Advertisement
ಸುದ್ದಿಗಳು

ನೆಲ್ಲಿಕಾಯಿ ಕಹಿಯಾದರೂ ಆರೋಗ್ಯಕ್ಕೆ ಇದುವೇ ಸಿಹಿ

Share

ಚಳಿಗಾಲದಲ್ಲಿ ನಾವು ಆರೋಗ್ಯದ ಬಗ್ಗೆ ಅದೇಷ್ಟೇ ಕಾಳಜಿ ವಹಿಸಿಕೊಂಡರು ಸಾಲದು. ಯಾಕೆಂದರೆ ಈ ವರ್ಷ ಚಳಿ ಹೆಚ್ಚಾಗಿದೆ. ಈ ಚಳಿಯಲ್ಲೇ ರಕ್ತ ಹೆಪ್ಪುಗಟ್ಟುವುದು, ಎದೆನೋವು ಇತ್ಯಾದಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆ ಕಾರಣದಿಂದ ನಾವು ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿಕೊಂಡರೆ ಒಳ್ಳೆದು. ಈ ವಾತಾವರಣಕ್ಕೆ ತಕ್ಕಂತೆ ನಾವು ನಮ್ಮ ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಉದಾಹರಣೆ ನೆಲ್ಲಿಕಾಯಿ ತಿನ್ನುವುದು ಉತ್ತಮ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹಾಗೂ ಆಂಟಿಆಕ್ಸಿಡೆಂಟ್ ಗಳಿಂದ ಸಮೃದ್ಧವಾಗಿದೆ. ಇದನ್ನು ಸುಲಭವಾಗಿ ಡಯೆಟ್ ನಲ್ಲಿ ಸೇರಿಸಬಹುದು. ಇದನ್ನು ತಿನ್ನುವುದರಿಂದ ದೇಹದಲ್ಲಿರುವ ಮಾಲಿನ್ಯ ಮತ್ತು ಸೋಂಕು- ಸಂಬಂಧಿತ ಆಕ್ಸಿಡೇಟಿವ್ ಒತ್ತಡದ ವಿರುದ್ಧ ಹೋರಾಡಲು ಮತ್ತು ಚರ್ಮ ಹಾಗೂ ಕೀಲುಗಳ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಕಾಲಜನ್ ಅನ್ನು ಉತ್ಪಾದಿಸಲು ಸಹಾಕಾರಿ.

ನೆಲ್ಲಿಕಾಯಿ ಸಂಭಾವ್ಯ ಚಯಾಪಚಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ರಕ್ತದಲ್ಲಿನ ಗ್ಲೋಕೋಸ್ ಮಟ್ಟಗಳಿಗೆ ಕಾರಣವಾಗುತ್ತದೆ, ಇನ್ಸುಲಿನ್ ಪ್ರತಿರೋಧ, ಉರಿಯೂತದ ಗುರುತುಗಳನ್ನು ಕಡಿಮೆ ಮಾಡುತ್ತದೆ ಎನ್ನಲಾಗುತ್ತದೆ. ಮಾತ್ರವಲ್ಲ, ನಿಯಮಿತವಾಗಿ ನೆಲ್ಲಿಕಾಯಿ ಸೇವನೆ ಕೆಟ್ಟ ಕೊಲೆಸ್ಟ್ರಾಲ್ ಹಾಗೂ ಟ್ರೈಗ್ಲಿಸರೈಡ್ ಗಳು ಕಡಿಮೆಯಾಗಿಸುತ್ತದೆ ಹಾಗೂ ಉತ್ತಮ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಿಸಲು ನೆರವಾಗುತ್ತದೆ ಎಂದು ಹೇಳಲಾಗುತ್ತದೆ.
ಇದರಲ್ಲಿ ಪೈಬರ್ ಅಂಶ, ನಿರ್ದಿಷ್ಟ ಫೈಟೋಕೆಮಿಕಲ್ ಗಳ ಮೂಲಕ ಕರುಳಿನ ಚಲನಶೀಲತೆಗೆ ಸಹಾಯಕ. ಇದು ಚಳಿಗಾಲದ ಮಲಬದ್ಧತೆ,  ಉಬ್ಬುವಿಕೆಯ ಲಕ್ಷಣಗಳನ್ನು ಅನುಭವಿಸುವವರಿಗೆ ನೆರವಾಗುವ ಸೌಮ್ಯ ವರೇಚಕಗಳಾಗಿ ಕಾರ್ಯನಿರ್ವಹಿಸುತ್ತದೆ. ಇದು ಚರ್ಮದ ಸ್ಥಿತಿಸ್ಥಾಪಕತ್ವ ಮತ್ತು ರಕ್ತ ಪರಿಚಲನೆಯನ್ನು ಬಲಪಡಿಸುತ್ತದೆ. ಇದು ತ್ವಚೆ, ಕೂದಲಿನ ಆರೋಗ್ಯಕ್ಕೆ ಉತ್ತಮವಾಗಿದೆ ಎನ್ನಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಡಿಕೆ ಸಿಂಗಾರ ಒಣಗುತ್ತಿದೆಯೇ..? ನಿಮ್ಮ ತೋಟದ ಶತ್ರು ನೀವು ಬಳಸುವ ಬೇವಿನ ಎಣ್ಣೆಯೇ ಇರಬಹುದು…!

ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…

5 hours ago

ಕಳಪೆ ಅಡಿಕೆ ಪತ್ತೆ | 15.5 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…

6 hours ago

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

14 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

14 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

15 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

15 hours ago