ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ 2023-24ನೇ ಸಾಲಿನ ಅಧ್ಯಕ್ಷರಾಗಿ ಕವಿ ಗೋಪಾಲಕೃಷ್ಣ ಶಾಸ್ತ್ರಿ ಆಯ್ಕೆಯಾಗಿದ್ದಾರೆ.
ಶನಿವಾರ ಮಂಗಳೂರಿನ ಹೋಟೆಲ್ ವುಡ್ಲ್ಯಾಂಡ್ ನಲ್ಲಿ ನಡೆದ ವಿಶೇಷ ಸಭೆಯಲ್ಲಿ ಆಯ್ಕೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಚುಟುಕು ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ವಹಿಸಿದ್ದರು. ಜಿಲ್ಲಾ ಗೌರವ ಅಧ್ಯಕ್ಷ ಇರಾ ನೇಮು ಪೂಜಾರಿ, ನಿರ್ಗಮನ ಅಧ್ಯಕ್ಷ ಕಾ.ವೀ.ಕೃಷ್ಣದಾಸ್ ಶಾಲು ಪುಷ್ಪವನ್ನು ನೀಡಿ ನೂತನ ಅಧ್ಯಕ್ಷರನ್ನು ಅಭಿನಂದಿಸಿದರು. ಜನಪ್ರಿಯ ಕವಿ, ಮಂಗಳೂರು ಚುಸಾಪದ ಮಾಜಿ ಅಧ್ಯಕ್ಷರಾದ ರಘು ಇಡ್ಕಿದು, ಕೋಶಾಧಿಕಾರಿ ಲತೀಶ್ ಸಂಕೊಳಿಗೆ, ಕವಯತ್ರಿ ಸೌಮ್ಯ ಗೋಪಾಲ್, ಕುಮಾರಿ ದಿಶಾ ಸಿ.ಜಿ ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel