Advertisement
ಸುದ್ದಿಗಳು

ಸರಣಿ ಗೋಪೂಜೆ ಮೂಲಕ ದೇಸೀ ಗೋವಿನ ಬಗ್ಗೆ ಜಾಗೃತಿ | ವಿಶೇಷ ಅಭಿಯಾನಕ್ಕೆ ಎಂಟು ವರ್ಷ.. ! |

Share

ದೀಪಾವಳಿಯ ಸಂದರ್ಭ ಸರಣಿ ಸಾಮೂಹಿಕ ಗೋಪೂಜೆ ಮೂಲಕ ಸಮಾಜದಲ್ಲಿ  ದೇಸೀ ಗೋ ತಳಿಯ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಕಳೆದ ಎಂಟು ವರ್ಷಗಳಿಂದ ಗುತ್ತಿಗಾರಿನಲ್ಲಿ  ನಡೆಯುತ್ತಿದೆ.

ರಾಮಚಂದ್ರಾಪುರ ಮಠದ ಮುಳ್ಳೇರಿಯ ಮಂಡಲದ  ಗುತ್ತಿಗಾರು ವಲಯದ ವೈದಿಕ ವಿಭಾಗದ ಆಶ್ರಯದಲ್ಲಿ ದೇಸೀ ಗೋವಿಗೆ ಸರಣಿ ಗೋಪೂಜೆಯ ಕಾರ್ಯಕ್ರಮ ಪ್ರತೀ ವರ್ಷ ನಡೆಯುತ್ತಿದೆ. ಈ ಬಾರಿ ಕೂಡಾ ಸರಣಿ ಗೋಪೂಜೆ ನಡೆಯಿತು.  ಸುಬ್ರಹ್ಮಣ್ಯ ಘಟಕದಲ್ಲಿ  ಆರಂಭಗೊಂಡ ಗೋಪೂಜಾ ಕಾರ್ಯಕ್ರಮವು  ಬಳಿಕ ವಳಲಂಬೆ, ಕೊಲ್ಲಮೊಗ್ರ, ಕಮಿಲ, ಮೇಲ್ತೋಟ ,ಮರ್ಕಂಜ, ನೆಲ್ಲೂರುಕೆಮ್ರಾಜೆ ಘಟಕಗಳಲ್ಲಿ ನಡೆದು ಮೊಗ್ರ ಸತ್ಯನಾರಾಯಣ ಅವರ ಮನೆಯಲ್ಲಿ ಸಮಾರೋಪಗೊಂಡಿತು.

 

 

ಸಾಮೂಹಿಕ ಗೋಪೂಜೆಯ ಮೂಲಕ ದೇಸೀ ಗೋವಿನ ಬಗ್ಗೆ ಜಾಗೃತಿ ಮೂಡಿಸುವುದು  ಹಾಗೂ ದೇಸೀ ಗೋತಳಿ ಅಭಿವೃದ್ಧಿಯತ್ತ ಕೃಷಿಕರು ಮನಸ್ಸು ಮಾಡಬೇಕು ಎಂಬುದು  ಈ ಕಾರ್ಯಕ್ರಮದ ಉದ್ದೇಶವಾಗಿದೆ.  ಕಾರ್ಯಕ್ರಮದಲ್ಲಿ  ಮುರಳಿಕೃಷ್ಣ ಭಟ್‌ ವಳಲಂಬೆ ಅವರು ಪೂಜಾ ಕಾರ್ಯಕ್ರಮ ನೆರವೇರಿಸಿದರು. ಕಳೆದ ಎಂಟು ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮ ನಡೆದುಕೊಂಡು ಬರುತ್ತಿದೆ.

 

ಈ ಸಂದರ್ಭದಲ್ಲಿ ಪ್ರಮುಖರಾದ ಸತ್ಯನಾರಾಯಣ ಮೊಗ್ರ, ದೇವಕಿ. ಜಿ. ಭಟ್ ಪನ್ನೆ, ಶ್ರೀಕೃಷ್ಣ ಶರ್ಮ.ಪಿ.,  ಶ್ರೀಕೃಷ್ಣ ಭಟ್ ಗುಂಡಿಮಜಲು, ಮೊದಲಾದವರು ಇದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

4 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

5 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

6 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago