ಸರ್ಕಾರಿ ಗೋಶಾಲೆ ಶೀಘ್ರದಲ್ಲಿ ಪ್ರಾರಂಭಿಸಲು ಸೂಚನೆ |

October 12, 2023
8:48 PM
ಕುಮಾರಾಧಾರ ಸರ್ಕಾರಿ ಗೋಶಾಲೆ ಇದೇ ವರ್ಷ ಪ್ರಾರಂಭವಾಗಿದ್ದು, ಸದ್ಯ 98 ಜಾನುವಾರುಗಳನ್ನು ಸಾಕಣೆ ಮಾಡಲಾಗುತ್ತಿದೆ. ಮುಂದೆ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಸರ್ಕಾರಿ ಗೋಶಾಲೆ ಶೀಘ್ರದಲ್ಲಿ ಪ್ರಾರಂಭಿಸಲು ಸೂಚಿಸಲಾಗಿದೆ.

ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಸರ್ಕಾರಿ ಗೋಶಾಲೆ ಶೀಘ್ರದಲ್ಲಿ ಪ್ರಾರಂಭಿಸಬೇಕು ಎಂದು ಜಿಲ್ಲಾ ಪಂಚಾಯತ್ ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್.ಕೆ ಸೂಚಿಸಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಕುಮಾರಾಧಾರ ಸರ್ಕಾರಿ ಗೋಶಾಲೆ ಇದೇ ವರ್ಷ ಪ್ರಾರಂಭವಾಗಿದ್ದು, ಸದ್ಯ 98 ಜಾನುವಾರುಗಳನ್ನು ಸಾಕಣೆ ಮಾಡಲಾಗುತ್ತಿದೆ. ಮೆನ್ನಬೆಟ್ಟು ಗ್ರಾಮದ 19.80 ಎಕ್ರೆ ಗೋಮಾಳ ಪ್ರದೇಶವನ್ನು ಗೋಶಾಲೆಗೆ ಕಾಯ್ದೆರಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು. ಪ್ರಾಣಿಗಳ ರಕ್ಷಣೆ ಮತ್ತು ಪುನರ್ವಸತಿ ಕೇಂದ್ರ ಹಾಗೂ ಆಸ್ಪತ್ರೆಯ ಉದ್ದೇಶವಾಗಿದೆ ಮತ್ತು ಪ್ರಾಣಿ ಕಲ್ಯಾಣ ಕಾರ್ಯಕರ್ತರನ್ನು ಗುರುತಿಸಿ ತಾಲೂಕು ಪ್ರಾಣಿ ಮಿತ್ರ ತಂಡ ರಚನೆ ಮಾಡಲು ಎಲ್ಲ ತಾಲೂಕ ಮುಖ್ಯ ಪಶು ವೈದ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಪ್ರಾಣಿ ಕಲ್ಯಾಣ ಕಾಯ್ದೆ ಮತ್ತು ನಿಯಮಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಬೇಕು. ಕಾನೂನುಬಾಹಿರ ಕಸಾಯಿ ಖಾನೆಗಳನ್ನು ನಡೆಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕಾಗ ಅದರ ಬಗ್ಗೆ ಕ್ರಮವನ್ನು ತೆಗೆದುಕೊಳ್ಳಬೇಕು ಮತ್ತು ಪೆಟ್ ಶಾಪ್ ನಡೆಸುತ್ತಿರುವವರು ಕಡ್ಡಾಯವಾಗಿ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಬೇಕು ಹಾಗೂ ಆಂಟಿ ಕ್ರುಯಾಲಿಟಿ ಇನ್ಸ್ಪೆಕ್ಟರ್ ನೇಮಕ ಮಾಡಲು ಮಾರ್ಗಸೂಚಿ ನೀಡಿದರು. ರೈತರು ಬೆಳೆಗಳನ್ನು ರಕ್ಷಿಸಿಕೊಳ್ಳಲು ಹೈ ಟೆನ್ಷನ್ ವಿದ್ಯುತ್ ಬೇಲಿಗಳ ಬಗ್ಗೆ ತಪಾಸನೆ ನಡೆಸಿ ಅಗತ್ಯ ಕ್ರಮ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಥೋನಿ ಎಸ್ ಮರಿಯಪ್ಪ, ಜಿಲ್ಲಾ ಕಾನೂನು ಪ್ರಾಣಿ ಕಲ್ಯಾಣ ಸಲಹೆಗಾರ ಸುಮಾ ಆರ್ ನಾಯಕ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror