Advertisement
ಸುದ್ದಿಗಳು

ಸರ್ಕಾರಿ ಗೋಶಾಲೆ ಶೀಘ್ರದಲ್ಲಿ ಪ್ರಾರಂಭಿಸಲು ಸೂಚನೆ |

Share

ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಸರ್ಕಾರಿ ಗೋಶಾಲೆ ಶೀಘ್ರದಲ್ಲಿ ಪ್ರಾರಂಭಿಸಬೇಕು ಎಂದು ಜಿಲ್ಲಾ ಪಂಚಾಯತ್ ಪ್ರಭಾರ ಜಿಲ್ಲಾಧಿಕಾರಿ ಡಾ. ಆನಂದ್.ಕೆ ಸೂಚಿಸಿದರು.

ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ದಯಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಕುಮಾರಾಧಾರ ಸರ್ಕಾರಿ ಗೋಶಾಲೆ ಇದೇ ವರ್ಷ ಪ್ರಾರಂಭವಾಗಿದ್ದು, ಸದ್ಯ 98 ಜಾನುವಾರುಗಳನ್ನು ಸಾಕಣೆ ಮಾಡಲಾಗುತ್ತಿದೆ. ಮೆನ್ನಬೆಟ್ಟು ಗ್ರಾಮದ 19.80 ಎಕ್ರೆ ಗೋಮಾಳ ಪ್ರದೇಶವನ್ನು ಗೋಶಾಲೆಗೆ ಕಾಯ್ದೆರಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು. ಪ್ರಾಣಿಗಳ ರಕ್ಷಣೆ ಮತ್ತು ಪುನರ್ವಸತಿ ಕೇಂದ್ರ ಹಾಗೂ ಆಸ್ಪತ್ರೆಯ ಉದ್ದೇಶವಾಗಿದೆ ಮತ್ತು ಪ್ರಾಣಿ ಕಲ್ಯಾಣ ಕಾರ್ಯಕರ್ತರನ್ನು ಗುರುತಿಸಿ ತಾಲೂಕು ಪ್ರಾಣಿ ಮಿತ್ರ ತಂಡ ರಚನೆ ಮಾಡಲು ಎಲ್ಲ ತಾಲೂಕ ಮುಖ್ಯ ಪಶು ವೈದ್ಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಪ್ರಾಣಿ ಕಲ್ಯಾಣ ಕಾಯ್ದೆ ಮತ್ತು ನಿಯಮಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಬೇಕು. ಕಾನೂನುಬಾಹಿರ ಕಸಾಯಿ ಖಾನೆಗಳನ್ನು ನಡೆಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕಾಗ ಅದರ ಬಗ್ಗೆ ಕ್ರಮವನ್ನು ತೆಗೆದುಕೊಳ್ಳಬೇಕು ಮತ್ತು ಪೆಟ್ ಶಾಪ್ ನಡೆಸುತ್ತಿರುವವರು ಕಡ್ಡಾಯವಾಗಿ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಬೇಕು ಹಾಗೂ ಆಂಟಿ ಕ್ರುಯಾಲಿಟಿ ಇನ್ಸ್ಪೆಕ್ಟರ್ ನೇಮಕ ಮಾಡಲು ಮಾರ್ಗಸೂಚಿ ನೀಡಿದರು. ರೈತರು ಬೆಳೆಗಳನ್ನು ರಕ್ಷಿಸಿಕೊಳ್ಳಲು ಹೈ ಟೆನ್ಷನ್ ವಿದ್ಯುತ್ ಬೇಲಿಗಳ ಬಗ್ಗೆ ತಪಾಸನೆ ನಡೆಸಿ ಅಗತ್ಯ ಕ್ರಮ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂಥೋನಿ ಎಸ್ ಮರಿಯಪ್ಪ, ಜಿಲ್ಲಾ ಕಾನೂನು ಪ್ರಾಣಿ ಕಲ್ಯಾಣ ಸಲಹೆಗಾರ ಸುಮಾ ಆರ್ ನಾಯಕ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

6 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

14 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

1 day ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

1 day ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

2 days ago