಯಾಸಿಯ ಕುಟುಂಬವಾಗಿ ಮಾರ್ಪಡುತ್ತದೆ. ಆದ್ದರಿಂದ ಇಂಥ ಸ್ಥಾನದಲ್ಲಿ ವರ್ಧಂತಿಗೆ ವಿಶೇಷ ಅರ್ಥವಿದೆ ಎಂದರು.

ಎಲ್ಲರನ್ನೂ ಲೋಕಕ್ಕೆ ಮಾತೆಯೇ ಕರೆ ತರುವುದು; ಲೋಕದಲ್ಲಿ ನಮ್ಮನ್ನು ಬೆಳಗುವಂತೆ ಮಾಡಿದ್ದೂ ಮಾತೆಯರೇ. ಮಾತೆಯರು ವರ್ಧಂತಿಯಂದು ಮಠವನ್ನು ಬೆಳಗುವ ಕಾರ್ಯವನ್ನು ಮಾಡುತ್ತಾ ಬಂದಿದ್ದಾರೆ. ಒಬ್ಬ ಮಾತೆ ಗುರುವನ್ನು ಲೋಕಕ್ಕೆ ನೀಡಿದರೆ, ಲಕ್ಷಾಂತರ ಮಾತೆಯರು ಗುರು ಸಂಕಲ್ಪವನ್ನು ಹೊತ್ತು ಬೆಳೆಸಿ, ಯೋಜನೆಯಾಗಿ ಸಮಾಜಕ್ಕೆ ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಶ್ರೀಮಾತೆ ವಿಜಯಲಕ್ಷ್ಮಿಯವರು ದೀಪಪ್ರಜ್ವಲನ ಮಾಡಿದರು. ಹೊರನಾಡು ಆದಿಶಕ್ತಿ ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮಕರ್ತೃ ಭೀಮೇಶ್ವರ ಜೋಶಿ ದಂಪತಿ ಸರ್ವಸೇವೆ ನೆರವೇರಿಸಿದರು. 500ಕ್ಕೂ ಹೆಚ್ಚು ಮಾತೆಯರು ಭಾರತೀಭವನದಲ್ಲಿ ಕುಂಕುಮಾರ್ಚನೆ ನೆರವೇರಿಸಿದರೆ, ರಾಜ್ಯದ ಎಲ್ಲೆಡೆ ಶ್ರೀಮಠದ ಅಂಗಸಂಸ್ಥೆಗಳು, ಶಾಖಾಮಠಗಳು, ದೇವಸ್ಥಾನ, ಮಂದಿರಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನೆರವೇರಿಸಲಾಯಿತು.

ಮಾತೃತ್ವಮ್ ವತಿಯಿಂದ ಕುಂಕುಮಾರ್ಚನೆ ಕಾಣಿಕೆಯನ್ನು ವಾತ್ಸಲ್ಯಧಾರೆಯಾಗಿ 50 ಲಕ್ಷ ರೂಪಾಯಿಗಳ ದೇಣಿಗೆ ಸಮರ್ಪಿಸಲಾಯಿತು. ಜತೆಗೆ ಶ್ರೀಮಠದ ಎಲ್ಲ ಗೋಶಾಲೆಗಳಲ್ಲಿ ಮತ್ತು ಅಂಗಸಂಸ್ಥೆಗಳಲ್ಲಿ ಇರುವ ಗೋವುಗಳಿಗೆ ಗೋಗ್ರಾಸವನ್ನು ನೀಡಲಾಯಿತು. ವೈದಿಕ ವಿಭಾಗದಿಂದ ಅರುಣ ಹವನ, ಆಯುಷ್ಯಸೂಕ್ತ ಹೋಮ, ಅರುಣ ನಮಸ್ಕಾರ, 18 ಲಕ್ಷ ರೂಪಾಯಿ ಸದಾಶಯ ಸಮರ್ಪಣೆ ನಡೆಯಿತು. ಯುವ ಮತ್ತು ವಿದ್ಯಾರ್ಥಿ ವಿಭಾಗದ ವತಿಯಿಂದ ಹವ್ಯಕ ಮಹಾಮಂಡಲದ ವ್ಯಾಪ್ತಿಯ ಎಲ್ಲೆಡೆಗಳಲ್ಲಿ ಸುವರ್ಣ ವೃಕ್ಷ ಯೋಜನೆಯಡಿ 50 ಸಾವಿರ ಸಸಿಗಳನ್ನು ನೆಡಲಾಯಿತು.

ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜೆ.ಎಲ್, ಲೋಕಸಂಪರ್ಕಾಧಿಕಾರಿ ಕೆಕ್ಕಾರು ರಾಮಚಂದ್ರ, ಶಾಸನತಂತ್ರ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ, ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪ್ಪು, ಪ್ರಧಾನ ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ಮಾತೃಪ್ರಧಾನರಾದ ದೇವಿಕಾ ಶಾಸ್ತ್ರಿ, ಪದಾಧಿಕಾರಿಗಳಾದ ಈಶ್ವರ ಪ್ರಸಾದ್ ಕನ್ಯಾನ, ರುಕ್ಮಾವತಿ ರಾಮಚಂದ್ರ, ಕೃಷ್ಣಮೂರ್ತಿ ಮಾಡಾವು, ಮಾಜಿ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ, ಮಾತೃತ್ವಮ್ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಚಾತುರ್ಮಾಸ್ಯ ತಂಡದ ಪ್ರಧಾನ ಸಂಯೋಜಕ ಮಂಜುನಾಥ ಸುವರ್ಣಗದ್ದೆ, ಶ್ರೀಕಾಂತ ಪಂಡಿತ್, ಧರ್ಮಕರ್ಮ ವಿಭಾಗದ ಕೂಟೇಲು ರಾಮಕೃಷ್ಣ ಭಟ್, ವಿವಿವಿ ಗೌರವಾಧ್ಯಕ್ಷ ಡಿ.ಡಿ.ಶರ್ಮಾ, ಆಡಳಿತಾಧಿಕಾರಿ ಡಾ.ಟಿ.ಜಿ.ಪ್ರಸನ್ನ ಕುಮಾರ್, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ ಗೋಳಗೋಡು, ಮಹೇಶ್ ಹೆಗಡೆ ಮತ್ತಿತತರು ಉಪಸ್ಥಿತರಿದ್ದರು.  ಗಣೇಶ್ ಜೋಶಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

14 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

14 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

19 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

19 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

19 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago