ದೀಪಾವಳಿಯ ಸಂದರ್ಭ ಸರಣಿ ಸಾಮೂಹಿಕ ಗೋಪೂಜೆ ಮೂಲಕ ಸಮಾಜದಲ್ಲಿ ದೇಸೀ ಗೋ ತಳಿಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಕಳೆದ ಎಂಟು ವರ್ಷಗಳಿಂದ ಗುತ್ತಿಗಾರಿನಲ್ಲಿ ನಡೆಯುತ್ತಿದೆ.
ರಾಮಚಂದ್ರಾಪುರ ಮಠದ ಮುಳ್ಳೇರಿಯ ಮಂಡಲದ ಗುತ್ತಿಗಾರು ವಲಯದ ವೈದಿಕ ವಿಭಾಗದ ಆಶ್ರಯದಲ್ಲಿ ದೇಸೀ ಗೋವಿಗೆ ಸರಣಿ ಗೋಪೂಜೆಯ ಕಾರ್ಯಕ್ರಮ ಪ್ರತೀ ವರ್ಷ ನಡೆಯುತ್ತಿದೆ. ಈ ಬಾರಿ ಕೂಡಾ ಸರಣಿ ಗೋಪೂಜೆ ನಡೆಯಿತು. ಸುಬ್ರಹ್ಮಣ್ಯ ಘಟಕದಲ್ಲಿ ಆರಂಭಗೊಂಡ ಗೋಪೂಜಾ ಕಾರ್ಯಕ್ರಮವು ಬಳಿಕ ವಳಲಂಬೆ, ಕೊಲ್ಲಮೊಗ್ರ, ಕಮಿಲ, ಮೇಲ್ತೋಟ ,ಮರ್ಕಂಜ, ನೆಲ್ಲೂರುಕೆಮ್ರಾಜೆ ಘಟಕಗಳಲ್ಲಿ ನಡೆದು ಮೊಗ್ರ ಸತ್ಯನಾರಾಯಣ ಅವರ ಮನೆಯಲ್ಲಿ ಸಮಾರೋಪಗೊಂಡಿತು.
ಸಾಮೂಹಿಕ ಗೋಪೂಜೆಯ ಮೂಲಕ ದೇಸೀ ಗೋವಿನ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ದೇಸೀ ಗೋತಳಿ ಅಭಿವೃದ್ಧಿಯತ್ತ ಕೃಷಿಕರು ಮನಸ್ಸು ಮಾಡಬೇಕು ಎಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಕಾರ್ಯಕ್ರಮದಲ್ಲಿ ಮುರಳಿಕೃಷ್ಣ ಭಟ್ ವಳಲಂಬೆ ಅವರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಕಳೆದ ಎಂಟು ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮ ನಡೆದುಕೊಂಡು ಬರುತ್ತಿದೆ.
ಈ ಸಂದರ್ಭದಲ್ಲಿ ಪ್ರಮುಖರಾದ ಸತ್ಯನಾರಾಯಣ ಮೊಗ್ರ, ದೇವಕಿ. ಜಿ. ಭಟ್ ಪನ್ನೆ, ಶ್ರೀಕೃಷ್ಣ ಶರ್ಮ.ಪಿ., ಶ್ರೀಕೃಷ್ಣ ಭಟ್ ಗುಂಡಿಮಜಲು, ಮೊದಲಾದವರು ಇದ್ದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…