ದೀಪಾವಳಿಯ ಸಂದರ್ಭ ಸರಣಿ ಸಾಮೂಹಿಕ ಗೋಪೂಜೆ ಮೂಲಕ ಸಮಾಜದಲ್ಲಿ ದೇಸೀ ಗೋ ತಳಿಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಕಳೆದ ಎಂಟು ವರ್ಷಗಳಿಂದ ಗುತ್ತಿಗಾರಿನಲ್ಲಿ ನಡೆಯುತ್ತಿದೆ.
ರಾಮಚಂದ್ರಾಪುರ ಮಠದ ಮುಳ್ಳೇರಿಯ ಮಂಡಲದ ಗುತ್ತಿಗಾರು ವಲಯದ ವೈದಿಕ ವಿಭಾಗದ ಆಶ್ರಯದಲ್ಲಿ ದೇಸೀ ಗೋವಿಗೆ ಸರಣಿ ಗೋಪೂಜೆಯ ಕಾರ್ಯಕ್ರಮ ಪ್ರತೀ ವರ್ಷ ನಡೆಯುತ್ತಿದೆ. ಈ ಬಾರಿ ಕೂಡಾ ಸರಣಿ ಗೋಪೂಜೆ ನಡೆಯಿತು. ಸುಬ್ರಹ್ಮಣ್ಯ ಘಟಕದಲ್ಲಿ ಆರಂಭಗೊಂಡ ಗೋಪೂಜಾ ಕಾರ್ಯಕ್ರಮವು ಬಳಿಕ ವಳಲಂಬೆ, ಕೊಲ್ಲಮೊಗ್ರ, ಕಮಿಲ, ಮೇಲ್ತೋಟ ,ಮರ್ಕಂಜ, ನೆಲ್ಲೂರುಕೆಮ್ರಾಜೆ ಘಟಕಗಳಲ್ಲಿ ನಡೆದು ಮೊಗ್ರ ಸತ್ಯನಾರಾಯಣ ಅವರ ಮನೆಯಲ್ಲಿ ಸಮಾರೋಪಗೊಂಡಿತು.
ಸಾಮೂಹಿಕ ಗೋಪೂಜೆಯ ಮೂಲಕ ದೇಸೀ ಗೋವಿನ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ದೇಸೀ ಗೋತಳಿ ಅಭಿವೃದ್ಧಿಯತ್ತ ಕೃಷಿಕರು ಮನಸ್ಸು ಮಾಡಬೇಕು ಎಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಕಾರ್ಯಕ್ರಮದಲ್ಲಿ ಮುರಳಿಕೃಷ್ಣ ಭಟ್ ವಳಲಂಬೆ ಅವರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಕಳೆದ ಎಂಟು ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮ ನಡೆದುಕೊಂಡು ಬರುತ್ತಿದೆ.
ಈ ಸಂದರ್ಭದಲ್ಲಿ ಪ್ರಮುಖರಾದ ಸತ್ಯನಾರಾಯಣ ಮೊಗ್ರ, ದೇವಕಿ. ಜಿ. ಭಟ್ ಪನ್ನೆ, ಶ್ರೀಕೃಷ್ಣ ಶರ್ಮ.ಪಿ., ಶ್ರೀಕೃಷ್ಣ ಭಟ್ ಗುಂಡಿಮಜಲು, ಮೊದಲಾದವರು ಇದ್ದರು.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…