ಸುದ್ದಿಗಳು

ಪುತ್ತೂರು ‘ಗೋಪಣ್ಣ’ ಸ್ಮೃತಿ  ಗೌರವ | ಭಾಗವತ ಗೋವಿಂದ ನಾಯಕ್ ಪಾಲೆಚ್ಚಾರು ಮತ್ತು ನಿವೃತ್ತ ಅಧ್ಯಾಪಿಕೆ ಬಿ.ಸುಲೋಚನಾ ಆಯ್ಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಯಕ್ಷಗಾನದ ವಾದನ ಪರಿಕರಕ್ಕೆ ಮತ್ತು ವಾದನಕ್ಕೆ ಹೊಸ ಆಯಾಮವನ್ನು ತೋರಿದ ಪುತ್ತೂರು ಗೋಪಾಲಕೃಷ್ಣಯ್ಯ ಯಾ ಗೋಪಣ್ಣ ಇವರ ಸ್ಮೃತಿ ಕಾರ್ಯಕ್ರಮ ಜೂ.16 ರಂದು  ಅಪರಾಹ್ಣ ಗಂಟೆ 2ಕ್ಕೆ ಜರುಗಲಿದೆ. ಪುತ್ತೂರಿನ ಬಪ್ಪಳಿಗೆ ‘ಅಗ್ರಹಾರ’ ನಿವಾಸದಲ್ಲಿ ಸಂಪನ್ನವಾಗುವ ಈ ಕಾರ್ಯಕ್ರಮದಲ್ಲಿ ಯಕ್ಷಗಾನ ಭಾಗವತ, ಯಕ್ಷಗುರು ಗೋವಿಂದ ನಾಯಕ್ ಪಾಲೆಚ್ಚಾರು ಹಾಗೂ ನಿವೃತ್ತ ಅಧ್ಯಾಪಿಕೆ  ಬಿ.ಸುಲೋಚನಾ ಅವರಿಗೆ ‘ಗೋಪಣ್ಣ ಸ್ಮೃತಿ ಗೌರವ’ವನ್ನು ಪ್ರದಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಸುಲೋಚನ
ಗೋವಿಂದ ನಾಯಕ್
ಗೋವಿಂದ ನಾಯಕ್ ಪಾಲೆಚ್ಚಾರು ಅವರು ಯಕ್ಷಗಾನದ ಹವ್ಯಾಸಿ ಕ್ಷೇತ್ರಕ್ಕೆ ದೊಡ್ಡ ಸಂಪನ್ಮೂಲ. ಸಮಗ್ರ ಹಿಮ್ಮೇಳದ ಗುರು. ಶ್ರೀ ಕೊಲ್ಲೂರು ಮೇಳ, ಶ್ರೀ ಸುಂಕದಕಟ್ಟೆ ಮೇಳ ಹಾಗೂ ಶ್ರೀ ಉಪ್ಪಿನಂಗಡಿ ಮೇಳಗಳಲ್ಲಿ ಅಲ್ಪಕಾಲಿಕ ವ್ಯವಸಾಯ.
ಕೀರ್ತಿಶೇಷ ಅಗರಿ ಶ್ರೀನಿವಾಸ ಭಾಗವತರ ಭಾಗವತಿಕೆಯ ಪ್ರಭಾವ. ಯಕ್ಷಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಂದ ಭಾಗವತಿಕೆಯ ಮಟ್ಟುಗಳಿಗೆ ಕಾಯಕಲ್ಪ. ತಿಮ್ಮಯ್ಯ ಆಚಾರ್ ಅವರಿಂದ ಮದ್ದಳೆಯ ನಡೆಗಳು, ಅಡೂರು ಕೃಷ್ಣ ರಾವ್ ಅವರಿಂದ ಚೆಂಡೆಯ ನುಡಿತಗಳ ಅಭ್ಯಾಸ. ಒಂದು ಕಾಲಘಟ್ಟದ ಆಟ, ಕೂಟಗಳಲ್ಲಿ ಗೋವಿಂದ ನಾಯಕರ ಪೂರ್ಣಪ್ರಮಾಣದ ಭಾಗವಹಿಸುವಿಕೆಯು ಹವ್ಯಾಸಿ ರಂಗದ ಉಸಿರಾಗಿತ್ತು. ಯಕ್ಷಗುರುವಾಗಿ ನೂರಾರು ಶಿಷ್ಯರನ್ನು ರೂಪೀಕರಿಸಿದ ಹಿರಿಮೆ. ಪ್ರಕೃತ ಪುತ್ತೂರು ಬೊಳ್ವಾರು ಶ್ರೀ ಉಳ್ಳಾಲ್ತಿ ಮಲರಾಯ ಯಕ್ಷ ಕಲಾ ಪ್ರತಿಷ್ಠಾನದ ಮೂಲಕ ಯಕ್ಷಗಾನದ ತರಬೇತಿಯ ಗುರುಗಳಾಗಿ ಗೋವಿಂದ ನಾಯಕರು ಸಕ್ರಿಯರು.
ಸುಲೋಚನಾ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿದ್ದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಹುಕಾಲ ಅಧ್ಯಾಪಿಕೆಯಾಗಿ ಸೇವೆ. ವಿದ್ಯಾರ್ಥಿಗಳ ನೆಚ್ಚಿನ ಟೀಚರ್ ಆಗಿದ್ದರು.  ಮಡಿಕೇರಿ, ಉಪ್ಪಿನಂಗಡಿ, ವಿಟ್ಲ ಶಾಲೆಯಲ್ಲೂ ಸೇವೆ ಸಲ್ಲಿಸಿದ್ದರು. ‘ಮನದ ಮಾತು’, ‘ಕಲ್ಪನೆಗಳ ಹಾರ’ ಎಂಬ ಕವನ ಸಂಕಲನ ಮತ್ತು ಬಾಬಾ ಶಿರಡಿ ಸಾಯಿಬಾಬಾ ಭಜನೆಗಳು.. ಹೀಗೆ ಮೂರು ಕೃತಿಗಳ ಪ್ರಕಟಣೆ. ಪ್ರಕೃತ ಮಂಗಳೂರಿನಲ್ಲಿ ವಾಸ.
ಭಾಗವತ  ಗೋವಿಂದ ನಾಯಕರಿಗೆ ಹಾಗೂ  ಬಿ. ಸುಲೋಚನಾ ಅವರಿಗೆ ಪುತ್ತೂರು ಬಪ್ಪಳಿಗೆ ಸನಿಹದ ‘ಅಗ್ರಹಾರ’ದಲ್ಲಿ 2023 ಜೂನ್ 16ರಂದು ಗೌರವ ಪ್ರದಾನ. ಕಳೆದ ವರುಷಗಳಲ್ಲಿ ಗೋಪಣ್ಣ ನೆನಪಿನ ಗೌರವವನ್ನು ದೇವದರ್ಜಿ ಅಳಕೆ ನಾರಾಯಣ ರಾವ್, ಮದ್ಲೆಗಾರ ವೆಂಕಟೇಶ ಉಳಿತ್ತಾಯರು, ಜ್ಯೋತಿಷಿ ಗಣಪತಿ ಭಟ್, ಅರ್ಥದಾರಿ ಪಾವಲಕೋಡಿ ಗಣಪತಿ ಭಟ್, ಯಕ್ಷಗುರು ಮೋಹನ ಬೈಪಾಡಿತ್ತಾಯರು ಹಾಗೂ ಮದ್ಲೆಗಾರ ಪದ್ಯಾಣ ಜಯರಾಮ ಭಟ್ಟರಿಗೆ ಪ್ರದಾನ ಮಾಡಲಾಗಿತ್ತು. ಗೋಪಣ್ಣ ಅವರ ಚಿರಂಜೀವಿ ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಕುಟುಂಬವು ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

2 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

22 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

1 day ago