ದೀಪಾವಳಿಯ ಸಂದರ್ಭ ಸರಣಿ ಸಾಮೂಹಿಕ ಗೋಪೂಜೆ ಮೂಲಕ ಸಮಾಜದಲ್ಲಿ ದೇಸೀ ಗೋ ತಳಿಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಕಳೆದ ಎಂಟು ವರ್ಷಗಳಿಂದ ಗುತ್ತಿಗಾರಿನಲ್ಲಿ ನಡೆಯುತ್ತಿದೆ.
ರಾಮಚಂದ್ರಾಪುರ ಮಠದ ಮುಳ್ಳೇರಿಯ ಮಂಡಲದ ಗುತ್ತಿಗಾರು ವಲಯದ ವೈದಿಕ ವಿಭಾಗದ ಆಶ್ರಯದಲ್ಲಿ ದೇಸೀ ಗೋವಿಗೆ ಸರಣಿ ಗೋಪೂಜೆಯ ಕಾರ್ಯಕ್ರಮ ಪ್ರತೀ ವರ್ಷ ನಡೆಯುತ್ತಿದೆ. ಈ ಬಾರಿ ಕೂಡಾ ಸರಣಿ ಗೋಪೂಜೆ ನಡೆಯಿತು. ಸುಬ್ರಹ್ಮಣ್ಯ ಘಟಕದಲ್ಲಿ ಆರಂಭಗೊಂಡ ಗೋಪೂಜಾ ಕಾರ್ಯಕ್ರಮವು ಬಳಿಕ ವಳಲಂಬೆ, ಕೊಲ್ಲಮೊಗ್ರ, ಕಮಿಲ, ಮೇಲ್ತೋಟ ,ಮರ್ಕಂಜ, ನೆಲ್ಲೂರುಕೆಮ್ರಾಜೆ ಘಟಕಗಳಲ್ಲಿ ನಡೆದು ಮೊಗ್ರ ಸತ್ಯನಾರಾಯಣ ಅವರ ಮನೆಯಲ್ಲಿ ಸಮಾರೋಪಗೊಂಡಿತು.
ಸಾಮೂಹಿಕ ಗೋಪೂಜೆಯ ಮೂಲಕ ದೇಸೀ ಗೋವಿನ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ದೇಸೀ ಗೋತಳಿ ಅಭಿವೃದ್ಧಿಯತ್ತ ಕೃಷಿಕರು ಮನಸ್ಸು ಮಾಡಬೇಕು ಎಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಕಾರ್ಯಕ್ರಮದಲ್ಲಿ ಮುರಳಿಕೃಷ್ಣ ಭಟ್ ವಳಲಂಬೆ ಅವರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಕಳೆದ ಎಂಟು ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮ ನಡೆದುಕೊಂಡು ಬರುತ್ತಿದೆ.
ಈ ಸಂದರ್ಭದಲ್ಲಿ ಪ್ರಮುಖರಾದ ಸತ್ಯನಾರಾಯಣ ಮೊಗ್ರ, ದೇವಕಿ. ಜಿ. ಭಟ್ ಪನ್ನೆ, ಶ್ರೀಕೃಷ್ಣ ಶರ್ಮ.ಪಿ., ಶ್ರೀಕೃಷ್ಣ ಭಟ್ ಗುಂಡಿಮಜಲು, ಮೊದಲಾದವರು ಇದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…