Advertisement
ಸುದ್ದಿಗಳು

ನೆಲ್ಲಿಕಾಯಿ ಕಹಿಯಾದರೂ ಆರೋಗ್ಯಕ್ಕೆ ಇದುವೇ ಸಿಹಿ

Share

ಚಳಿಗಾಲದಲ್ಲಿ ನಾವು ಆರೋಗ್ಯದ ಬಗ್ಗೆ ಅದೇಷ್ಟೇ ಕಾಳಜಿ ವಹಿಸಿಕೊಂಡರು ಸಾಲದು. ಯಾಕೆಂದರೆ ಈ ವರ್ಷ ಚಳಿ ಹೆಚ್ಚಾಗಿದೆ. ಈ ಚಳಿಯಲ್ಲೇ ರಕ್ತ ಹೆಪ್ಪುಗಟ್ಟುವುದು, ಎದೆನೋವು ಇತ್ಯಾದಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆ ಕಾರಣದಿಂದ ನಾವು ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿಕೊಂಡರೆ ಒಳ್ಳೆದು. ಈ ವಾತಾವರಣಕ್ಕೆ ತಕ್ಕಂತೆ ನಾವು ನಮ್ಮ ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಉದಾಹರಣೆ ನೆಲ್ಲಿಕಾಯಿ ತಿನ್ನುವುದು ಉತ್ತಮ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹಾಗೂ ಆಂಟಿಆಕ್ಸಿಡೆಂಟ್ ಗಳಿಂದ ಸಮೃದ್ಧವಾಗಿದೆ. ಇದನ್ನು ಸುಲಭವಾಗಿ ಡಯೆಟ್ ನಲ್ಲಿ ಸೇರಿಸಬಹುದು. ಇದನ್ನು ತಿನ್ನುವುದರಿಂದ ದೇಹದಲ್ಲಿರುವ ಮಾಲಿನ್ಯ ಮತ್ತು ಸೋಂಕು- ಸಂಬಂಧಿತ ಆಕ್ಸಿಡೇಟಿವ್ ಒತ್ತಡದ ವಿರುದ್ಧ ಹೋರಾಡಲು ಮತ್ತು ಚರ್ಮ ಹಾಗೂ ಕೀಲುಗಳ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಕಾಲಜನ್ ಅನ್ನು ಉತ್ಪಾದಿಸಲು ಸಹಾಕಾರಿ.

ನೆಲ್ಲಿಕಾಯಿ ಸಂಭಾವ್ಯ ಚಯಾಪಚಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ರಕ್ತದಲ್ಲಿನ ಗ್ಲೋಕೋಸ್ ಮಟ್ಟಗಳಿಗೆ ಕಾರಣವಾಗುತ್ತದೆ, ಇನ್ಸುಲಿನ್ ಪ್ರತಿರೋಧ, ಉರಿಯೂತದ ಗುರುತುಗಳನ್ನು ಕಡಿಮೆ ಮಾಡುತ್ತದೆ ಎನ್ನಲಾಗುತ್ತದೆ. ಮಾತ್ರವಲ್ಲ, ನಿಯಮಿತವಾಗಿ ನೆಲ್ಲಿಕಾಯಿ ಸೇವನೆ ಕೆಟ್ಟ ಕೊಲೆಸ್ಟ್ರಾಲ್ ಹಾಗೂ ಟ್ರೈಗ್ಲಿಸರೈಡ್ ಗಳು ಕಡಿಮೆಯಾಗಿಸುತ್ತದೆ ಹಾಗೂ ಉತ್ತಮ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಿಸಲು ನೆರವಾಗುತ್ತದೆ ಎಂದು ಹೇಳಲಾಗುತ್ತದೆ.
ಇದರಲ್ಲಿ ಪೈಬರ್ ಅಂಶ, ನಿರ್ದಿಷ್ಟ ಫೈಟೋಕೆಮಿಕಲ್ ಗಳ ಮೂಲಕ ಕರುಳಿನ ಚಲನಶೀಲತೆಗೆ ಸಹಾಯಕ. ಇದು ಚಳಿಗಾಲದ ಮಲಬದ್ಧತೆ,  ಉಬ್ಬುವಿಕೆಯ ಲಕ್ಷಣಗಳನ್ನು ಅನುಭವಿಸುವವರಿಗೆ ನೆರವಾಗುವ ಸೌಮ್ಯ ವರೇಚಕಗಳಾಗಿ ಕಾರ್ಯನಿರ್ವಹಿಸುತ್ತದೆ. ಇದು ಚರ್ಮದ ಸ್ಥಿತಿಸ್ಥಾಪಕತ್ವ ಮತ್ತು ರಕ್ತ ಪರಿಚಲನೆಯನ್ನು ಬಲಪಡಿಸುತ್ತದೆ. ಇದು ತ್ವಚೆ, ಕೂದಲಿನ ಆರೋಗ್ಯಕ್ಕೆ ಉತ್ತಮವಾಗಿದೆ ಎನ್ನಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

15 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago