ದೀಪಾವಳಿಯ ಸಂದರ್ಭ ಸರಣಿ ಸಾಮೂಹಿಕ ಗೋಪೂಜೆ ಮೂಲಕ ಸಮಾಜದಲ್ಲಿ ದೇಸೀ ಗೋ ತಳಿಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಕಳೆದ ಎಂಟು ವರ್ಷಗಳಿಂದ ಗುತ್ತಿಗಾರಿನಲ್ಲಿ ನಡೆಯುತ್ತಿದೆ.
ರಾಮಚಂದ್ರಾಪುರ ಮಠದ ಮುಳ್ಳೇರಿಯ ಮಂಡಲದ ಗುತ್ತಿಗಾರು ವಲಯದ ವೈದಿಕ ವಿಭಾಗದ ಆಶ್ರಯದಲ್ಲಿ ದೇಸೀ ಗೋವಿಗೆ ಸರಣಿ ಗೋಪೂಜೆಯ ಕಾರ್ಯಕ್ರಮ ಪ್ರತೀ ವರ್ಷ ನಡೆಯುತ್ತಿದೆ. ಈ ಬಾರಿ ಕೂಡಾ ಸರಣಿ ಗೋಪೂಜೆ ನಡೆಯಿತು. ಸುಬ್ರಹ್ಮಣ್ಯ ಘಟಕದಲ್ಲಿ ಆರಂಭಗೊಂಡ ಗೋಪೂಜಾ ಕಾರ್ಯಕ್ರಮವು ಬಳಿಕ ವಳಲಂಬೆ, ಕೊಲ್ಲಮೊಗ್ರ, ಕಮಿಲ, ಮೇಲ್ತೋಟ ,ಮರ್ಕಂಜ, ನೆಲ್ಲೂರುಕೆಮ್ರಾಜೆ ಘಟಕಗಳಲ್ಲಿ ನಡೆದು ಮೊಗ್ರ ಸತ್ಯನಾರಾಯಣ ಅವರ ಮನೆಯಲ್ಲಿ ಸಮಾರೋಪಗೊಂಡಿತು.
ಸಾಮೂಹಿಕ ಗೋಪೂಜೆಯ ಮೂಲಕ ದೇಸೀ ಗೋವಿನ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ದೇಸೀ ಗೋತಳಿ ಅಭಿವೃದ್ಧಿಯತ್ತ ಕೃಷಿಕರು ಮನಸ್ಸು ಮಾಡಬೇಕು ಎಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಕಾರ್ಯಕ್ರಮದಲ್ಲಿ ಮುರಳಿಕೃಷ್ಣ ಭಟ್ ವಳಲಂಬೆ ಅವರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಕಳೆದ ಎಂಟು ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮ ನಡೆದುಕೊಂಡು ಬರುತ್ತಿದೆ.
ಈ ಸಂದರ್ಭದಲ್ಲಿ ಪ್ರಮುಖರಾದ ಸತ್ಯನಾರಾಯಣ ಮೊಗ್ರ, ದೇವಕಿ. ಜಿ. ಭಟ್ ಪನ್ನೆ, ಶ್ರೀಕೃಷ್ಣ ಶರ್ಮ.ಪಿ., ಶ್ರೀಕೃಷ್ಣ ಭಟ್ ಗುಂಡಿಮಜಲು, ಮೊದಲಾದವರು ಇದ್ದರು.
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…
ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…