Advertisement
ಸುದ್ದಿಗಳು

ಸರ್ಕಾರಿ ಗೋಶಾಲೆ ಶೀಘ್ರದಲ್ಲಿ ಪ್ರಾರಂಭಿಸಲು ಸೂಚನೆ |

Share

ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಸರ್ಕಾರಿ ಗೋಶಾಲೆ ಶೀಘ್ರದಲ್ಲಿ ಪ್ರಾರಂಭಿಸಬೇಕು ಎಂದು ಜಿಲ್ಲಾ ಪಂಚಾಯತ್ ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್.ಕೆ ಸೂಚಿಸಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಕುಮಾರಾಧಾರ ಸರ್ಕಾರಿ ಗೋಶಾಲೆ ಇದೇ ವರ್ಷ ಪ್ರಾರಂಭವಾಗಿದ್ದು, ಸದ್ಯ 98 ಜಾನುವಾರುಗಳನ್ನು ಸಾಕಣೆ ಮಾಡಲಾಗುತ್ತಿದೆ. ಮೆನ್ನಬೆಟ್ಟು ಗ್ರಾಮದ 19.80 ಎಕ್ರೆ ಗೋಮಾಳ ಪ್ರದೇಶವನ್ನು ಗೋಶಾಲೆಗೆ ಕಾಯ್ದೆರಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು. ಪ್ರಾಣಿಗಳ ರಕ್ಷಣೆ ಮತ್ತು ಪುನರ್ವಸತಿ ಕೇಂದ್ರ ಹಾಗೂ ಆಸ್ಪತ್ರೆಯ ಉದ್ದೇಶವಾಗಿದೆ ಮತ್ತು ಪ್ರಾಣಿ ಕಲ್ಯಾಣ ಕಾರ್ಯಕರ್ತರನ್ನು ಗುರುತಿಸಿ ತಾಲೂಕು ಪ್ರಾಣಿ ಮಿತ್ರ ತಂಡ ರಚನೆ ಮಾಡಲು ಎಲ್ಲ ತಾಲೂಕ ಮುಖ್ಯ ಪಶು ವೈದ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಪ್ರಾಣಿ ಕಲ್ಯಾಣ ಕಾಯ್ದೆ ಮತ್ತು ನಿಯಮಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಬೇಕು. ಕಾನೂನುಬಾಹಿರ ಕಸಾಯಿ ಖಾನೆಗಳನ್ನು ನಡೆಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕಾಗ ಅದರ ಬಗ್ಗೆ ಕ್ರಮವನ್ನು ತೆಗೆದುಕೊಳ್ಳಬೇಕು ಮತ್ತು ಪೆಟ್ ಶಾಪ್ ನಡೆಸುತ್ತಿರುವವರು ಕಡ್ಡಾಯವಾಗಿ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಬೇಕು ಹಾಗೂ ಆಂಟಿ ಕ್ರುಯಾಲಿಟಿ ಇನ್ಸ್ಪೆಕ್ಟರ್ ನೇಮಕ ಮಾಡಲು ಮಾರ್ಗಸೂಚಿ ನೀಡಿದರು. ರೈತರು ಬೆಳೆಗಳನ್ನು ರಕ್ಷಿಸಿಕೊಳ್ಳಲು ಹೈ ಟೆನ್ಷನ್ ವಿದ್ಯುತ್ ಬೇಲಿಗಳ ಬಗ್ಗೆ ತಪಾಸನೆ ನಡೆಸಿ ಅಗತ್ಯ ಕ್ರಮ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಥೋನಿ ಎಸ್ ಮರಿಯಪ್ಪ, ಜಿಲ್ಲಾ ಕಾನೂನು ಪ್ರಾಣಿ ಕಲ್ಯಾಣ ಸಲಹೆಗಾರ ಸುಮಾ ಆರ್ ನಾಯಕ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

5 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

5 hours ago

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ

2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…

13 hours ago

ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ

ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…

13 hours ago

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

2 days ago