ಚಳಿಗಾಲದಲ್ಲಿ ನಾವು ಆರೋಗ್ಯದ ಬಗ್ಗೆ ಅದೇಷ್ಟೇ ಕಾಳಜಿ ವಹಿಸಿಕೊಂಡರು ಸಾಲದು. ಯಾಕೆಂದರೆ ಈ ವರ್ಷ ಚಳಿ ಹೆಚ್ಚಾಗಿದೆ. ಈ ಚಳಿಯಲ್ಲೇ ರಕ್ತ ಹೆಪ್ಪುಗಟ್ಟುವುದು, ಎದೆನೋವು ಇತ್ಯಾದಿ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆ ಕಾರಣದಿಂದ ನಾವು ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿಕೊಂಡರೆ ಒಳ್ಳೆದು. ಈ ವಾತಾವರಣಕ್ಕೆ ತಕ್ಕಂತೆ ನಾವು ನಮ್ಮ ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು ಉದಾಹರಣೆ ನೆಲ್ಲಿಕಾಯಿ ತಿನ್ನುವುದು ಉತ್ತಮ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹಾಗೂ ಆಂಟಿಆಕ್ಸಿಡೆಂಟ್ ಗಳಿಂದ ಸಮೃದ್ಧವಾಗಿದೆ. ಇದನ್ನು ಸುಲಭವಾಗಿ ಡಯೆಟ್ ನಲ್ಲಿ ಸೇರಿಸಬಹುದು. ಇದನ್ನು ತಿನ್ನುವುದರಿಂದ ದೇಹದಲ್ಲಿರುವ ಮಾಲಿನ್ಯ ಮತ್ತು ಸೋಂಕು- ಸಂಬಂಧಿತ ಆಕ್ಸಿಡೇಟಿವ್ ಒತ್ತಡದ ವಿರುದ್ಧ ಹೋರಾಡಲು ಮತ್ತು ಚರ್ಮ ಹಾಗೂ ಕೀಲುಗಳ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಕಾಲಜನ್ ಅನ್ನು ಉತ್ಪಾದಿಸಲು ಸಹಾಕಾರಿ.
ನೆಲ್ಲಿಕಾಯಿ ಸಂಭಾವ್ಯ ಚಯಾಪಚಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ರಕ್ತದಲ್ಲಿನ ಗ್ಲೋಕೋಸ್ ಮಟ್ಟಗಳಿಗೆ ಕಾರಣವಾಗುತ್ತದೆ, ಇನ್ಸುಲಿನ್ ಪ್ರತಿರೋಧ, ಉರಿಯೂತದ ಗುರುತುಗಳನ್ನು ಕಡಿಮೆ ಮಾಡುತ್ತದೆ ಎನ್ನಲಾಗುತ್ತದೆ. ಮಾತ್ರವಲ್ಲ, ನಿಯಮಿತವಾಗಿ ನೆಲ್ಲಿಕಾಯಿ ಸೇವನೆ ಕೆಟ್ಟ ಕೊಲೆಸ್ಟ್ರಾಲ್ ಹಾಗೂ ಟ್ರೈಗ್ಲಿಸರೈಡ್ ಗಳು ಕಡಿಮೆಯಾಗಿಸುತ್ತದೆ ಹಾಗೂ ಉತ್ತಮ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಿಸಲು ನೆರವಾಗುತ್ತದೆ ಎಂದು ಹೇಳಲಾಗುತ್ತದೆ.
ಇದರಲ್ಲಿ ಪೈಬರ್ ಅಂಶ, ನಿರ್ದಿಷ್ಟ ಫೈಟೋಕೆಮಿಕಲ್ ಗಳ ಮೂಲಕ ಕರುಳಿನ ಚಲನಶೀಲತೆಗೆ ಸಹಾಯಕ. ಇದು ಚಳಿಗಾಲದ ಮಲಬದ್ಧತೆ, ಉಬ್ಬುವಿಕೆಯ ಲಕ್ಷಣಗಳನ್ನು ಅನುಭವಿಸುವವರಿಗೆ ನೆರವಾಗುವ ಸೌಮ್ಯ ವರೇಚಕಗಳಾಗಿ ಕಾರ್ಯನಿರ್ವಹಿಸುತ್ತದೆ. ಇದು ಚರ್ಮದ ಸ್ಥಿತಿಸ್ಥಾಪಕತ್ವ ಮತ್ತು ರಕ್ತ ಪರಿಚಲನೆಯನ್ನು ಬಲಪಡಿಸುತ್ತದೆ. ಇದು ತ್ವಚೆ, ಕೂದಲಿನ ಆರೋಗ್ಯಕ್ಕೆ ಉತ್ತಮವಾಗಿದೆ ಎನ್ನಲಾಗುತ್ತದೆ.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…