ದೀಪಾವಳಿಯ ಸಂದರ್ಭ ಸರಣಿ ಸಾಮೂಹಿಕ ಗೋಪೂಜೆ ಮೂಲಕ ಸಮಾಜದಲ್ಲಿ ದೇಸೀ ಗೋ ತಳಿಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಕಳೆದ ಎಂಟು ವರ್ಷಗಳಿಂದ ಗುತ್ತಿಗಾರಿನಲ್ಲಿ ನಡೆಯುತ್ತಿದೆ.
ರಾಮಚಂದ್ರಾಪುರ ಮಠದ ಮುಳ್ಳೇರಿಯ ಮಂಡಲದ ಗುತ್ತಿಗಾರು ವಲಯದ ವೈದಿಕ ವಿಭಾಗದ ಆಶ್ರಯದಲ್ಲಿ ದೇಸೀ ಗೋವಿಗೆ ಸರಣಿ ಗೋಪೂಜೆಯ ಕಾರ್ಯಕ್ರಮ ಪ್ರತೀ ವರ್ಷ ನಡೆಯುತ್ತಿದೆ. ಈ ಬಾರಿ ಕೂಡಾ ಸರಣಿ ಗೋಪೂಜೆ ನಡೆಯಿತು. ಸುಬ್ರಹ್ಮಣ್ಯ ಘಟಕದಲ್ಲಿ ಆರಂಭಗೊಂಡ ಗೋಪೂಜಾ ಕಾರ್ಯಕ್ರಮವು ಬಳಿಕ ವಳಲಂಬೆ, ಕೊಲ್ಲಮೊಗ್ರ, ಕಮಿಲ, ಮೇಲ್ತೋಟ ,ಮರ್ಕಂಜ, ನೆಲ್ಲೂರುಕೆಮ್ರಾಜೆ ಘಟಕಗಳಲ್ಲಿ ನಡೆದು ಮೊಗ್ರ ಸತ್ಯನಾರಾಯಣ ಅವರ ಮನೆಯಲ್ಲಿ ಸಮಾರೋಪಗೊಂಡಿತು.
ಸಾಮೂಹಿಕ ಗೋಪೂಜೆಯ ಮೂಲಕ ದೇಸೀ ಗೋವಿನ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ದೇಸೀ ಗೋತಳಿ ಅಭಿವೃದ್ಧಿಯತ್ತ ಕೃಷಿಕರು ಮನಸ್ಸು ಮಾಡಬೇಕು ಎಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಕಾರ್ಯಕ್ರಮದಲ್ಲಿ ಮುರಳಿಕೃಷ್ಣ ಭಟ್ ವಳಲಂಬೆ ಅವರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಕಳೆದ ಎಂಟು ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮ ನಡೆದುಕೊಂಡು ಬರುತ್ತಿದೆ.
ಈ ಸಂದರ್ಭದಲ್ಲಿ ಪ್ರಮುಖರಾದ ಸತ್ಯನಾರಾಯಣ ಮೊಗ್ರ, ದೇವಕಿ. ಜಿ. ಭಟ್ ಪನ್ನೆ, ಶ್ರೀಕೃಷ್ಣ ಶರ್ಮ.ಪಿ., ಶ್ರೀಕೃಷ್ಣ ಭಟ್ ಗುಂಡಿಮಜಲು, ಮೊದಲಾದವರು ಇದ್ದರು.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…