ದೀಪಾವಳಿಯ ಸಂದರ್ಭ ಸರಣಿ ಸಾಮೂಹಿಕ ಗೋಪೂಜೆ ಮೂಲಕ ಸಮಾಜದಲ್ಲಿ ದೇಸೀ ಗೋ ತಳಿಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಕಳೆದ ಎಂಟು ವರ್ಷಗಳಿಂದ ಗುತ್ತಿಗಾರಿನಲ್ಲಿ ನಡೆಯುತ್ತಿದೆ.
ರಾಮಚಂದ್ರಾಪುರ ಮಠದ ಮುಳ್ಳೇರಿಯ ಮಂಡಲದ ಗುತ್ತಿಗಾರು ವಲಯದ ವೈದಿಕ ವಿಭಾಗದ ಆಶ್ರಯದಲ್ಲಿ ದೇಸೀ ಗೋವಿಗೆ ಸರಣಿ ಗೋಪೂಜೆಯ ಕಾರ್ಯಕ್ರಮ ಪ್ರತೀ ವರ್ಷ ನಡೆಯುತ್ತಿದೆ. ಈ ಬಾರಿ ಕೂಡಾ ಸರಣಿ ಗೋಪೂಜೆ ನಡೆಯಿತು. ಸುಬ್ರಹ್ಮಣ್ಯ ಘಟಕದಲ್ಲಿ ಆರಂಭಗೊಂಡ ಗೋಪೂಜಾ ಕಾರ್ಯಕ್ರಮವು ಬಳಿಕ ವಳಲಂಬೆ, ಕೊಲ್ಲಮೊಗ್ರ, ಕಮಿಲ, ಮೇಲ್ತೋಟ ,ಮರ್ಕಂಜ, ನೆಲ್ಲೂರುಕೆಮ್ರಾಜೆ ಘಟಕಗಳಲ್ಲಿ ನಡೆದು ಮೊಗ್ರ ಸತ್ಯನಾರಾಯಣ ಅವರ ಮನೆಯಲ್ಲಿ ಸಮಾರೋಪಗೊಂಡಿತು.
ಸಾಮೂಹಿಕ ಗೋಪೂಜೆಯ ಮೂಲಕ ದೇಸೀ ಗೋವಿನ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ದೇಸೀ ಗೋತಳಿ ಅಭಿವೃದ್ಧಿಯತ್ತ ಕೃಷಿಕರು ಮನಸ್ಸು ಮಾಡಬೇಕು ಎಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಕಾರ್ಯಕ್ರಮದಲ್ಲಿ ಮುರಳಿಕೃಷ್ಣ ಭಟ್ ವಳಲಂಬೆ ಅವರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಕಳೆದ ಎಂಟು ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮ ನಡೆದುಕೊಂಡು ಬರುತ್ತಿದೆ.
ಈ ಸಂದರ್ಭದಲ್ಲಿ ಪ್ರಮುಖರಾದ ಸತ್ಯನಾರಾಯಣ ಮೊಗ್ರ, ದೇವಕಿ. ಜಿ. ಭಟ್ ಪನ್ನೆ, ಶ್ರೀಕೃಷ್ಣ ಶರ್ಮ.ಪಿ., ಶ್ರೀಕೃಷ್ಣ ಭಟ್ ಗುಂಡಿಮಜಲು, ಮೊದಲಾದವರು ಇದ್ದರು.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…