ಚಳಿಗಾಲದಲ್ಲಿ ನಾವು ಆರೋಗ್ಯದ ಬಗ್ಗೆ ಅದೇಷ್ಟೇ ಕಾಳಜಿ ವಹಿಸಿಕೊಂಡರು ಸಾಲದು. ಯಾಕೆಂದರೆ ಈ ವರ್ಷ ಚಳಿ ಹೆಚ್ಚಾಗಿದೆ. ಈ ಚಳಿಯಲ್ಲೇ ರಕ್ತ ಹೆಪ್ಪುಗಟ್ಟುವುದು, ಎದೆನೋವು ಇತ್ಯಾದಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆ ಕಾರಣದಿಂದ ನಾವು ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿಕೊಂಡರೆ ಒಳ್ಳೆದು. ಈ ವಾತಾವರಣಕ್ಕೆ ತಕ್ಕಂತೆ ನಾವು ನಮ್ಮ ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಉದಾಹರಣೆ ನೆಲ್ಲಿಕಾಯಿ ತಿನ್ನುವುದು ಉತ್ತಮ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹಾಗೂ ಆಂಟಿಆಕ್ಸಿಡೆಂಟ್ ಗಳಿಂದ ಸಮೃದ್ಧವಾಗಿದೆ. ಇದನ್ನು ಸುಲಭವಾಗಿ ಡಯೆಟ್ ನಲ್ಲಿ ಸೇರಿಸಬಹುದು. ಇದನ್ನು ತಿನ್ನುವುದರಿಂದ ದೇಹದಲ್ಲಿರುವ ಮಾಲಿನ್ಯ ಮತ್ತು ಸೋಂಕು- ಸಂಬಂಧಿತ ಆಕ್ಸಿಡೇಟಿವ್ ಒತ್ತಡದ ವಿರುದ್ಧ ಹೋರಾಡಲು ಮತ್ತು ಚರ್ಮ ಹಾಗೂ ಕೀಲುಗಳ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಕಾಲಜನ್ ಅನ್ನು ಉತ್ಪಾದಿಸಲು ಸಹಾಕಾರಿ.
ನೆಲ್ಲಿಕಾಯಿ ಸಂಭಾವ್ಯ ಚಯಾಪಚಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ರಕ್ತದಲ್ಲಿನ ಗ್ಲೋಕೋಸ್ ಮಟ್ಟಗಳಿಗೆ ಕಾರಣವಾಗುತ್ತದೆ, ಇನ್ಸುಲಿನ್ ಪ್ರತಿರೋಧ, ಉರಿಯೂತದ ಗುರುತುಗಳನ್ನು ಕಡಿಮೆ ಮಾಡುತ್ತದೆ ಎನ್ನಲಾಗುತ್ತದೆ. ಮಾತ್ರವಲ್ಲ, ನಿಯಮಿತವಾಗಿ ನೆಲ್ಲಿಕಾಯಿ ಸೇವನೆ ಕೆಟ್ಟ ಕೊಲೆಸ್ಟ್ರಾಲ್ ಹಾಗೂ ಟ್ರೈಗ್ಲಿಸರೈಡ್ ಗಳು ಕಡಿಮೆಯಾಗಿಸುತ್ತದೆ ಹಾಗೂ ಉತ್ತಮ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಿಸಲು ನೆರವಾಗುತ್ತದೆ ಎಂದು ಹೇಳಲಾಗುತ್ತದೆ.
ಇದರಲ್ಲಿ ಪೈಬರ್ ಅಂಶ, ನಿರ್ದಿಷ್ಟ ಫೈಟೋಕೆಮಿಕಲ್ ಗಳ ಮೂಲಕ ಕರುಳಿನ ಚಲನಶೀಲತೆಗೆ ಸಹಾಯಕ. ಇದು ಚಳಿಗಾಲದ ಮಲಬದ್ಧತೆ, ಉಬ್ಬುವಿಕೆಯ ಲಕ್ಷಣಗಳನ್ನು ಅನುಭವಿಸುವವರಿಗೆ ನೆರವಾಗುವ ಸೌಮ್ಯ ವರೇಚಕಗಳಾಗಿ ಕಾರ್ಯನಿರ್ವಹಿಸುತ್ತದೆ. ಇದು ಚರ್ಮದ ಸ್ಥಿತಿಸ್ಥಾಪಕತ್ವ ಮತ್ತು ರಕ್ತ ಪರಿಚಲನೆಯನ್ನು ಬಲಪಡಿಸುತ್ತದೆ. ಇದು ತ್ವಚೆ, ಕೂದಲಿನ ಆರೋಗ್ಯಕ್ಕೆ ಉತ್ತಮವಾಗಿದೆ ಎನ್ನಲಾಗುತ್ತದೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…