Advertisement
ಸುದ್ದಿಗಳು

ಸರಣಿ ಗೋಪೂಜೆ ಮೂಲಕ ದೇಸೀ ಗೋವಿನ ಬಗ್ಗೆ ಜಾಗೃತಿ | ವಿಶೇಷ ಅಭಿಯಾನಕ್ಕೆ ಎಂಟು ವರ್ಷ.. ! |

Share

ದೀಪಾವಳಿಯ ಸಂದರ್ಭ ಸರಣಿ ಸಾಮೂಹಿಕ ಗೋಪೂಜೆ ಮೂಲಕ ಸಮಾಜದಲ್ಲಿ  ದೇಸೀ ಗೋ ತಳಿಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಕಳೆದ ಎಂಟು ವರ್ಷಗಳಿಂದ ಗುತ್ತಿಗಾರಿನಲ್ಲಿ  ನಡೆಯುತ್ತಿದೆ.

ರಾಮಚಂದ್ರಾಪುರ ಮಠದ ಮುಳ್ಳೇರಿಯ ಮಂಡಲದ  ಗುತ್ತಿಗಾರು ವಲಯದ ವೈದಿಕ ವಿಭಾಗದ ಆಶ್ರಯದಲ್ಲಿ ದೇಸೀ ಗೋವಿಗೆ ಸರಣಿ ಗೋಪೂಜೆಯ ಕಾರ್ಯಕ್ರಮ ಪ್ರತೀ ವರ್ಷ ನಡೆಯುತ್ತಿದೆ. ಈ ಬಾರಿ ಕೂಡಾ ಸರಣಿ ಗೋಪೂಜೆ ನಡೆಯಿತು.  ಸುಬ್ರಹ್ಮಣ್ಯ ಘಟಕದಲ್ಲಿ  ಆರಂಭಗೊಂಡ ಗೋಪೂಜಾ ಕಾರ್ಯಕ್ರಮವು  ಬಳಿಕ ವಳಲಂಬೆ, ಕೊಲ್ಲಮೊಗ್ರ, ಕಮಿಲ, ಮೇಲ್ತೋಟ ,ಮರ್ಕಂಜ, ನೆಲ್ಲೂರುಕೆಮ್ರಾಜೆ ಘಟಕಗಳಲ್ಲಿ ನಡೆದು ಮೊಗ್ರ ಸತ್ಯನಾರಾಯಣ ಅವರ ಮನೆಯಲ್ಲಿ ಸಮಾರೋಪಗೊಂಡಿತು.

Advertisement

 

Advertisement

 

Advertisement

ಸಾಮೂಹಿಕ ಗೋಪೂಜೆಯ ಮೂಲಕ ದೇಸೀ ಗೋವಿನ ಬಗ್ಗೆ ಜಾಗೃತಿ ಮೂಡಿಸುವುದು  ಹಾಗೂ ದೇಸೀ ಗೋತಳಿ ಅಭಿವೃದ್ಧಿಯತ್ತ ಕೃಷಿಕರು ಮನಸ್ಸು ಮಾಡಬೇಕು ಎಂಬುದು  ಈ ಕಾರ್ಯಕ್ರಮದ ಉದ್ದೇಶವಾಗಿದೆ.  ಕಾರ್ಯಕ್ರಮದಲ್ಲಿ  ಮುರಳಿಕೃಷ್ಣ ಭಟ್‌ ವಳಲಂಬೆ ಅವರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಕಳೆದ ಎಂಟು ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮ ನಡೆದುಕೊಂಡು ಬರುತ್ತಿದೆ.

 

ಈ ಸಂದರ್ಭದಲ್ಲಿ ಪ್ರಮುಖರಾದ ಸತ್ಯನಾರಾಯಣ ಮೊಗ್ರ, ದೇವಕಿ. ಜಿ. ಭಟ್ ಪನ್ನೆ, ಶ್ರೀಕೃಷ್ಣ ಶರ್ಮ.ಪಿ.,  ಶ್ರೀಕೃಷ್ಣ ಭಟ್ ಗುಂಡಿಮಜಲು, ಮೊದಲಾದವರು ಇದ್ದರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

14 hours ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

15 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

1 day ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

3 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

3 days ago